AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿ ಚಾಕೊಲೇಟ್ ತಂದು ಕೊಡಲಿಲ್ಲವೆಂದು ಪತ್ನಿ ಆತ್ಮಹತ್ಯೆ: ಬೆಂಗಳೂರಿನಲ್ಲಿ ವಿಚಿತ್ರ ಘಟನೆ

ಪತಿ ಚಾಕೊಲೇಟ್ ತಂದು ಕೊಡಲಿಲ್ಲ ಎಂದು ಮನನೊಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಪತಿ ಚಾಕೊಲೇಟ್ ತಂದು ಕೊಡಲಿಲ್ಲವೆಂದು ಪತ್ನಿ ಆತ್ಮಹತ್ಯೆ: ಬೆಂಗಳೂರಿನಲ್ಲಿ ವಿಚಿತ್ರ ಘಟನೆ
ರಮೇಶ್ ಬಿ. ಜವಳಗೇರಾ
|

Updated on:Apr 07, 2023 | 12:58 PM

Share

ಬೆಂಗಳೂರು: ಚಿಕ್ಕ ಮಕ್ಕಳು ಚಾಕೋಲೆಟ್(chocolate), ಚಿಪ್ಸ್ ಸೇರಿದಂತೆ ತಿಂಡಿ ತಿನಿಸುಗಳಿಗೆ ಹಠ ಮಾಡುವುದನ್ನ ನಾವು ನೋಡಿದ್ದೇವೆ. ಇನ್ನು ಕೇಳಿದ್ದನ್ನು ಕೊಡಿಸಲಿಲ್ಲ ಎಂದು ಹಠ ಹಿಡಿಯುವುದು, ಅಳುವುದು ಸಾಮಾನ್ಯ. ಆದ್ರೆ, ಇಲ್ಲೋರ್ವ ಎರಡು ಮಕ್ಕಳ ತಾಯಿಯೊಬ್ಬರು, ಪತಿ(Husband) ಚಾಕೊಲೇಟ್ ತಂದು ಕೊಡಲಿಲ್ಲ ಎಂದು ಬೇಸತ್ತು ಪತ್ನಿ ಆತ್ಮಹತ್ಯೆಶ್ರ(Suicide) ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದೆ. ಹೌದು.. ಈ ಘಟನೆ ಬೆಂಗಳೂರಿನ(Bengaluru) ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ನಂದಿನಿ‌(30) ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

6 ವರ್ಷದ ಹಿಂದೆ ಮದುವೆಯಾಗಿದ್ದ ಮೃತ ನಂದಿನಿ‌ಗೆ ಇಬ್ಬರು ಮಕ್ಕಳಿದ್ದಾರೆ. ಇನ್ನು ನಂದಿನಿ ಪತಿ ಸಲೂಲ್​ನಲ್ಲಿ ಕೆಲಸ ಮಾಡಿಕೊಂಡಿದ್ದ. ಅದರಂತೆ ನಿನ್ನೆ(ಏಪ್ರಿಲ್ 06) ಬೆಳಗ್ಗೆ ಪತಿ ಕೆಲಸಕ್ಕೆ ಹೋಗುವಾಗ ಚಾಕೋಲೆಟ್ ತೆಗೆದುಕೊಂಡು ಬರುವಂತೆ ಹೇಳಿದ್ದಳಂತೆ. ಆದ್ರೆ, ಮಧ್ಯಾಹ್ನವಾದರೂ ಪತಿ ಚಾಕೋಲೆಟ್ ತಂದು ಕೊಟ್ಟಿಲ್ಲ. ಅಲ್ಲದೇ ಫೋನ್ ಮಾಡಿದ್ದರೂ ಪತಿ ಸ್ವೀಕರಿಸಿಲ್ವಂತೆ. ಇದರಿಂದ ಮನನೊಂದು ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ.

ಬಳಿಕ ಪತಿ ಮನೆಗೆ ಬಂದು ನೋಡಿದಾಗ ನಂದಿನಿ ನೇಣು ಹಾಕಿಕೊಂಡಿದ್ದಳು. ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದ್ರೆ, ಅಷ್ಟರಲ್ಲಾಗಲೇ ನಂದಿನಿ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮೃತ ನಂದಿನಿ‌ಗೆ ಇಬ್ಬರು ಮಕ್ಕಳಿದ್ದಾರೆ.

ಚಾಕೋಲೆಟ್​ ತಂದು ಕೊಡದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗುತ್ತಿದೆ. ಆದ್ರೆ, ಈ ಬಗ್ಗೆ ಪೊಲೀಸರು ಯಾವುದೇ ಖಚಿತ ಕಾರಣ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸ್ ತನಿಖೆ ಬಳಿಕ ನಂದಿನಿ ಸಾವಿನ ಬಗ್ಗೆ ಸತ್ಯಾಸತ್ಯತೆ ತಿಳಿದುಬರಲಿದೆ.

Published On - 11:53 am, Fri, 7 April 23

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?