AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ನಾಯಕರಿಗೆ ಚಿನ್ನ ಬೇಕೆಂದು ವ್ಯಾಪಾರಿಗೆ 3 ಕೆಜಿ ಚಿನ್ನ ಮತ್ತು 80 ಲಕ್ಷ ರೂ. ವಂಚನೆ ಆರೋಪ; ಪ್ರಕರಣ​ ದಾಖಲು

ಚುನಾವಣೆಯಲ್ಲಿ ರಾಜಕೀಯ ನಾಯಕರಿಗೆ ಚಿನ್ನ ಬೇಕೆಂದು ಹೇಳಿ ಕೆಆರ್ ಮಾರ್ಕೆಟ್ ಬಳಿಯ ಚಿನ್ನದ ವ್ಯಾಪಾರಿಗೆ 3 ಕೆಜಿ ಚಿನ್ನ ಮತ್ತು 80 ಲಕ್ಷ ಹಣ ವಂಚನೆ ಮಾಡಿರುವ ಕುರಿತು ಸಿಟಿ ಮಾರ್ಕೆಟ್ ಪೋಲಿಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ರಾಜಕೀಯ ನಾಯಕರಿಗೆ ಚಿನ್ನ ಬೇಕೆಂದು ವ್ಯಾಪಾರಿಗೆ 3 ಕೆಜಿ ಚಿನ್ನ ಮತ್ತು 80 ಲಕ್ಷ ರೂ. ವಂಚನೆ ಆರೋಪ; ಪ್ರಕರಣ​ ದಾಖಲು
ಪ್ರಾತಿನಿಧಿಕ ಚಿತ್ರ
ಕಿರಣ್ ಹನುಮಂತ್​ ಮಾದಾರ್
|

Updated on: May 05, 2023 | 9:51 AM

Share

ಬೆಂಗಳೂರು: ಚುನಾವಣೆಯಲ್ಲಿ ರಾಜಕೀಯ ನಾಯಕರಿಗೆ ಚಿನ್ನ ಬೇಕೆಂದು ಹೇಳಿ ಕೆಆರ್ ಮಾರ್ಕೆಟ್ ಬಳಿಯ ಚಿನ್ನದ ವ್ಯಾಪಾರಿಗೆ 3 ಕೆಜಿ ಚಿನ್ನ ಮತ್ತು 80 ಲಕ್ಷ ಹಣ ವಂಚನೆ ಮಾಡಿರುವ ಕುರಿತು ಸಿಟಿ ಮಾರ್ಕೆಟ್ ಪೋಲಿಸ್ ಠಾಣೆ(City Market Police Station)ಯಲ್ಲಿ ಕೇಸ್ ದಾಖಲಾಗಿದೆ. ವಿಶಾಲ್ ಜೈನ್ ಎಂಬ ಉದ್ಯಮಿಗೆ ವಂಚಿಸಿರುವ ಅರೋಪಿಗಳು. ಅಭಯ್, ಕಿರಣ್, ಸಂಕೇತ್, ನವೀನ್ ಮತ್ತು ಚರಣ್ ಎಂಬ ವ್ಯಕ್ತಿಗಳಿಂದ ವಂಚನೆ ಆರೋಪ ಕೇಳಿಬಂದಿದೆ. ಮೊದಲಿಗೆ ಒಂದು ಕೆಜಿ ಚಿನ್ನ ಬೇಕು ಎಂದು ಪಡೆದಿದ್ದಾರೆ. ಬಳಿಕ ಶಾಂಗ್ರೀಲಾ ಹೋಟೆಲ್​ನಲ್ಲಿ ಭೇಟಿ ಮಾಡಿ ರಾಜಕೀಯ ನಾಯಕರ ಪಿಎ ಜೊತೆ ಮಾತನಾಡಿದಂತೆ ಮಾಡಿ, ಮತ್ತೆ ಚಿನ್ನವನ್ನ ಪಡೆದಿದ್ದಾರೆ.

ಹೀಗೆ ಹಂತ ಹಂತವಾಗಿ ಒಟ್ಟು ಮೂರು ಕೆಜಿಗೂ ಅಧಿಕ ಚಿನ್ನ ಪಡೆದಿದ್ದಾರಂತೆ. ಕೊನೆಗೆ ಹಣ ಕೇಳಿದಾಗ, ನಮ್ಮ ಬಳಿ 8 ಕೆಜಿ ಚಿನ್ನದ ಗಟ್ಟಿ ಇದೆ. ಅದನ್ನು ತೆಗೆದುಕೊಂಡು ಉಳಿದ ಹಣ ವಾಪಸ್ಸು ಕೊಡಿ ಎಂದಿದ್ದಾರೆ. ಇದನ್ನು ನಂಬಿ ಎಂಟು ಕೆಜಿ ಪಡೆದು ಐವತ್ತು ಲಕ್ಷ ಹಣ ವಾಪಸ್ಸು ನೀಡಿದ್ದರು. ಬಳಿಕ ಮನೆಗೆ ಬಂದು ನೋಡಿದಾಗ ಅದು ನಕಲಿ ಚಿನ್ನ ಎನ್ನುವುದು ಗೊತ್ತಾಗಿದೆ. ಈ ವಿಚಾರ ಹೇಳಿ ಪ್ರಶ್ನೆ ಉದ್ಯಮಿ ಮಾಡಿದ್ದಾರೆ. ಈ ವೇಳೆ ನಾವು ಕೊಟ್ಟಿದ್ದು ಚಿನ್ನ ನೀವೆ ಕಬ್ಬಿಣ ಇಟ್ಟು, ನಾಟಕ ಮಾಡುತ್ತಿರ ಎಂದು ಬೆದರಿಕೆ ಹಾಕಿದ್ದಾರೆ.

ಇದನ್ನೂ ಓದಿ:Gold Rates: ಚಿನ್ನ ಮತ್ತೆ ದುಬಾರಿ; ಎರಡು ದಿನದಲ್ಲಿ 1,300 ರೂನಷ್ಟು ಏರಿಕೆ; ಬೆಳ್ಳಿಯೂ ಹಿಂದುಳಿದಿಲ್ಲ; ಇವತ್ತಿನ ದರಗಳೆಷ್ಟು, ನೋಡಿ ವಿವರ

ಇದಾದ ಬಳಿಕ ಕೊನೆಗೆ ರಾಜಕೀಯ ನಾಯಕರ ಹೆಸರು ಹೇಳಿ 30 ಲಕ್ಷ ಹಣ ವಸೂಲಿ ಮಾಡಿದ್ದು, ಈ ಮೂಲಕ ಒಟ್ಟು 3 ಕೆಜಿ ಚಿನ್ನದ ಆಭರಣ ಮತ್ತು 80 ಲಕ್ಷ ಹಣ ವಸೂಲಿ ಮಾಡಿ ವಂಚನೆ ಮಾಡಿದ್ದಾರೆ. ಈ ಘಟನೆ ಸಂಬಂಧ ವಿಶ್ವೇಶ್ವರ ಪುರ ಪೊಲೀಸರ ಮೂಲಕ ರಾಜಿಗೆ ಯತ್ನಿಸಿದ್ದಾರೆ. ಅಲ್ಲಿಯೂ ಚಿನ್ನ ಪಡೆದಿದ್ದಾಗಿ ಒಪ್ಪಿ ನಂತರ ವಾಪಸ್ಸು ನೀಡದೆ ವಂಚಿಸಿದ್ದಾರೆ. ಇನ್ನು ಈ ಎಲ್ಲ ಘಟನೆ ಸಂಬಂಧಿಸಿದಂತೆ ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಿದ್ದಾರೆ. ಈ ಕುರಿತು ಪೊಲೀಸರು ಅರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!