AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಸಬ್​ಅರ್ಬನ್ ರೈಲು ಯೋಜನೆಗೆ ವೇಗ: ದೇಶದಲ್ಲೇ ಅತಿ ಉದ್ದದ ಯು ಗರ್ಡರ್‌ ಅಳವಡಿಕೆಗೆ ಸಿದ್ಧತೆ

Bengaluru Suburban Rail Project: ದೇವನಹಳ್ಳಿಯಲ್ಲಿರುವ ಕಾಸ್ಟಿಂಗ್ ಯಾರ್ಡ್​ನಲ್ಲಿ ಅತಿ ಉದ್ದದ ಯುಗಾರ್ಡ್ ಸಿದ್ಧಪಡಿಸಲಾಗಿದೆ. ‘ಯು’ ಆಕಾರದಲ್ಲಿರುವ ಇಂತಹ 450 ‘ಯು-ಗರ್ಡರ್’ಗಳು ಮಲ್ಲಿಗೆ ಲೈನ್​ನಲ್ಲಿ ಅಗತ್ಯವಾಗಿವೆ. ಇದನ್ನು ತಯಾರಿಸಿ ಯಶವಂತಪುರ-ಹೆಬ್ಬಾಳ ನಡುವಿನ 8 ಕಿ.ಮೀ. ಮಾರ್ಗದಲ್ಲಿ ಸದ್ಯದಲ್ಲೇ ಅಳವಡಿಸಲಾಗುವುದು ಎಂದು ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ.

ಬೆಂಗಳೂರು ಸಬ್​ಅರ್ಬನ್ ರೈಲು ಯೋಜನೆಗೆ ವೇಗ: ದೇಶದಲ್ಲೇ ಅತಿ ಉದ್ದದ ಯು ಗರ್ಡರ್‌ ಅಳವಡಿಕೆಗೆ ಸಿದ್ಧತೆ
ಯು ಗರ್ಡರ್‌ (PC Credit - MB Patil Tweet)
TV9 Web
| Edited By: |

Updated on: Jan 08, 2024 | 11:43 AM

Share

ಬೆಂಗಳೂರು, ಜನವರಿ 8: ಬೆಂಗಳೂರು ಉಪನಗರ ರೈಲು ಯೋಜನೆ (Bengaluru Suburban Rail Project) ಅಥವಾ ಸಬ್​​ಅರ್ಬನ್ ಯೋಜನೆಯ ಕಾಮಗಾರಿಗೆ ತುಸು ವೇಗ ದೊರೆತಿದ್ದು, ಕಾರಿಡಾರ್‌- 2 ರಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ 31 ಮೀ ಉದ್ದದ ಯು ಗರ್ಡರ್‌ (U Girder) ಅಳವಡಿಕೆಗೆ ಸಿದ್ಧತೆ ಮಾಡಲಾಗುತ್ತಿದೆ. ಇಲ್ಲಿಯವರೆಗೂ ಮೆಟ್ರೋದಲ್ಲಿ 28 ಮೀ. ಉದ್ದದ ಗರ್ಡರ್ ತಯಾರಿಸಿ ಅಳವಡಿಕೆ‌ ಮಾಡಲಾಗ್ತಿತ್ತು. ಆದರೆ, ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಯಲ್ಲಿ ಈ ದಾಖಲೆಯನ್ನು ಮುರಿಯಲಾಗುತ್ತಿದೆ.

ಯು ಗರ್ಡರ್‌ ಅಳವಡಿಕೆ ಬಗ್ಗೆ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ದೇವನಹಳ್ಳಿಯಲ್ಲಿರುವ ಕಾಸ್ಟಿಂಗ್ ಯಾರ್ಡ್​ನಲ್ಲಿ ಅತಿ ಉದ್ದದ ಯುಗಾರ್ಡ್ ಸಿದ್ಧಪಡಿಸಲಾಗಿದೆ. ‘ಯು’ ಆಕಾರದಲ್ಲಿರುವ ಇಂತಹ 450 ‘ಯು-ಗರ್ಡರ್’ಗಳು ಮಲ್ಲಿಗೆ ಲೈನ್​ನಲ್ಲಿ ಅಗತ್ಯವಾಗಿವೆ. ಇದನ್ನು ತಯಾರಿಸಿ ಯಶವಂತಪುರ-ಹೆಬ್ಬಾಳ ನಡುವಿನ 8 ಕಿ.ಮೀ. ಮಾರ್ಗದಲ್ಲಿ ಸದ್ಯದಲ್ಲೇ ಅಳವಡಿಸಲಾಗುವುದು ಎಂದು ಅವರು ಟ್ವೀಟ್​ನಲ್ಲಿ ಉಲ್ಲೇಖಿಸಿದ್ದಾರೆ.

ಪ್ರತೀ ಗರ್ಡರ್ ತಯಾರಿಕೆಗೂ ‘ಎಂ 60’ ಗುಣಮಟ್ಟದ 69.5 ಕ್ಯೂಬಿಕ್ ಮೀಟರ್ ಕಾಂಕ್ರೀಟ್ ಬೇಕಾಗುತ್ತದೆ. ಕಾಂಕ್ರೀಟ್ ಮೂಲಕ ತಯಾರಿಸಿದ ಯು ಗರ್ಡರ್ ತಲಾ 178 ಟನ್ ಭಾರವಿರುತ್ತವೆ. ಇವುಗಳಿಂದ ಕಾಮಗಾರಿಗೆ ತಗುಲುವ ಸಮಯ ಸಾಕಷ್ಟು ಉಳಿಯಲಿದೆ. ಇದನ್ನು ‘ಆಸ್ ಸಿಸ್ಟಮ್’ ಕಂಪನಿಯು ಬೆಂಗಳೂರು ಸಬರ್ಬನ್ ರೈಲು ಯೋಜನೆಗಾಗಿ ವಿನ್ಯಾಸಗೊಳಿಸಿದೆ. ಚೆನ್ನೈನ ಐಐಟಿ ಮತ್ತು ಜನರಲ್ ಕನ್ಸಲ್ಟೆಂಟ್ ಕಂಪನಿಗಳು ಕೂಡ ಇದರಲ್ಲಿ ಸಕ್ರಿಯ ಪಾತ್ರ ವಹಿಸಿವೆ ಎಂದು ಸಚಿವರು ಹೇಳಿದ್ದಾರೆ.

ಇದನ್ನೂ ಓದಿ: ಮದುವೆ, ಪ್ರವಾಸಕ್ಕೂ ಬಿಎಂಟಿಸಿ ಬಸ್: ಯಾವ ಬಸ್​​​ಗೆ ಎಷ್ಟು ಬಾಡಿಗೆ? ಇಲ್ಲಿದೆ ವಿವರ

ಇಂತಹ ಗರ್ಡರ್ ಅಳವಡಿಸುವುದರಿಂದ ನೇರವಾಗಿ ಹಳಿಗಳನ್ನು ಅಳವಡಿಸಲು ಸಾಧ್ಯವಾಗಲಿದೆ. ಯು-ಗರ್ಡರ್ ಸಿದ್ಧಪಡಿಸಿರುವುದು ಒಂದು ತಾಂತ್ರಿಕ ಅದ್ಭುತವಾಗಿದ್ದು ಕೆ-ರೈಡ್ ಇದರ ಉಸ್ತುವಾರಿ ಮತ್ತು ಗುಣಮಟ್ಟ ನಿಯಂತ್ರಣಗಳನ್ನು ನೋಡಿಕೊಂಡಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?