AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕಂಟೋನ್ಮೆಂಟ್​ನ ಈ ಪ್ಲಾಟ್​ಫಾರಂಗಳಲ್ಲಿ 3 ತಿಂಗಳು ರೈಲು ನಿಲುಗಡೆ ರದ್ದು

ಬೆಂಗಳೂರಿನ ಕಂಟೋನ್ಮೆಂಟ್ (ದಂಡು) ರೈಲ್ವೆ ನಿಲ್ದಾಣದಲ್ಲಿ ದುರಸ್ತಿ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮೂರು ತಿಂಗಳು (ಸೆಪ್ಟೆಂಬರ್ 20 ರಿಂದ ಡಿಸೆಂಬರ್​ 20)ರವರೆಗೆ ಈ ಪ್ಲಾಟ್ ಫಾರಂಗಳಲ್ಲಿ​ ಯಾವುದೇ ರೈಲು ನಿಲ್ಲುವುದಿಲ್ಲ. ಯಾವ ಯಾವ ರೈಲು ನಿಲ್ಲುವುದಿಲ್ಲ, ಇಲ್ಲಿದೆ ಮಾಹಿತಿ.

ಬೆಂಗಳೂರು: ಕಂಟೋನ್ಮೆಂಟ್​ನ ಈ ಪ್ಲಾಟ್​ಫಾರಂಗಳಲ್ಲಿ 3 ತಿಂಗಳು ರೈಲು ನಿಲುಗಡೆ ರದ್ದು
ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣ
Kiran Surya
| Edited By: |

Updated on:Aug 23, 2024 | 8:38 AM

Share

ಬೆಂಗಳೂರು, ಆಗಸ್ಟ್​ 23: ಬೆಂಗಳೂರು ಕಂಟೋನ್ಮೆಂಟ್ (ದಂಡು) (Bengaluru Cantonment Railway Station) ರೈಲ್ವೆ ನಿಲ್ದಾಣದ ಪ್ಲಾಟ್​​ ಫಾರಂ ನಂಬರ್​​​ 1 ಮತ್ತು 2ರಲ್ಲಿ ಸೆಪ್ಟೆಂಬರ್ 20 ರಿಂದ ಡಿಸೆಂಬರ್​ 20ರವರೆಗೆ ದುರಸ್ತಿ ಕಾರ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮೂರು ತಿಂಗಳು ಪ್ಲಾಟ್​​ ಫಾರಂ ನಂಬರ್​​​ 1 ಮತ್ತು 2ರಲ್ಲಿ ರೈಲುಗಳು ನಿಲ್ಲುವುದಿಲ್ಲ ಎಂದು ನೈಋತ್ಯ ರೈಲ್ವೆ ವಲಯ (South Western Railway) ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ನಿಲುಗಡೆ ರದ್ದಾದ ರೈಲುಗಳು

ಪ್ರತಿದಿನ ಸಂಚರಿಸುವ ಮೈಸೂರು- ಎಸ್‌ಎಂವಿಟಿ ಬೆಂಗಳೂರು ರೈಲು (06269) ಸೆ.19ರಿಂದ ಡಿ.19ರವರೆಗೆ ನಿಲುಗಡೆ ರದ್ದುಪಡಿಸಲಾಗಿದೆ. ವಾರಕ್ಕೊಮ್ಮೆ ಸಂಚರಿಸುವ ಮೈಸೂರು-ರೇಣಿಗುಂಟ (22135) ರೈಲು ನಿಲ್ಲುಗಡೆ ರದ್ದುಪಡಿಸಲಾಗಿದೆ.

ವಾರದ ಆರು ದಿನ ಮಾತ್ರ ಸಂಚರಿಸುವ ಸಂಚರಿಸುವ ಕೆಎಸ್‌ಆರ್ ಬೆಂಗಳೂರು – ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ರೈಲು, ಕೆಎಸ್​ಆರ್​-ಬೆಂಗಳೂರು ರೈಲು ನಿಲುಗಡೆ ರದ್ದು ಮಾಡಲಾಗಿದೆ.

ಕೆಎಸ್‌ಆರ್ ಬೆಂಗಳೂರು-ಎರ್ನಾಕುಲಂ ರೈಲು (12677), ಕೆಎಸ್‌ಆರ್ ಬೆಂಗಳೂರು – ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ (12608), ಮುರುಡೇಶ್ವರ- ಎಸ್​ಎಂವಿಟಿ ಬೆಂಗಳೂರು (16586), ಕೆಎಸ್‌ಆರ್ ಬೆಂಗಳೂರು- ಮಾರಿಕುಪ್ಪಂ (06396), ಕೆಎಸ್‌ಆರ್ ಬೆಂಗಳೂರು- ಶ್ರೀ ಸತ್ಯಸಾಯಿ ಪ್ರಶಾಂತಿನಿಲಯಂ (06515), ಮೈಸೂರು-ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ (06515), ಕೆಎಸ್‌ಆರ್ ಬೆಂಗಳೂರು- ಭುವನೇಶ್ವರ (18464) ರೈಲು ಸೆ.20ರಿಂದ ಡಿ.20ರವರೆಗೆ ನಿಲುಗಡೆ ರದ್ದಾಗಿದೆ.

ಇದನ್ನೂ ಓದಿ: 15 ದಿನಗಳವರೆಗೆ ಯಶವಂತಪುರ ರೈಲು ನಿಲ್ದಾಣದ ಈ ಪ್ಲಾಟ್​ಫಾರಂಗಳು ಕ್ಲೋಸ್​​, ರೈಲು ಸಂಚಾರ ರದ್ದು

ಕೆಎಸ್‌ಆರ್ ಬೆಂಗಳೂರು – ಜೋಳಪಟ್ಟಿ (06551), ಕೆಎಸ್‌ಆರ್ ಬೆಂಗಳೂರು – ವೈಟ್‌ಫೀಲ್ಡ್ (01765), ಕೆಎಸ್‌ಆರ್ ಬೆಂಗಳೂರು – ಬಂಗಾರಪೇಟೆ (06561/06389), ಕೆಎಸ್‌ಆರ್ ಬೆಂಗಳೂರು – ಕುಪ್ಪಂ (06529) ಬೆಂಗಳೂರು – ಮಾರಿಕುಪ್ಪಂ (01775) ರೈಲು ನಿಲುಗಡೆ ರದ್ದು ಮಾಡಲಾಗಿದೆ.

ವಾರಕ್ಕೆ ಎರಡು ಬಾರಿ ಸಂಚರಿಸುವ ಮೈಸೂರು-ಜೈಪುರ (12975) ರೈಲು ಸೆ.21 ರಿಂದ ಡಿ.19ರ ವರಗೆ ಮಾತ್ರ ನಿಲ್ಲುವುದಿಲ್ಲ. ಮೈಸೂರು- ಕೂಚುವೇಲಿ (16315), ಮೈಸೂರು- ಕಾಚಿಗುಡ (12786), ಕೆಎಸ್‌ಆರ್ ಬೆಂಗಳೂರು- ಧರ್ಮಪುರಿ, ಕೆಎಸ್‌ಆರ್ ಬೆಂಗಳೂರು- ನವದೆಹಲಿ (12627), ಕೆಎಸ್‌ಆರ್ ಬೆಂಗಳೂರು- ಸಿಎಸ್‌ಎಂಟಿ ಮುಂಬೈ (1302), ಬೆಂಗಳೂರು ದೇಬ್ ನಾಂದೇಡ್ (16593) ಸೆ.20 ರಿಂದ ಡಿ.20 ನಿಲುಗಡೆ ರದ್ದುಗೊಳಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:36 am, Fri, 23 August 24

‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!