AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕಂಟೋನ್ಮೆಂಟ್​ನ ಈ ಪ್ಲಾಟ್​ಫಾರಂಗಳಲ್ಲಿ 3 ತಿಂಗಳು ರೈಲು ನಿಲುಗಡೆ ರದ್ದು

ಬೆಂಗಳೂರಿನ ಕಂಟೋನ್ಮೆಂಟ್ (ದಂಡು) ರೈಲ್ವೆ ನಿಲ್ದಾಣದಲ್ಲಿ ದುರಸ್ತಿ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮೂರು ತಿಂಗಳು (ಸೆಪ್ಟೆಂಬರ್ 20 ರಿಂದ ಡಿಸೆಂಬರ್​ 20)ರವರೆಗೆ ಈ ಪ್ಲಾಟ್ ಫಾರಂಗಳಲ್ಲಿ​ ಯಾವುದೇ ರೈಲು ನಿಲ್ಲುವುದಿಲ್ಲ. ಯಾವ ಯಾವ ರೈಲು ನಿಲ್ಲುವುದಿಲ್ಲ, ಇಲ್ಲಿದೆ ಮಾಹಿತಿ.

ಬೆಂಗಳೂರು: ಕಂಟೋನ್ಮೆಂಟ್​ನ ಈ ಪ್ಲಾಟ್​ಫಾರಂಗಳಲ್ಲಿ 3 ತಿಂಗಳು ರೈಲು ನಿಲುಗಡೆ ರದ್ದು
ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣ
ಕಿರಣ್​ ಸೂರ್ಯ
| Edited By: ವಿವೇಕ ಬಿರಾದಾರ|

Updated on:Aug 23, 2024 | 8:38 AM

Share

ಬೆಂಗಳೂರು, ಆಗಸ್ಟ್​ 23: ಬೆಂಗಳೂರು ಕಂಟೋನ್ಮೆಂಟ್ (ದಂಡು) (Bengaluru Cantonment Railway Station) ರೈಲ್ವೆ ನಿಲ್ದಾಣದ ಪ್ಲಾಟ್​​ ಫಾರಂ ನಂಬರ್​​​ 1 ಮತ್ತು 2ರಲ್ಲಿ ಸೆಪ್ಟೆಂಬರ್ 20 ರಿಂದ ಡಿಸೆಂಬರ್​ 20ರವರೆಗೆ ದುರಸ್ತಿ ಕಾರ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮೂರು ತಿಂಗಳು ಪ್ಲಾಟ್​​ ಫಾರಂ ನಂಬರ್​​​ 1 ಮತ್ತು 2ರಲ್ಲಿ ರೈಲುಗಳು ನಿಲ್ಲುವುದಿಲ್ಲ ಎಂದು ನೈಋತ್ಯ ರೈಲ್ವೆ ವಲಯ (South Western Railway) ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ನಿಲುಗಡೆ ರದ್ದಾದ ರೈಲುಗಳು

ಪ್ರತಿದಿನ ಸಂಚರಿಸುವ ಮೈಸೂರು- ಎಸ್‌ಎಂವಿಟಿ ಬೆಂಗಳೂರು ರೈಲು (06269) ಸೆ.19ರಿಂದ ಡಿ.19ರವರೆಗೆ ನಿಲುಗಡೆ ರದ್ದುಪಡಿಸಲಾಗಿದೆ. ವಾರಕ್ಕೊಮ್ಮೆ ಸಂಚರಿಸುವ ಮೈಸೂರು-ರೇಣಿಗುಂಟ (22135) ರೈಲು ನಿಲ್ಲುಗಡೆ ರದ್ದುಪಡಿಸಲಾಗಿದೆ.

ವಾರದ ಆರು ದಿನ ಮಾತ್ರ ಸಂಚರಿಸುವ ಸಂಚರಿಸುವ ಕೆಎಸ್‌ಆರ್ ಬೆಂಗಳೂರು – ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ರೈಲು, ಕೆಎಸ್​ಆರ್​-ಬೆಂಗಳೂರು ರೈಲು ನಿಲುಗಡೆ ರದ್ದು ಮಾಡಲಾಗಿದೆ.

ಕೆಎಸ್‌ಆರ್ ಬೆಂಗಳೂರು-ಎರ್ನಾಕುಲಂ ರೈಲು (12677), ಕೆಎಸ್‌ಆರ್ ಬೆಂಗಳೂರು – ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ (12608), ಮುರುಡೇಶ್ವರ- ಎಸ್​ಎಂವಿಟಿ ಬೆಂಗಳೂರು (16586), ಕೆಎಸ್‌ಆರ್ ಬೆಂಗಳೂರು- ಮಾರಿಕುಪ್ಪಂ (06396), ಕೆಎಸ್‌ಆರ್ ಬೆಂಗಳೂರು- ಶ್ರೀ ಸತ್ಯಸಾಯಿ ಪ್ರಶಾಂತಿನಿಲಯಂ (06515), ಮೈಸೂರು-ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ (06515), ಕೆಎಸ್‌ಆರ್ ಬೆಂಗಳೂರು- ಭುವನೇಶ್ವರ (18464) ರೈಲು ಸೆ.20ರಿಂದ ಡಿ.20ರವರೆಗೆ ನಿಲುಗಡೆ ರದ್ದಾಗಿದೆ.

ಇದನ್ನೂ ಓದಿ: 15 ದಿನಗಳವರೆಗೆ ಯಶವಂತಪುರ ರೈಲು ನಿಲ್ದಾಣದ ಈ ಪ್ಲಾಟ್​ಫಾರಂಗಳು ಕ್ಲೋಸ್​​, ರೈಲು ಸಂಚಾರ ರದ್ದು

ಕೆಎಸ್‌ಆರ್ ಬೆಂಗಳೂರು – ಜೋಳಪಟ್ಟಿ (06551), ಕೆಎಸ್‌ಆರ್ ಬೆಂಗಳೂರು – ವೈಟ್‌ಫೀಲ್ಡ್ (01765), ಕೆಎಸ್‌ಆರ್ ಬೆಂಗಳೂರು – ಬಂಗಾರಪೇಟೆ (06561/06389), ಕೆಎಸ್‌ಆರ್ ಬೆಂಗಳೂರು – ಕುಪ್ಪಂ (06529) ಬೆಂಗಳೂರು – ಮಾರಿಕುಪ್ಪಂ (01775) ರೈಲು ನಿಲುಗಡೆ ರದ್ದು ಮಾಡಲಾಗಿದೆ.

ವಾರಕ್ಕೆ ಎರಡು ಬಾರಿ ಸಂಚರಿಸುವ ಮೈಸೂರು-ಜೈಪುರ (12975) ರೈಲು ಸೆ.21 ರಿಂದ ಡಿ.19ರ ವರಗೆ ಮಾತ್ರ ನಿಲ್ಲುವುದಿಲ್ಲ. ಮೈಸೂರು- ಕೂಚುವೇಲಿ (16315), ಮೈಸೂರು- ಕಾಚಿಗುಡ (12786), ಕೆಎಸ್‌ಆರ್ ಬೆಂಗಳೂರು- ಧರ್ಮಪುರಿ, ಕೆಎಸ್‌ಆರ್ ಬೆಂಗಳೂರು- ನವದೆಹಲಿ (12627), ಕೆಎಸ್‌ಆರ್ ಬೆಂಗಳೂರು- ಸಿಎಸ್‌ಎಂಟಿ ಮುಂಬೈ (1302), ಬೆಂಗಳೂರು ದೇಬ್ ನಾಂದೇಡ್ (16593) ಸೆ.20 ರಿಂದ ಡಿ.20 ನಿಲುಗಡೆ ರದ್ದುಗೊಳಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:36 am, Fri, 23 August 24

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ