AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಇಂದು 329 ಜನರಿಗೆ ಕೊರೊನಾ ಸೋಂಕು ದೃಢ; ಓರ್ವ ಬಲಿ

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 3,819 ಜನರಿಗೆ ಕೊವಿಡ್ ಟೆಸ್ಟ್(Covid 19 Test) ಮಾಡಲಾಗಿದ್ದು, ಅದರಲ್ಲಿ 329 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಗದಗ(Gadag) ಜಿಲ್ಲೆಯಲ್ಲಿ 48 ವರ್ಷದ ವ್ಯಕ್ತಿಯೋರ್ವ ಕೊರೊನಾಗೆ ಬಲಿಯಾಗಿದ್ದಾನೆ.

ರಾಜ್ಯದಲ್ಲಿ ಇಂದು 329 ಜನರಿಗೆ ಕೊರೊನಾ ಸೋಂಕು ದೃಢ; ಓರ್ವ ಬಲಿ
ಕೊರೊನಾ ಕೇಸ್​
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on:Jan 07, 2024 | 9:51 PM

ಬೆಂಗಳೂರು,ಜ.07: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 3,819 ಜನರಿಗೆ ಕೊವಿಡ್ ಟೆಸ್ಟ್(Covid 19 Test) ಮಾಡಲಾಗಿದ್ದು, ಅದರಲ್ಲಿ 329 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಗದಗ(Gadag) ಜಿಲ್ಲೆಯಲ್ಲಿ 48 ವರ್ಷದ ವ್ಯಕ್ತಿಯೋರ್ವ ಕೊರೊನಾಗೆ ಬಲಿಯಾಗಿದ್ದಾನೆ. ಇನ್ನು ಬೆಂಗಳೂರಿನಲ್ಲಿಯೇ 177 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ರಾಜ್ಯದ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 8.61 ರಷ್ಟಿದೆ. ಈ ಮೂಲಕ 1,181 ಜನರಲ್ಲಿ ಕೊರೊನಾ ಸಕ್ರಿಯ ಕೇಸ್​ಗಳಿವೆ. ಇಂದು 283 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಿದೆ.

ಎಲ್ಲೆಲ್ಲಿ ಎಷ್ಟು?

ರಾಜ್ಯದಲ್ಲಿ ಇಂದು 329 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಬೆಂಗಳೂರು 177, ಮೈಸೂರು 27, ಹಾಸನ 17, ತುಮಕೂರು 16, ಬಾಗಲಕೋಟೆ 10, ಮಂಡ್ಯ 10, ಬೆಂಗಳೂರು ಗ್ರಾಮಾಂತರ 8, ಚಿಕ್ಕಮಗಳೂರು 7, ಚಿತ್ರದುರ್ಗ 7, ಧಾರವಾಡ 7, ಉತ್ತರ ಕನ್ನಡ 6, ಚಾಮರಾಜನಗರ 5, ರಾಯಚೂರು 5, ಚಿಕ್ಕಬಳ್ಳಾಪುರ 4, ಕೋಲಾರ 4, ಕೊಪ್ಪಳ 4, ಬಳ್ಳಾರಿ 3, ಶಿವಮೊಗ್ಗ 3, ವಿಜಯನಗರ 3, ದಾವಣಗೆರೆ 2, ದಕ್ಷಿಣ ಕನ್ನಡ 1, ಗದಗ 1, ಕಲಬುರಗಿಯಲ್ಲಿ 1 ಕೇಸ್​ ಪತ್ತೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

 ಇದನ್ನೂ ಓದಿ:ಕೋವಿಡ್ ಸೋಂಕಿತರ ಸಂಪರ್ಕಕ್ಕೆ ಬಂದವರಿಗೆ ರೋಗ ಲಕ್ಷಣ ಇದ್ದರೆ ಕೊರೊನಾ ಟೆಸ್ಟ್: ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ

ಕೊವಿಡ್​ ಬಗ್ಗೆ ರಾಜ್ಯದ ಜನರು ಆತಂಕ ಪಡುವ ಅಗತ್ಯ ಇಲ್ಲಎಂದು ಹುಬ್ಬಳ್ಳಿಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದರು. ಹುಬ್ಬಳ್ಳಿಯಲ್ಲಿ ಮಾತನಾಡಿದ್ದ ಅವರು ‘ಬೇರೆ ರಾಜ್ಯಕ್ಕೆ ಹೋಲಿಸಿದರೆ ಕರ್ನಾಟಕದಲ್ಲಿ ಟೆಸ್ಟಿಂಗ್​ ಹೆಚ್ಚಿಸಿದ್ದೇವೆ. ಸಹಜವಾಗಿ ಕೊರೊನಾ ಕೇಸ್​ ಸ್ವಲ್ಪ ಜಾಸ್ತಿ ಆಗಿದ್ದು, ಸುಮಾರು 7 ಸಾವಿರ ಕೊವಿಡ್​ ಟೆಸ್ಟ್​ ಮಾಡುತ್ತಿದ್ದೇವೆ. ಬೇರೆ ಬೇರೆ ಆರೋಗ್ಯ ಸಮಸ್ಯೆ ಇದ್ದವರು ಎಚ್ಚರದಿಂದ ಇರಬೇಕು ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:47 pm, Sun, 7 January 24

ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ