AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಮಫಲಕ ಧ್ವಂಸ ಪ್ರಕರಣ: ಕರ್ನಾಟಕ ರಕ್ಷಣಾ ವೇದಿಕೆ ವಿರುದ್ದ ಮತ್ತೆ 3 ಕೇಸ್ ಬುಕ್

ಎಲ್ಲಾ ಅಂಗಡಿಗಳಲ್ಲಿ ಕನ್ನಡ ನಾಮಫಲಕ ಅಳವಡಿಸುವಂತೆ ಕರ್ನಾಟಕ ವೇದಿಕೆ ಬೃಹತ್ ರ್ಯಾಲಿ ನಡೆಸಿದ್ದು, ಈ ವೇಳೆ ಬೇರೆ ಬೇರೆ ಭಾಷೆಗಳಲ್ಲಿದ್ದ ಬೋರ್ಡ್​ಗಳನ್ನು ಧ್ವಂಸ ಮಾಡಲಾಗಿದೆ. ಈ ಸಂಬಂಧ ಹಲವುರನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಮತ್ತೆ ಕರವೇ ವಿರುದ್ಧ ಮೂರು ಪ್ರಕರಣಗಳು ದಾಖಲಾಗಿವೆ.

ನಾಮಫಲಕ ಧ್ವಂಸ ಪ್ರಕರಣ: ಕರ್ನಾಟಕ ರಕ್ಷಣಾ ವೇದಿಕೆ ವಿರುದ್ದ ಮತ್ತೆ 3 ಕೇಸ್ ಬುಕ್
ರಕ್ಷಣಾ ವೇದಿಕೆ ಪ್ರತಿಭಟನೆ
ನವೀನ್ ಕುಮಾರ್ ಟಿ
| Edited By: |

Updated on:Dec 29, 2023 | 4:51 PM

Share

ಬೆಂಗಳೂರು, (ಡಿಸೆಂಬರ್ 29): ನಾಮಫಲಕ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಕ್ಷಣಾ ವೇದಿಕೆ ( Karnataka Rakshana Vedike ) ವಿರುದ್ದ ಮತ್ತೆ ಮೂರು ಪ್ರಕರಣಗಳು ದಾಖಲಾಗಿವೆ. ಅಂಗಡಿ ಮುಂಗಟ್ಟುಗಳ ಮುಂದಿನ ಬೋರ್ಡ್ ಹೊಡೆದಿದಕ್ಕೆ. ಹೋಟೆಲ್ ಮತ್ತು ಶೋ ರೂಂ ಮಾಲೀಕರು ನೀಡಿದ ದೂರಿನ ಮೇರೆಗೆ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಕಲಂ 143,147,120 (B)283,308,353,333 ಅಡಿಯಲ್ಲಿ ಪ್ರಕರಣ ದಾಖಲಾಗಿವೆ.

ಸಾದಹಳ್ಳಿಯ ಬ್ಲೂಂ ಹೋಟೆಲ್ ಸೇರಿದಂತೆ ಹಲವರು ದೂರು ನೀಡಿದ್ದು, ಈ ದೂರಿನ ಮೇರೆಗೆ ವಿಡಿಯೋ ದೃಶ್ಯಾವಳಿ ಆಧರಿಸಿ ಚಿಕ್ಕಜಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ವಿಡಿಯೋದಲ್ಲಿರುವವರ ಗುರುತು ಪತ್ತೆಗೂ ಮುಂದಾಗಿದ್ದಾರೆ.

ಇದನ್ನೂ ಓದಿ: ಕನ್ನಡ ಹೋರಾಟಗಾರರ ಖಂಡನಾ ಸಭೆಯಲ್ಲಿ ಪ್ರಮುಖ 2 ನಿರ್ಣಯ: ಬೆಂಗಳೂರು ಬಂದ್​ ಆಗುತ್ತಾ?

ಮೊನ್ನೇ ಬೆಂಗಳೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ನಾಮಫಲಕ ರ್ಯಾಲಿ ನಡೆಸಿದ್ದು, ಅಂಗಡಿ ಮುಂಗಟ್ಟುಗಳು ನಾಮಫಲಕಗಳು ಶೇ 60ರಷ್ಟು ಕನ್ನಡದಲ್ಲಿ ಇರಬೇಕೆಂದು ಆಗ್ರಹಿಸಿತ್ತು. ಅಲ್ಲದೇ ರ್ಯಾಲಿ ವೇಳೆ ಬೇರೆ ಬೇರೆ ಭಾಷೆಗಳಲ್ಲಿದ್ದ ಅಂಗಡಿಗಳ ಬೋರ್ಡ್​ಗಳನ್ನು ಕಿತ್ತೆಸೆಯಲಾಗಿತ್ತು. ಈ ಸಂಬಂಧ ಪೊಲೀಸರು ನಾರಾಯಣಗೌಡ ಸೇರಿದಂತೆ ಹಲವು ಕರವೇ ಕಾರ್ಯಕರ್ತರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದು, ಇದೀಗ ಕೆಲವರು ಜಾಮೀನಿನ ಮೇಲೆ ಆಚೆ ಬಂದಿದ್ದಾರೆ.

ಇನ್ನು ನಾರಾಯಣಗೌಡ ಸೇರಿದಂತೆ ಕರವೇ ಕಾರ್ಯಕರ್ತರನ್ನು ಬಂಧಿಸಿದ್ದಕ್ಕೆ ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯದ ಹಲವೆಡೆ ಪ್ರತಿಭಟನೆ ಮಾಡಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿವೆ. ಇನ್ನು ಇಂದು ಖಂಡನಾ ಸಭೆ ನಡೆದಿದ್ದು, ಕೆಲ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಕೂಡಲೇ ಬಂಧಿತರನ್ನು ಬಿಡುಗಡೆ ಮಾಡದಿದ್ದರೆ ಬೆಂಗಳೂರು ಬಂದ್​ ಮಾಡುವ ಬಗ್ಗೆ ಕನ್ನಡಪರ ಸಂಘಟನೆಗಳು ಚರ್ಚೆ ನಡೆಸಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:48 pm, Fri, 29 December 23

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ