AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕಂಟೋನ್ಮೆಂಟ್​ನ ಈ ಪ್ಲಾಟ್​ಫಾರಂಗಳಲ್ಲಿ 3 ತಿಂಗಳು ರೈಲು ನಿಲುಗಡೆ ರದ್ದು

ಬೆಂಗಳೂರಿನ ಕಂಟೋನ್ಮೆಂಟ್ (ದಂಡು) ರೈಲ್ವೆ ನಿಲ್ದಾಣದಲ್ಲಿ ದುರಸ್ತಿ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮೂರು ತಿಂಗಳು (ಸೆಪ್ಟೆಂಬರ್ 20 ರಿಂದ ಡಿಸೆಂಬರ್​ 20)ರವರೆಗೆ ಈ ಪ್ಲಾಟ್ ಫಾರಂಗಳಲ್ಲಿ​ ಯಾವುದೇ ರೈಲು ನಿಲ್ಲುವುದಿಲ್ಲ. ಯಾವ ಯಾವ ರೈಲು ನಿಲ್ಲುವುದಿಲ್ಲ, ಇಲ್ಲಿದೆ ಮಾಹಿತಿ.

ಬೆಂಗಳೂರು: ಕಂಟೋನ್ಮೆಂಟ್​ನ ಈ ಪ್ಲಾಟ್​ಫಾರಂಗಳಲ್ಲಿ 3 ತಿಂಗಳು ರೈಲು ನಿಲುಗಡೆ ರದ್ದು
ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣ
ಕಿರಣ್​ ಸೂರ್ಯ
| Edited By: ವಿವೇಕ ಬಿರಾದಾರ|

Updated on:Aug 23, 2024 | 8:38 AM

Share

ಬೆಂಗಳೂರು, ಆಗಸ್ಟ್​ 23: ಬೆಂಗಳೂರು ಕಂಟೋನ್ಮೆಂಟ್ (ದಂಡು) (Bengaluru Cantonment Railway Station) ರೈಲ್ವೆ ನಿಲ್ದಾಣದ ಪ್ಲಾಟ್​​ ಫಾರಂ ನಂಬರ್​​​ 1 ಮತ್ತು 2ರಲ್ಲಿ ಸೆಪ್ಟೆಂಬರ್ 20 ರಿಂದ ಡಿಸೆಂಬರ್​ 20ರವರೆಗೆ ದುರಸ್ತಿ ಕಾರ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮೂರು ತಿಂಗಳು ಪ್ಲಾಟ್​​ ಫಾರಂ ನಂಬರ್​​​ 1 ಮತ್ತು 2ರಲ್ಲಿ ರೈಲುಗಳು ನಿಲ್ಲುವುದಿಲ್ಲ ಎಂದು ನೈಋತ್ಯ ರೈಲ್ವೆ ವಲಯ (South Western Railway) ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ನಿಲುಗಡೆ ರದ್ದಾದ ರೈಲುಗಳು

ಪ್ರತಿದಿನ ಸಂಚರಿಸುವ ಮೈಸೂರು- ಎಸ್‌ಎಂವಿಟಿ ಬೆಂಗಳೂರು ರೈಲು (06269) ಸೆ.19ರಿಂದ ಡಿ.19ರವರೆಗೆ ನಿಲುಗಡೆ ರದ್ದುಪಡಿಸಲಾಗಿದೆ. ವಾರಕ್ಕೊಮ್ಮೆ ಸಂಚರಿಸುವ ಮೈಸೂರು-ರೇಣಿಗುಂಟ (22135) ರೈಲು ನಿಲ್ಲುಗಡೆ ರದ್ದುಪಡಿಸಲಾಗಿದೆ.

ವಾರದ ಆರು ದಿನ ಮಾತ್ರ ಸಂಚರಿಸುವ ಸಂಚರಿಸುವ ಕೆಎಸ್‌ಆರ್ ಬೆಂಗಳೂರು – ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ರೈಲು, ಕೆಎಸ್​ಆರ್​-ಬೆಂಗಳೂರು ರೈಲು ನಿಲುಗಡೆ ರದ್ದು ಮಾಡಲಾಗಿದೆ.

ಕೆಎಸ್‌ಆರ್ ಬೆಂಗಳೂರು-ಎರ್ನಾಕುಲಂ ರೈಲು (12677), ಕೆಎಸ್‌ಆರ್ ಬೆಂಗಳೂರು – ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ (12608), ಮುರುಡೇಶ್ವರ- ಎಸ್​ಎಂವಿಟಿ ಬೆಂಗಳೂರು (16586), ಕೆಎಸ್‌ಆರ್ ಬೆಂಗಳೂರು- ಮಾರಿಕುಪ್ಪಂ (06396), ಕೆಎಸ್‌ಆರ್ ಬೆಂಗಳೂರು- ಶ್ರೀ ಸತ್ಯಸಾಯಿ ಪ್ರಶಾಂತಿನಿಲಯಂ (06515), ಮೈಸೂರು-ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ (06515), ಕೆಎಸ್‌ಆರ್ ಬೆಂಗಳೂರು- ಭುವನೇಶ್ವರ (18464) ರೈಲು ಸೆ.20ರಿಂದ ಡಿ.20ರವರೆಗೆ ನಿಲುಗಡೆ ರದ್ದಾಗಿದೆ.

ಇದನ್ನೂ ಓದಿ: 15 ದಿನಗಳವರೆಗೆ ಯಶವಂತಪುರ ರೈಲು ನಿಲ್ದಾಣದ ಈ ಪ್ಲಾಟ್​ಫಾರಂಗಳು ಕ್ಲೋಸ್​​, ರೈಲು ಸಂಚಾರ ರದ್ದು

ಕೆಎಸ್‌ಆರ್ ಬೆಂಗಳೂರು – ಜೋಳಪಟ್ಟಿ (06551), ಕೆಎಸ್‌ಆರ್ ಬೆಂಗಳೂರು – ವೈಟ್‌ಫೀಲ್ಡ್ (01765), ಕೆಎಸ್‌ಆರ್ ಬೆಂಗಳೂರು – ಬಂಗಾರಪೇಟೆ (06561/06389), ಕೆಎಸ್‌ಆರ್ ಬೆಂಗಳೂರು – ಕುಪ್ಪಂ (06529) ಬೆಂಗಳೂರು – ಮಾರಿಕುಪ್ಪಂ (01775) ರೈಲು ನಿಲುಗಡೆ ರದ್ದು ಮಾಡಲಾಗಿದೆ.

ವಾರಕ್ಕೆ ಎರಡು ಬಾರಿ ಸಂಚರಿಸುವ ಮೈಸೂರು-ಜೈಪುರ (12975) ರೈಲು ಸೆ.21 ರಿಂದ ಡಿ.19ರ ವರಗೆ ಮಾತ್ರ ನಿಲ್ಲುವುದಿಲ್ಲ. ಮೈಸೂರು- ಕೂಚುವೇಲಿ (16315), ಮೈಸೂರು- ಕಾಚಿಗುಡ (12786), ಕೆಎಸ್‌ಆರ್ ಬೆಂಗಳೂರು- ಧರ್ಮಪುರಿ, ಕೆಎಸ್‌ಆರ್ ಬೆಂಗಳೂರು- ನವದೆಹಲಿ (12627), ಕೆಎಸ್‌ಆರ್ ಬೆಂಗಳೂರು- ಸಿಎಸ್‌ಎಂಟಿ ಮುಂಬೈ (1302), ಬೆಂಗಳೂರು ದೇಬ್ ನಾಂದೇಡ್ (16593) ಸೆ.20 ರಿಂದ ಡಿ.20 ನಿಲುಗಡೆ ರದ್ದುಗೊಳಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:36 am, Fri, 23 August 24

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ವೈಭವ್ ಸಿಕ್ಸರ್​ಗಳ ಸುನಾಮಿಗೆ ಗೇಲ್ ದಾಖಲೆ ಧ್ವಂಸ
ವೈಭವ್ ಸಿಕ್ಸರ್​ಗಳ ಸುನಾಮಿಗೆ ಗೇಲ್ ದಾಖಲೆ ಧ್ವಂಸ
‘ಸಿಟಿ ಲೈಟ್ಸ್’ ಸಿನಿಮಾ: ದುನಿಯಾ ವಿಜಯ್ ನಿರ್ದೇಶನ ಮಾಡುವ ಸ್ಟೈಲ್ ನೋಡಿ..
‘ಸಿಟಿ ಲೈಟ್ಸ್’ ಸಿನಿಮಾ: ದುನಿಯಾ ವಿಜಯ್ ನಿರ್ದೇಶನ ಮಾಡುವ ಸ್ಟೈಲ್ ನೋಡಿ..
ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ
ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ