AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕಂಟೋನ್ಮೆಂಟ್​ನ ಈ ಪ್ಲಾಟ್​ಫಾರಂಗಳಲ್ಲಿ 3 ತಿಂಗಳು ರೈಲು ನಿಲುಗಡೆ ರದ್ದು

ಬೆಂಗಳೂರಿನ ಕಂಟೋನ್ಮೆಂಟ್ (ದಂಡು) ರೈಲ್ವೆ ನಿಲ್ದಾಣದಲ್ಲಿ ದುರಸ್ತಿ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮೂರು ತಿಂಗಳು (ಸೆಪ್ಟೆಂಬರ್ 20 ರಿಂದ ಡಿಸೆಂಬರ್​ 20)ರವರೆಗೆ ಈ ಪ್ಲಾಟ್ ಫಾರಂಗಳಲ್ಲಿ​ ಯಾವುದೇ ರೈಲು ನಿಲ್ಲುವುದಿಲ್ಲ. ಯಾವ ಯಾವ ರೈಲು ನಿಲ್ಲುವುದಿಲ್ಲ, ಇಲ್ಲಿದೆ ಮಾಹಿತಿ.

ಬೆಂಗಳೂರು: ಕಂಟೋನ್ಮೆಂಟ್​ನ ಈ ಪ್ಲಾಟ್​ಫಾರಂಗಳಲ್ಲಿ 3 ತಿಂಗಳು ರೈಲು ನಿಲುಗಡೆ ರದ್ದು
ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣ
Kiran Surya
| Edited By: |

Updated on:Aug 23, 2024 | 8:38 AM

Share

ಬೆಂಗಳೂರು, ಆಗಸ್ಟ್​ 23: ಬೆಂಗಳೂರು ಕಂಟೋನ್ಮೆಂಟ್ (ದಂಡು) (Bengaluru Cantonment Railway Station) ರೈಲ್ವೆ ನಿಲ್ದಾಣದ ಪ್ಲಾಟ್​​ ಫಾರಂ ನಂಬರ್​​​ 1 ಮತ್ತು 2ರಲ್ಲಿ ಸೆಪ್ಟೆಂಬರ್ 20 ರಿಂದ ಡಿಸೆಂಬರ್​ 20ರವರೆಗೆ ದುರಸ್ತಿ ಕಾರ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮೂರು ತಿಂಗಳು ಪ್ಲಾಟ್​​ ಫಾರಂ ನಂಬರ್​​​ 1 ಮತ್ತು 2ರಲ್ಲಿ ರೈಲುಗಳು ನಿಲ್ಲುವುದಿಲ್ಲ ಎಂದು ನೈಋತ್ಯ ರೈಲ್ವೆ ವಲಯ (South Western Railway) ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ನಿಲುಗಡೆ ರದ್ದಾದ ರೈಲುಗಳು

ಪ್ರತಿದಿನ ಸಂಚರಿಸುವ ಮೈಸೂರು- ಎಸ್‌ಎಂವಿಟಿ ಬೆಂಗಳೂರು ರೈಲು (06269) ಸೆ.19ರಿಂದ ಡಿ.19ರವರೆಗೆ ನಿಲುಗಡೆ ರದ್ದುಪಡಿಸಲಾಗಿದೆ. ವಾರಕ್ಕೊಮ್ಮೆ ಸಂಚರಿಸುವ ಮೈಸೂರು-ರೇಣಿಗುಂಟ (22135) ರೈಲು ನಿಲ್ಲುಗಡೆ ರದ್ದುಪಡಿಸಲಾಗಿದೆ.

ವಾರದ ಆರು ದಿನ ಮಾತ್ರ ಸಂಚರಿಸುವ ಸಂಚರಿಸುವ ಕೆಎಸ್‌ಆರ್ ಬೆಂಗಳೂರು – ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ರೈಲು, ಕೆಎಸ್​ಆರ್​-ಬೆಂಗಳೂರು ರೈಲು ನಿಲುಗಡೆ ರದ್ದು ಮಾಡಲಾಗಿದೆ.

ಕೆಎಸ್‌ಆರ್ ಬೆಂಗಳೂರು-ಎರ್ನಾಕುಲಂ ರೈಲು (12677), ಕೆಎಸ್‌ಆರ್ ಬೆಂಗಳೂರು – ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ (12608), ಮುರುಡೇಶ್ವರ- ಎಸ್​ಎಂವಿಟಿ ಬೆಂಗಳೂರು (16586), ಕೆಎಸ್‌ಆರ್ ಬೆಂಗಳೂರು- ಮಾರಿಕುಪ್ಪಂ (06396), ಕೆಎಸ್‌ಆರ್ ಬೆಂಗಳೂರು- ಶ್ರೀ ಸತ್ಯಸಾಯಿ ಪ್ರಶಾಂತಿನಿಲಯಂ (06515), ಮೈಸೂರು-ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ (06515), ಕೆಎಸ್‌ಆರ್ ಬೆಂಗಳೂರು- ಭುವನೇಶ್ವರ (18464) ರೈಲು ಸೆ.20ರಿಂದ ಡಿ.20ರವರೆಗೆ ನಿಲುಗಡೆ ರದ್ದಾಗಿದೆ.

ಇದನ್ನೂ ಓದಿ: 15 ದಿನಗಳವರೆಗೆ ಯಶವಂತಪುರ ರೈಲು ನಿಲ್ದಾಣದ ಈ ಪ್ಲಾಟ್​ಫಾರಂಗಳು ಕ್ಲೋಸ್​​, ರೈಲು ಸಂಚಾರ ರದ್ದು

ಕೆಎಸ್‌ಆರ್ ಬೆಂಗಳೂರು – ಜೋಳಪಟ್ಟಿ (06551), ಕೆಎಸ್‌ಆರ್ ಬೆಂಗಳೂರು – ವೈಟ್‌ಫೀಲ್ಡ್ (01765), ಕೆಎಸ್‌ಆರ್ ಬೆಂಗಳೂರು – ಬಂಗಾರಪೇಟೆ (06561/06389), ಕೆಎಸ್‌ಆರ್ ಬೆಂಗಳೂರು – ಕುಪ್ಪಂ (06529) ಬೆಂಗಳೂರು – ಮಾರಿಕುಪ್ಪಂ (01775) ರೈಲು ನಿಲುಗಡೆ ರದ್ದು ಮಾಡಲಾಗಿದೆ.

ವಾರಕ್ಕೆ ಎರಡು ಬಾರಿ ಸಂಚರಿಸುವ ಮೈಸೂರು-ಜೈಪುರ (12975) ರೈಲು ಸೆ.21 ರಿಂದ ಡಿ.19ರ ವರಗೆ ಮಾತ್ರ ನಿಲ್ಲುವುದಿಲ್ಲ. ಮೈಸೂರು- ಕೂಚುವೇಲಿ (16315), ಮೈಸೂರು- ಕಾಚಿಗುಡ (12786), ಕೆಎಸ್‌ಆರ್ ಬೆಂಗಳೂರು- ಧರ್ಮಪುರಿ, ಕೆಎಸ್‌ಆರ್ ಬೆಂಗಳೂರು- ನವದೆಹಲಿ (12627), ಕೆಎಸ್‌ಆರ್ ಬೆಂಗಳೂರು- ಸಿಎಸ್‌ಎಂಟಿ ಮುಂಬೈ (1302), ಬೆಂಗಳೂರು ದೇಬ್ ನಾಂದೇಡ್ (16593) ಸೆ.20 ರಿಂದ ಡಿ.20 ನಿಲುಗಡೆ ರದ್ದುಗೊಳಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:36 am, Fri, 23 August 24

Follow Us
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್