AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: NIA ದಾಳಿ ವೇಳೆ ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ

ಪ್ರಕರಣವೊಂದರ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ನಡೆಸಿದ ದಾಳಿ ವೇಳೆ ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆಯಾಗಿದ್ದಾರೆ. ಸದ್ಯ ಸಿಕ್ಕಿಬಿದ್ದ ಬಾಂಗ್ಲಾ ವಲಸಿಗರನ್ನು ಎನ್​ಐಎ ಅಧಿಕಾರಿಗಳು ಬೆಳ್ಳಂದೂರು ಪೊಲೀಸರಿಗೆ ಒಪ್ಪಿಸಿದ್ದು, ವಿಚಾರಣೆ ನಡೆದಿದೆ.

Bengaluru News:  NIA ದಾಳಿ ವೇಳೆ ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ
ಎನ್ಐಎ (ಸಂಗ್ರಹ ಚಿತ್ರ)
ರಾಚಪ್ಪಾಜಿ ನಾಯ್ಕ್
| Updated By: ರಮೇಶ್ ಬಿ. ಜವಳಗೇರಾ|

Updated on:Aug 08, 2023 | 1:18 PM

Share

ಬೆಂಗಳೂರು, (ಆಗಸ್ಟ್ 08): ರಾಷ್ಟ್ರೀಯ ತನಿಖಾ ಸಂಸ್ಥೆ(NIA) ದಾಳಿ ವೇಳೆ ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರು (Bangladeshi nationals) ಪತ್ತೆಯಾಗಿದ್ದಾರೆ. ಪ್ರಕರಣವೊಂದರ ಸಂಬಂಧ ಬೆಂಗಳೂರಿಗೆ ಭೇಟಿ ನೀಡಿದ್ದ ಎನ್ಐಎ, ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಳಿ ಮಾಡಿದೆ. ಈ ವೇಳೆ ಬಾಂಗ್ಲಾದ ಮೂವರು ಪ್ರಜೆಗಳು ಅಕ್ರಮವಾಗಿ ನೆಲೆಸಿರುವುದು ಮಾಹಿತಿ ಪತ್ತೆಯಾಗಿದೆ. ಅಕ್ರಮ ಬಾಂಗ್ಲಾ ವಲಸಿಗರಾದ ಖಲೀಲ್ ಚಪರಾಸಿ, ಅಬ್ದುಲ್ ಖಾದಿರ್, ಮೊಹಮ್ಮದ್ ಜಾಹಿದ್ ಎನ್ನುವವರನ್ನು ಎನ್​ಐಎ ಅಧಿಕಾರಿಗಳು ಹಿಡಿದು ಬೆಳ್ಳಂದೂರು ಪೊಲೀಸರಿಗೆ ಒಪ್ಪಿಸಿದ್ದಾರೆ. ಇನ್ನು ಈ ಸಂಬಂಧ ಬೆಳ್ಳಂದೂರು ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ವಿಚಾರಣೆಗೊಳಪಸಿಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲಿ ಶಂಕಿತ ಉಗ್ರರ ಬಂಧನ ಪ್ರಕರಣ: ಐವರನ್ನು ಶೀಘ್ರದಲ್ಲೇ ವಶಕ್ಕೆ ಪಡೆಯಲಿರುವ ಎನ್ಐಎ ಅಧಿಕಾರಿಗಳು

ಕರ್ನಾಟಕದಲ್ಲಿ ಸುಮಾರು 3 ಲಕ್ಷ ಬಾಂಗ್ಲಾ ವಲಸಿಗರು  ಅಕ್ರಮವಾಗಿ ಇರುವುದು ಪತ್ತೆಯಾಗಿದ್ದು, ಬೆಂಗಳೂರು ನಗರ, ಹೊರವಲಯದಲ್ಲೇ ಸುಮಾರು 2 ಲಕ್ಷ ವಲಸಿಗರು ಇದ್ದಾರೆ ಎಂದು ಹೇಳಲಾಗುತ್ತಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಇತರೆ ಪ್ರದೇಶಗಳಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ವಲಸಿಗರು ಬೇರೆ ಬೇರೆ ರಾಜ್ಯಗಳ ವಿಳಾಸದಲ್ಲಿ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿಕೊಂಡು ನೆಲೆಯೂರಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 1:07 pm, Tue, 8 August 23

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ