AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐರಾವತ ಬಸ್​ನಲ್ಲಿ ಕಳ್ಳರ ಕೈಚಳಕ: 3 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ

ಬಸ್​ನಲ್ಲಿ ಪ್ರಯಾಣಿಸುವವರೇ ಎಚ್ಚರದಿಂದ ಇರುವುದು ಒಳಿತು, ಹೌದು ಸ್ವಲ್ಪ ಯಾಮಾರಿದರೂ ನಿಮ್ಮ ವಸ್ತುಗಳು ಮಾಯವಾಗುತ್ತದೆ. ಅಂತಹದ್ದೆ ಒಂದು ಘಟನೆ ಇದೀಗ ಉಡುಪಿಯಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಐರಾವತ ಬಸ್​ನಲ್ಲಿ ನಡೆದಿದೆ. ಅಂದಾಜು ಮೂರು ಲಕ್ಷ ಬೆಲೆ ಬಾಳುವ ಚಿನ್ನಾಭರಣವನ್ನು ಕಳ್ಳ ಎಗರಿಸಿ ಎಸ್ಕೇಫ್​ ಆಗಿದ್ದಾನೆ.

ಐರಾವತ ಬಸ್​ನಲ್ಲಿ ಕಳ್ಳರ ಕೈಚಳಕ: 3 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ
ಸಾಂದರ್ಭಿಕ ಚಿತ್ರ
ಬಿ ಮೂರ್ತಿ, ನೆಲಮಂಗಲ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Oct 15, 2023 | 6:59 PM

Share

ಬೆಂಗಳೂರು, ಅ.15: ಉಡುಪಿಯಿಂದ ಬೆಂಗಳೂರಿಗೆ ಐರಾವತ ಬಸ್(Airavat Bus)​ನಲ್ಲಿ ಬರುತ್ತಿದ್ದ ಪ್ರಯಾಣಿಕನ ಬಳಿ ಇದ್ದ 3 ಲಕ್ಷ ಮೌಲ್ಯದ 60 ಗ್ರಾಂ ಬಂಗಾರದ ಕಂಠಿಹಾರ ಹಾಗೂ ಎರಡು ಉಂಗುರಗಳನ್ನು ಕಳ್ಳತನ ಮಾಡಿದ ಕುರಿತು ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಘವೇಂದ್ರ ಎಂಬುವರಿಗೆ ಸೇರಿದ ಚಿನ್ನಾಭರಣ ಇದಾಗಿದ್ದು, ಜಾಲಹಳ್ಳಿ ಕ್ರಾಸ್ ಬಳಿ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಭಟ್ಕಳ ಬಂದರಿನಲ್ಲಿ ನಿಲ್ಲಿಸಿದ್ದ ಬೋಟ್​ನಲ್ಲಿ ಆಕಸ್ಮಿಕ ಬೆಂಕಿ

ಉತ್ತರ ಕನ್ನಡ: ಜಿಲ್ಲೆಯ ಭಟ್ಕಳ ಬಂದರಿನಲ್ಲಿ ನಿಲ್ಲಿಸಿದ್ದ ಬೋಟ್​ನಲ್ಲಿ ಆಕಸ್ಮಿಕ ಕಾಣಿಸಿಕೊಂಡಿದೆ. ನರಸಿಂಹ ಗೋವಿಂದ ಖಾರ್ವಿ ಎಂಬುವರಿಗೆ ಸೇರಿದ ಬೋಟ್ ಇದಾಗಿದ್ದು, ದುರಸ್ತಿ ಕಾರಣಕ್ಕೆ 3 ವರ್ಷದಿಂದ ನಿಲ್ಲಿಸಿಡಲಾಗಿತ್ತು. ಇನ್ನು ಸ್ಥಳಕ್ಕೆ  ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಈ ಕುರಿತು ಭಟ್ಕಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಚಿಕ್ಕಜಾಲ ಬಳಿಯ ಡೆಕಾಥ್ಲಾನ್ ಪಾರ್ಕಿಂಗ್​ ಲಾಟ್​ನಲ್ಲಿ ಕಳ್ಳತನ; ಕಾರಿನ‌ ಗ್ಲಾಸ್ ಒಡೆದು ಹಣ, ಬೆಲೆ ಬಾಳುವ ವಸ್ತು ಕದ್ದ ಖದೀಮರು

ಮನೆ ಕಳ್ಳತನ ಮಾಡಲು ಬಂದು ಪೇಚೆಗೆ ಸಿಲುಕಿದ ಕಳ್ಳರು

ಹಾವೇರಿ: ರಾತ್ರೋ ರಾತ್ರಿ ಮನೆ ಕಳ್ಳತನ ಮಾಡಲು ಬಂದು ಕಳ್ಳರು, ಪೇಚೆಗೆ ಸಿಲುಕಿದ ಘಟನೆ ಹಾವೇರಿ ತಾಲೂಕು ಕಬ್ಬೂರು ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ. ಹೌದು, ಬಂದ ಮೂವರಲ್ಲಿ ಒಬ್ಬ ಕಳ್ಳ ರಾಜಾಭಕ್ಷ್  ಎಂಬಾತ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದಾನೆ. ಇನ್ನು ಆತನನ್ನು ಗ್ರಾಮಸ್ಥರು ಬಸವಣ್ಣನ ದೇವಸ್ಥಾನದ ಎದುರಿಗಿನ ಕಂಬಕ್ಕೆ ಕಟ್ಟಿ ಗೂಸಾ ಕೊಟ್ಟಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ್ದನ್ನ ಗಮನಿಸಿ ರಾತ್ರಿ ಮನೆ ಕಳ್ಳತನಕ್ಕೆ ಸ್ಕೆಚ್ ಹಾಕಿದ್ದ ಕಳ್ಳರು, ಮನೆ ದೋಚಿ ಪರಾರಿಯಾಗುವಾಗ ಒಬ್ಬ ಕಳ್ಳ ಗ್ರಾಮಸ್ಥರ ಕೈಗೆ ಸಿಕ್ಕಿದ್ದು, ಇನ್ನಿಬ್ಬರು ಎಸ್ಕೇಪ್ ಆಗಿದ್ದಾರೆ.

ಬೆಲೆಬಾಳುವ ವಸ್ತುಗಳನ್ನು ಕದ್ದು ಜೊತೆಗಾರನನ್ನೇ ಬಿಟ್ಟು ಎಸ್ಕೇಪ್

ಸಿದ್ದಪ್ಪ ಒಡ್ಡಿಗೇರಿ ಎಂಬುವವರ ಮನೆ ಮಂದಿ ಎಲ್ಲರೂ ಅನ್ಯಕೆಲಸದ ನಿಮಿತ್ತ ಬೇರೆ ಊರಿಗೆ ತೆರಳಿದ್ದರು. ಮನೆ ಬೀಗ ಹಾಕಿದ್ದನ್ನು ನೋಡಿ ಕಳ್ಳತನ ಮಾಡಲು ಸ್ಕೆಚ್ ಹಾಕಿದ್ದ ಕಳ್ಳರು, ಸ್ಕೆಚ್ ಪ್ರಕಾರ ಕಳ್ಳತನ ಮಾಡಲು ಬಂದಿದ್ದಾರೆ. ಅನುಮಾನಾಸ್ಪದ ವ್ಯಕ್ತಿಗಳ‌ ಚಲನ ವಲನ ಗಮನಿಸಿದ್ದ ಗ್ರಾಮದ ಕೆಲ ರೈತರು, ಹೊಲಗಳಿಗೆ ನೀರು ಹಾಯಿಸಲು ಹೊರಟ ರೈತರು ಕಳ್ಳರ ಹುಡುಕಾಟ ನಡೆಸಿದ್ದರು, ಈ ವೇಳೆ ಒಬ್ಬ ಕಳ್ಳ ಸಿಕ್ಕಿ ಬಿದ್ದಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ