AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

32 ಕೋಟಿ ತೆರಿಗೆ ಬಾಕಿ; ಮಂತ್ರಿ ಮಾಲ್​ಗೆ ಬೀಗ ಜಡಿದು ಲೈಸೆನ್ಸ್​ ಕ್ಯಾನ್ಸಲ್​​​ ಮಾಡಿದ ಬಿಬಿಎಂಪಿ

ಒನ್ ಟೈಂ ಪೇಮೆಂಟ್​ಗೆ ಅವಕಾಶ ಕೊಟ್ಟಿದ್ದರೂ ತೆರಿಗೆ ಪಾವತಿಸದ ಕಾರಣ ಮುಂಜಾನೆಯೇ ಬಿಬಿಎಂಪಿ ಅಧಿಕಾರಿಗಳು ಮಾಲ್​ಗೆ ಬೀಗ ಜಡಿದಿದ್ದಾರೆ. ಹಾಗೂ ಮಂತ್ರಿ ಮಾಲ್​ ಲೈಸೆನ್ಸ್​ ರದ್ದು ಮಾಡಲಾಗಿದೆ. ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್​ಗೆ ಮತ್ತೆ ಬೀಗ ಬಿದ್ದಿದೆ. ಮಂತ್ರಿ ಮಾಲ್ 32 ಕೋಟಿ ತೆರಿಗೆ ಬಾಕಿ ಉಳಿಸಿಕೊಂಡಿದೆ.

32 ಕೋಟಿ ತೆರಿಗೆ ಬಾಕಿ; ಮಂತ್ರಿ ಮಾಲ್​ಗೆ ಬೀಗ ಜಡಿದು ಲೈಸೆನ್ಸ್​ ಕ್ಯಾನ್ಸಲ್​​​ ಮಾಡಿದ ಬಿಬಿಎಂಪಿ
ಮಂತ್ರಿ ಮಾಲ್​ಗೆ ಬೀಗ
TV9 Web
| Edited By: ಆಯೇಷಾ ಬಾನು|

Updated on: Mar 16, 2024 | 10:49 AM

Share

ಬೆಂಗಳೂರು, ಮಾರ್ಚ್​.16: ಕೋಟಿ ಕೋಟಿ ರೂಪಾಯಿ ತೆರಿಗೆ (Tax) ಹಣ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು (BBMP) ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್​ಗೆ (Mantri Square Mall) ಮತ್ತೊಮ್ಮೆ ಬೀಗ ಜಡಿದಿದ್ದಾರೆ. ಮುಂಜಾನೆಯೇ ಮಾಲ್​ಗೆ ಬೀಗ ಹಾಕಲಾಗಿದ್ದು ಲೈಸೆನ್ಸ್​ ಕ್ಯಾನ್ಸಲ್​​​ ಮಾಡಲಾಗಿದೆ. ಮಂತ್ರಿ ಮಾಲ್​ ಸುಮಾರು 32 ಕೋಟಿ ವರೆಗೂ ತೆರಿಗೆ ಬಾಕಿ ಉಳಿಸಿಕೊಂಡಿದೆ. ಪಾಲಿಕೆ ಒನ್ ಟೈಂ ಪೇಮೆಂಟ್​ಗೆ ಅವಕಾಶ ಕೊಟ್ಟಿತ್ತು. ಆದರೆ ಸೆಟಲ್​ ಆಗದಿರುವ ಕಾರಣ ಮಾಲ್​ಗೆ ಬೀಗ ಜಡಿದಿದೆ.

ಈ ಹಿಂದೆಯೂ ಅನೇಕ ಬಾರಿ ತೆರಿಗೆ ವಿಚಾರವಾಗಿ ಮಂತ್ರ ಮಾಲ್ ಗೆ ಬೀಗ ಹಾಕಲಾಗಿತ್ತು. ಇದೀಗ ಮತ್ತೆ ಇಂದು ಮುಂಜಾನೆ ಬಿಬಿಎಂಪಿ ಅಧಿಕಾರಿಗಳು ಮಾಲ್ ಗೆ ಬೀಗ ಹಾಕಿದ್ದಾರೆ. ಮಾರ್ಷಲ್ ಹಾಗೂ ಪೊಲೀಸರ ಬಿಗಿ ಭದ್ರತೆಯಲ್ಲಿ ಮಾಲ್ ಮುಖ್ಯ ಪ್ರವೇಶ ದ್ವಾರಕ್ಕೆ ಬೀಗ ಜಡಿಯಲಾಗಿದೆ. ತೆರಿಗೆ ಪಾವತಿಸದ ಹಿನ್ನೆಲೆ ಲೈಸೆನ್ಸ್ ಕೂಡ ರದ್ದು ಮಾಡಲಾಗಿದೆ.

ಮಾಲ್​​ನ ಮುಖ್ಯ ದ್ವಾರಕ್ಕೆ ಬೀಗ ಹಾಕುವುದರೊಂದಿಗೆ ನೋಟಿಸ್ ಕೂಡ ಅಂಟಿಸಲಾಗಿದೆ. ಬಿಬಿಎಂಪಿ ಕಾಯ್ದೆ 2020ರ ಕಲಂ 156 ಹಾಗೂ ದಿನಾಂಕ 2023ರ ಡಿಸೆಂಬರ್ 06 ರ ಸುತ್ತೊಲೆಯಂತೆ, ನಿಮ್ಮ ವ್ಯಾಪಾರ ಪರವಾನಗಿಯನ್ನು ಅಮಾನತುಗೊಳಿಸಲಾಗಿದೆ. ಬಿಬಿಎಂಪಿ ಆದೇಶ ಮೇರೆಗೆ ಬಾಕಿ ಆಸ್ತಿ ತೆರಿಗೆಗಳನ್ನು ಪಾವತಿಸದ ಕಾರಣಕ್ಕಾಗಿ ಆಸ್ತಿಯನ್ನು ಸೀಲ್ ಮಾಡಲಾಗಿದೆ ಎಂದು ಬ್ಯಾನರ್ ಅಳಡಿಸಲಾಗಿದೆ.

ಇದನ್ನೂ ಓದಿ: ಡಾ ಸಿಎನ್ ಮಂಜುನಾಥ್ ಸ್ಪರ್ಧೆ ಡಿಕೆ ಸಹೋದರರ ಶಿಬಿರದಲ್ಲಿ ಆತಂಕ ಮೂಡಿಸಿದೆಯೇ? ಶಿವಕುಮಾರ್ ಪ್ರತಿಕ್ರಿಯೆ ಅದನ್ನು ಸೂಚಿಸುತ್ತದೆ!

ಬೆಂಗಳೂರಿಂದ ಗಲ್ಫ್ ರಾಷ್ಟ್ರಗಳಿಗೆ ಮಾನವ ಕಳ್ಳ ಸಾಗಣೆ?

ಬೆಂಗಳೂರಿನಲ್ಲಿ ಮಾನವ ಕಳ್ಳ ಸಾಗಣೆ ಎಂದು ಆರೋಪಿಸಿ NCPCR ಅಧ್ಯಕ್ಷ ಪ್ರಿಯಾಂಕ್ ಕಂಗೂನ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಸಂಪಿಗೇಹಳ್ಳಿ ಠಾಣಾ ವ್ಯಾಪ್ತಿಯ ಮದರಸಾ ಮೇಲೆ ನಡೆಸಿದ ದಾಳಿ ವೇಳೆ 20 ಬಾಲಕಿಯರು ಪತ್ತೆಯಾಗಿದ್ದು, ಅವರನ್ನ ಗಲ್ಫ್ ರಾಷ್ಟ್ರಗಳಿ ಸಾಗಿಸಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ X ನಲ್ಲಿ ಬರೆದುಕೊಂಡಿರುವ ಪ್ರಿಯಾಂಕ ಕಂಗೂನ್, FIR ದಾಖಲಿಸುವಂತೆ ಸಂಪಿಗೇಹಳ್ಳಿ ಠಾಣೆಯಲ್ಲಿ ಕುಳಿತಿ ಪ್ರಸಂಗ ನಡೆದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ