AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕಂಟೋನ್ಮೆಂಟ್​ನ ಈ ಪ್ಲಾಟ್​ಫಾರಂಗಳಲ್ಲಿ 3 ತಿಂಗಳು ರೈಲು ನಿಲುಗಡೆ ರದ್ದು

ಬೆಂಗಳೂರಿನ ಕಂಟೋನ್ಮೆಂಟ್ (ದಂಡು) ರೈಲ್ವೆ ನಿಲ್ದಾಣದಲ್ಲಿ ದುರಸ್ತಿ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮೂರು ತಿಂಗಳು (ಸೆಪ್ಟೆಂಬರ್ 20 ರಿಂದ ಡಿಸೆಂಬರ್​ 20)ರವರೆಗೆ ಈ ಪ್ಲಾಟ್ ಫಾರಂಗಳಲ್ಲಿ​ ಯಾವುದೇ ರೈಲು ನಿಲ್ಲುವುದಿಲ್ಲ. ಯಾವ ಯಾವ ರೈಲು ನಿಲ್ಲುವುದಿಲ್ಲ, ಇಲ್ಲಿದೆ ಮಾಹಿತಿ.

ಬೆಂಗಳೂರು: ಕಂಟೋನ್ಮೆಂಟ್​ನ ಈ ಪ್ಲಾಟ್​ಫಾರಂಗಳಲ್ಲಿ 3 ತಿಂಗಳು ರೈಲು ನಿಲುಗಡೆ ರದ್ದು
ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣ
ಕಿರಣ್​ ಸೂರ್ಯ
| Edited By: ವಿವೇಕ ಬಿರಾದಾರ|

Updated on:Aug 23, 2024 | 8:38 AM

Share

ಬೆಂಗಳೂರು, ಆಗಸ್ಟ್​ 23: ಬೆಂಗಳೂರು ಕಂಟೋನ್ಮೆಂಟ್ (ದಂಡು) (Bengaluru Cantonment Railway Station) ರೈಲ್ವೆ ನಿಲ್ದಾಣದ ಪ್ಲಾಟ್​​ ಫಾರಂ ನಂಬರ್​​​ 1 ಮತ್ತು 2ರಲ್ಲಿ ಸೆಪ್ಟೆಂಬರ್ 20 ರಿಂದ ಡಿಸೆಂಬರ್​ 20ರವರೆಗೆ ದುರಸ್ತಿ ಕಾರ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮೂರು ತಿಂಗಳು ಪ್ಲಾಟ್​​ ಫಾರಂ ನಂಬರ್​​​ 1 ಮತ್ತು 2ರಲ್ಲಿ ರೈಲುಗಳು ನಿಲ್ಲುವುದಿಲ್ಲ ಎಂದು ನೈಋತ್ಯ ರೈಲ್ವೆ ವಲಯ (South Western Railway) ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ನಿಲುಗಡೆ ರದ್ದಾದ ರೈಲುಗಳು

ಪ್ರತಿದಿನ ಸಂಚರಿಸುವ ಮೈಸೂರು- ಎಸ್‌ಎಂವಿಟಿ ಬೆಂಗಳೂರು ರೈಲು (06269) ಸೆ.19ರಿಂದ ಡಿ.19ರವರೆಗೆ ನಿಲುಗಡೆ ರದ್ದುಪಡಿಸಲಾಗಿದೆ. ವಾರಕ್ಕೊಮ್ಮೆ ಸಂಚರಿಸುವ ಮೈಸೂರು-ರೇಣಿಗುಂಟ (22135) ರೈಲು ನಿಲ್ಲುಗಡೆ ರದ್ದುಪಡಿಸಲಾಗಿದೆ.

ವಾರದ ಆರು ದಿನ ಮಾತ್ರ ಸಂಚರಿಸುವ ಸಂಚರಿಸುವ ಕೆಎಸ್‌ಆರ್ ಬೆಂಗಳೂರು – ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ರೈಲು, ಕೆಎಸ್​ಆರ್​-ಬೆಂಗಳೂರು ರೈಲು ನಿಲುಗಡೆ ರದ್ದು ಮಾಡಲಾಗಿದೆ.

ಕೆಎಸ್‌ಆರ್ ಬೆಂಗಳೂರು-ಎರ್ನಾಕುಲಂ ರೈಲು (12677), ಕೆಎಸ್‌ಆರ್ ಬೆಂಗಳೂರು – ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ (12608), ಮುರುಡೇಶ್ವರ- ಎಸ್​ಎಂವಿಟಿ ಬೆಂಗಳೂರು (16586), ಕೆಎಸ್‌ಆರ್ ಬೆಂಗಳೂರು- ಮಾರಿಕುಪ್ಪಂ (06396), ಕೆಎಸ್‌ಆರ್ ಬೆಂಗಳೂರು- ಶ್ರೀ ಸತ್ಯಸಾಯಿ ಪ್ರಶಾಂತಿನಿಲಯಂ (06515), ಮೈಸೂರು-ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ (06515), ಕೆಎಸ್‌ಆರ್ ಬೆಂಗಳೂರು- ಭುವನೇಶ್ವರ (18464) ರೈಲು ಸೆ.20ರಿಂದ ಡಿ.20ರವರೆಗೆ ನಿಲುಗಡೆ ರದ್ದಾಗಿದೆ.

ಇದನ್ನೂ ಓದಿ: 15 ದಿನಗಳವರೆಗೆ ಯಶವಂತಪುರ ರೈಲು ನಿಲ್ದಾಣದ ಈ ಪ್ಲಾಟ್​ಫಾರಂಗಳು ಕ್ಲೋಸ್​​, ರೈಲು ಸಂಚಾರ ರದ್ದು

ಕೆಎಸ್‌ಆರ್ ಬೆಂಗಳೂರು – ಜೋಳಪಟ್ಟಿ (06551), ಕೆಎಸ್‌ಆರ್ ಬೆಂಗಳೂರು – ವೈಟ್‌ಫೀಲ್ಡ್ (01765), ಕೆಎಸ್‌ಆರ್ ಬೆಂಗಳೂರು – ಬಂಗಾರಪೇಟೆ (06561/06389), ಕೆಎಸ್‌ಆರ್ ಬೆಂಗಳೂರು – ಕುಪ್ಪಂ (06529) ಬೆಂಗಳೂರು – ಮಾರಿಕುಪ್ಪಂ (01775) ರೈಲು ನಿಲುಗಡೆ ರದ್ದು ಮಾಡಲಾಗಿದೆ.

ವಾರಕ್ಕೆ ಎರಡು ಬಾರಿ ಸಂಚರಿಸುವ ಮೈಸೂರು-ಜೈಪುರ (12975) ರೈಲು ಸೆ.21 ರಿಂದ ಡಿ.19ರ ವರಗೆ ಮಾತ್ರ ನಿಲ್ಲುವುದಿಲ್ಲ. ಮೈಸೂರು- ಕೂಚುವೇಲಿ (16315), ಮೈಸೂರು- ಕಾಚಿಗುಡ (12786), ಕೆಎಸ್‌ಆರ್ ಬೆಂಗಳೂರು- ಧರ್ಮಪುರಿ, ಕೆಎಸ್‌ಆರ್ ಬೆಂಗಳೂರು- ನವದೆಹಲಿ (12627), ಕೆಎಸ್‌ಆರ್ ಬೆಂಗಳೂರು- ಸಿಎಸ್‌ಎಂಟಿ ಮುಂಬೈ (1302), ಬೆಂಗಳೂರು ದೇಬ್ ನಾಂದೇಡ್ (16593) ಸೆ.20 ರಿಂದ ಡಿ.20 ನಿಲುಗಡೆ ರದ್ದುಗೊಳಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:36 am, Fri, 23 August 24

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!