AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

32 ಕೋಟಿ ತೆರಿಗೆ ಬಾಕಿ; ಮಂತ್ರಿ ಮಾಲ್​ಗೆ ಬೀಗ ಜಡಿದು ಲೈಸೆನ್ಸ್​ ಕ್ಯಾನ್ಸಲ್​​​ ಮಾಡಿದ ಬಿಬಿಎಂಪಿ

ಒನ್ ಟೈಂ ಪೇಮೆಂಟ್​ಗೆ ಅವಕಾಶ ಕೊಟ್ಟಿದ್ದರೂ ತೆರಿಗೆ ಪಾವತಿಸದ ಕಾರಣ ಮುಂಜಾನೆಯೇ ಬಿಬಿಎಂಪಿ ಅಧಿಕಾರಿಗಳು ಮಾಲ್​ಗೆ ಬೀಗ ಜಡಿದಿದ್ದಾರೆ. ಹಾಗೂ ಮಂತ್ರಿ ಮಾಲ್​ ಲೈಸೆನ್ಸ್​ ರದ್ದು ಮಾಡಲಾಗಿದೆ. ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್​ಗೆ ಮತ್ತೆ ಬೀಗ ಬಿದ್ದಿದೆ. ಮಂತ್ರಿ ಮಾಲ್ 32 ಕೋಟಿ ತೆರಿಗೆ ಬಾಕಿ ಉಳಿಸಿಕೊಂಡಿದೆ.

32 ಕೋಟಿ ತೆರಿಗೆ ಬಾಕಿ; ಮಂತ್ರಿ ಮಾಲ್​ಗೆ ಬೀಗ ಜಡಿದು ಲೈಸೆನ್ಸ್​ ಕ್ಯಾನ್ಸಲ್​​​ ಮಾಡಿದ ಬಿಬಿಎಂಪಿ
ಮಂತ್ರಿ ಮಾಲ್​ಗೆ ಬೀಗ
TV9 Web
| Edited By: |

Updated on: Mar 16, 2024 | 10:49 AM

Share

ಬೆಂಗಳೂರು, ಮಾರ್ಚ್​.16: ಕೋಟಿ ಕೋಟಿ ರೂಪಾಯಿ ತೆರಿಗೆ (Tax) ಹಣ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು (BBMP) ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್​ಗೆ (Mantri Square Mall) ಮತ್ತೊಮ್ಮೆ ಬೀಗ ಜಡಿದಿದ್ದಾರೆ. ಮುಂಜಾನೆಯೇ ಮಾಲ್​ಗೆ ಬೀಗ ಹಾಕಲಾಗಿದ್ದು ಲೈಸೆನ್ಸ್​ ಕ್ಯಾನ್ಸಲ್​​​ ಮಾಡಲಾಗಿದೆ. ಮಂತ್ರಿ ಮಾಲ್​ ಸುಮಾರು 32 ಕೋಟಿ ವರೆಗೂ ತೆರಿಗೆ ಬಾಕಿ ಉಳಿಸಿಕೊಂಡಿದೆ. ಪಾಲಿಕೆ ಒನ್ ಟೈಂ ಪೇಮೆಂಟ್​ಗೆ ಅವಕಾಶ ಕೊಟ್ಟಿತ್ತು. ಆದರೆ ಸೆಟಲ್​ ಆಗದಿರುವ ಕಾರಣ ಮಾಲ್​ಗೆ ಬೀಗ ಜಡಿದಿದೆ.

ಈ ಹಿಂದೆಯೂ ಅನೇಕ ಬಾರಿ ತೆರಿಗೆ ವಿಚಾರವಾಗಿ ಮಂತ್ರ ಮಾಲ್ ಗೆ ಬೀಗ ಹಾಕಲಾಗಿತ್ತು. ಇದೀಗ ಮತ್ತೆ ಇಂದು ಮುಂಜಾನೆ ಬಿಬಿಎಂಪಿ ಅಧಿಕಾರಿಗಳು ಮಾಲ್ ಗೆ ಬೀಗ ಹಾಕಿದ್ದಾರೆ. ಮಾರ್ಷಲ್ ಹಾಗೂ ಪೊಲೀಸರ ಬಿಗಿ ಭದ್ರತೆಯಲ್ಲಿ ಮಾಲ್ ಮುಖ್ಯ ಪ್ರವೇಶ ದ್ವಾರಕ್ಕೆ ಬೀಗ ಜಡಿಯಲಾಗಿದೆ. ತೆರಿಗೆ ಪಾವತಿಸದ ಹಿನ್ನೆಲೆ ಲೈಸೆನ್ಸ್ ಕೂಡ ರದ್ದು ಮಾಡಲಾಗಿದೆ.

ಮಾಲ್​​ನ ಮುಖ್ಯ ದ್ವಾರಕ್ಕೆ ಬೀಗ ಹಾಕುವುದರೊಂದಿಗೆ ನೋಟಿಸ್ ಕೂಡ ಅಂಟಿಸಲಾಗಿದೆ. ಬಿಬಿಎಂಪಿ ಕಾಯ್ದೆ 2020ರ ಕಲಂ 156 ಹಾಗೂ ದಿನಾಂಕ 2023ರ ಡಿಸೆಂಬರ್ 06 ರ ಸುತ್ತೊಲೆಯಂತೆ, ನಿಮ್ಮ ವ್ಯಾಪಾರ ಪರವಾನಗಿಯನ್ನು ಅಮಾನತುಗೊಳಿಸಲಾಗಿದೆ. ಬಿಬಿಎಂಪಿ ಆದೇಶ ಮೇರೆಗೆ ಬಾಕಿ ಆಸ್ತಿ ತೆರಿಗೆಗಳನ್ನು ಪಾವತಿಸದ ಕಾರಣಕ್ಕಾಗಿ ಆಸ್ತಿಯನ್ನು ಸೀಲ್ ಮಾಡಲಾಗಿದೆ ಎಂದು ಬ್ಯಾನರ್ ಅಳಡಿಸಲಾಗಿದೆ.

ಇದನ್ನೂ ಓದಿ: ಡಾ ಸಿಎನ್ ಮಂಜುನಾಥ್ ಸ್ಪರ್ಧೆ ಡಿಕೆ ಸಹೋದರರ ಶಿಬಿರದಲ್ಲಿ ಆತಂಕ ಮೂಡಿಸಿದೆಯೇ? ಶಿವಕುಮಾರ್ ಪ್ರತಿಕ್ರಿಯೆ ಅದನ್ನು ಸೂಚಿಸುತ್ತದೆ!

ಬೆಂಗಳೂರಿಂದ ಗಲ್ಫ್ ರಾಷ್ಟ್ರಗಳಿಗೆ ಮಾನವ ಕಳ್ಳ ಸಾಗಣೆ?

ಬೆಂಗಳೂರಿನಲ್ಲಿ ಮಾನವ ಕಳ್ಳ ಸಾಗಣೆ ಎಂದು ಆರೋಪಿಸಿ NCPCR ಅಧ್ಯಕ್ಷ ಪ್ರಿಯಾಂಕ್ ಕಂಗೂನ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಸಂಪಿಗೇಹಳ್ಳಿ ಠಾಣಾ ವ್ಯಾಪ್ತಿಯ ಮದರಸಾ ಮೇಲೆ ನಡೆಸಿದ ದಾಳಿ ವೇಳೆ 20 ಬಾಲಕಿಯರು ಪತ್ತೆಯಾಗಿದ್ದು, ಅವರನ್ನ ಗಲ್ಫ್ ರಾಷ್ಟ್ರಗಳಿ ಸಾಗಿಸಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ X ನಲ್ಲಿ ಬರೆದುಕೊಂಡಿರುವ ಪ್ರಿಯಾಂಕ ಕಂಗೂನ್, FIR ದಾಖಲಿಸುವಂತೆ ಸಂಪಿಗೇಹಳ್ಳಿ ಠಾಣೆಯಲ್ಲಿ ಕುಳಿತಿ ಪ್ರಸಂಗ ನಡೆದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ