AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕಂಡ ಕಂಡ ಹೆಣ್ಮಕ್ಕಳಿಗೆ ಮುತ್ತಿಟ್ಟು ಎಸ್ಕೇಪ್ ಅಗುತ್ತಿದ್ದ ಕಾಮುಕ ಕೊನೆಗೂ ಸಿಕ್ಕಿಬಿದ್ದ

ಕಂಡ ಕಂಡ ಹೆಣ್ಣುಮಕ್ಕಳ ತುಟಿಗೆ ಮುತ್ತಿಟ್ಟು ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಕಾಮುಕ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ಬೆಂಗಳೂರಿನಲ್ಲಿ ವಾಕಿಂಗ್ ಮಾಡುತ್ತಿದ್ದ ಇಬ್ಬರು ಮಹಿಳೆಯರನ್ನು ಸಾರ್ವಜನಿಕ ಸ್ಥಳದಲ್ಲಿ ಕಾಮುಕನೊಬ್ಬ ತಬ್ಬಿಕೊಂಡು ಮುತ್ತಿಟ್ಟು ಪರಾರಿಯಾಗಿದ್ದ. ಅಲ್ಲದೇ ಮಹಿಳೆಯರು ಗಲಾಟೆ ಮಾಡಿದಾಗ ಯಾರೂ ಬಂದು ಏನೂ ಮಾಡಲಾಗೊಲ್ಲ ಎಂದು ಬೆದರಿಕೆ ಹಾಕಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೆಂಗಳೂರಿನಲ್ಲಿ ಕಂಡ ಕಂಡ ಹೆಣ್ಮಕ್ಕಳಿಗೆ ಮುತ್ತಿಟ್ಟು ಎಸ್ಕೇಪ್ ಅಗುತ್ತಿದ್ದ ಕಾಮುಕ ಕೊನೆಗೂ ಸಿಕ್ಕಿಬಿದ್ದ
Madan
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Jun 10, 2025 | 3:08 PM

Share

ಬೆಂಗಳೂರು, (ಜೂನ್ 10): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ (Bengaluru) ಸಂಜೆ ವೇಳೆ ವಾಕಿಂಗ್ ಮಾಡುತ್ತಿದ್ದ ಇಬ್ಬರು ಪ್ರತ್ಯೇಕ ಮಹಿಳೆಯರನ್ನು ಸಾರ್ವಜನಿಕ ಸ್ಥಳದಲ್ಲಿಯೇ ಗಟ್ಟಿಯಾಗಿ ತಬ್ಬಿಕೊಂಡು ತುಟಿಗೆ ಮುತ್ತಿಡುವ ಮೂಲಕ ತನ್ನ ಕಾಮಚೇಷ್ಟೆ ಮೆರೆದ್ದವ ಸಿಕ್ಕಿಬಿದ್ದಿದ್ದಾನೆ. ಒಬ್ಬಂಟಿ ಮಹಿಳೆಯರನ್ನು ಬಲವಂತವಾಗಿ ತಬ್ಬಿಕೊಂಡು ಮುತ್ತಿಡುವ ಕಾಮುಕನ ಹೆಸರು ಮದನ್. ಬೆಂಗಳೂರು ನಗರದ ವಿವಿಧ ಉದ್ಯಾನಗಳು, ಸಣ್ಣ ಪಾರ್ಕ್‌ಗಳು, ಮೈದಾನಗಳು ಸೇರಿದಂತೆ ಮಹಿಳೆಯರು ವಾಯು ವಿಹಾರ ಮಾಡುವ ಪ್ರಮುಖ ರಸ್ತೆಗಳನ್ನು ಈ ಕಾಮುಕನ ಅಟ್ಟಹಾಸ ಮಿತಿ ಮೀರಿತ್ತು. ಪುಲಕೇಶಿ ನಗರದಲ್ಲಿ ಇಬ್ಬರು ಮಹಿಳೆಯರಿಗೆ ಮುತ್ತುಕೊಟ್ಟು ದೌರ್ಜನ್ಯ ಎಸಗಿದ್ದ, ಮೊಮೋಸ್ ಅಂಗಡಿ ಬಳಿ ನಿಂತಿದ್ದ ಯುವತಿಯ ತುಟಿಗೆ ಮುತ್ತಿಟ್ಟು ಅಲ್ಲಿಂದ ಎಸ್ಕೇಪ್ ಆಗಿದ್ದ ಕಾಮುಕ ಮದನ್, ಅದೇ ದಿನ ಪಾರ್ಕ್ ನಲ್ಲಿ ಮಹಿಳೆ ಒರ್ವರನ್ನು ಹಿಂಬಾಲಿಸಿ ಆಕೆಗೂ ಮುತ್ತಿಟ್ಟು ತಬ್ಬಿಕೊಂಡಿದ್ದ. ಈ ಸಂಬಂಧ ಪುಲಕೇಶಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಜೂನ್ 6 ರಂದು ವಾಯು ವಿಹಾರಕ್ಕೆ ಕುಟುಂಬದೊಂದಿಗೆ ಬಂದಿದ್ದ ಮಹಿಳೆಯೊಬ್ಬರ ಬಳಿ ಬಂದು ತಬ್ಬಿಕೊಂಡು ಬಲವಂತವಾಗಿ ತುಟಿಗೆ ಮುತ್ತು ಕೊಟ್ಟಿದ್ದ. ಬಳಿಕ ಇದೇ ಪಾರ್ಕ್‌ನಲ್ಲಿ ವಾಕಿಂಗ್ ಮಾಡುತ್ತಿದ್ದ ಇನ್ನೊಬ್ಬ ಮಹಿಳೆಯನ್ನೂ ತಬ್ಬಿ ಮುತ್ತು ಕೊಟ್ಟಿದ್ದಾನೆ. ಈ ಸಂಬಂಧ ಮಹಿಳೆ, ಪುಲಕೇಶಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿ ಮೇರೆಗೆ ಪೊಲೀಸರು ಕಾಮುಕ ಮದನ್​ ಗಾಗಿ ಹುಡುಕಾಟ ನಡೆಸುತ್ತಿದ್ದಾಗ ಬಾಣಸವಾಡಿಯಲ್ಲಿ ಸಿಕ್ಕಿಬಿದ್ದಿದ್ದಾನೆ.

ಇದನ್ನೂ ಓದಿ: ಬೆಂಗಳೂರಲ್ಲಿ ನಿಲ್ಲದ ಬೀದಿ ಪುಂಡರ ಹಾವಳಿ: ಯುವತಿ ಎದೆ ಮುಟ್ಟಿ ವಿಕೃತಿ ಮರೆದ ಕಾಮುಕ

ಸದ್ಯ ಪುಲಕೇಶಿ ನಗರ ಪೊಲೀಸರು, ಕಾಮುಕ ಮದನ್​ ನನ್ನು  ವಿಚಾರಣೆ ನಡೆಸಿದ್ದು, ವಿಚಾರಣೆ ವೇಳೆ ಮದನ್ ಅತಿಹೆಚ್ಚು ಅಶ್ಲೀಲ ನೋಡುತ್ತಿದ್ದ. ಬಳಿಕ ರಸ್ತೆಯಲ್ಲಿ ಬಂದು ಮಹಿಳೆಯರ ಮೇಲೆ ಎರಗುತಿದ್ದ ಎನ್ನುವುದು ಗೊತ್ತಾಗಿದೆ. ಇನ್ನು ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮದನ್, ಕೆಲ ತಿಂಗಳ ಹಿಂದೆ ಕೆಲಸ ಬಿಟ್ಟಿದ್ದ ಎಂದು ತಿಳಿದುಬಂದಿದೆ.

ಇದನ್ನೂ ಓದಿ
Image
ಜಾತ್ರೇಲಿ ಸಿಕ್ಕ ಪ್ರೇಯಸಿಯನ್ನ ಓಯೋ ರೂಮಿಗೆ ಕರೆದೊಯ್ದು ಹತ್ಯೆ:ಅಸಲಿ ಕಾರಣ
Image
ಬಾಲಕಿ ಶವ ಕೇಸ್: ಲೈಂಗಿಕ ಕ್ರಿಯೆಗೆ ಸಹಕರಿಸಿಲ್ಲವೆಂದು ಹತ್ಯೆ
Image
ಬೆಂಗಳೂರಲ್ಲಿ ನಿಲ್ಲದ ಬೀದಿ ಪುಂಡರ ಹಾವಳಿ: ಯುವತಿ ಎದೆ ಮುಟ್ಟಿ ವಿಕೃತಿ ಮರೆದ
Image
ಖಾಸಗಿ ಅಂಗ ಮುಟ್ಟಿ ವಿಕೃತಿ: ಸಾಮಾಜಿಕ ಜಾಲತಾಣದಲ್ಲಿ ಅಳಲು ತೋಡಿಕೊಂಡ ಯುವತಿ

ಪೂರ್ವ ವಿಭಾಗ ಡಿಸಿಪಿ ದೇವರಾಜ್ ಹೇಳಿದ್ದಿಷ್ಟು

ಇನ್ನು ಈ ಬಗ್ಗೆ ಪೂರ್ವ ವಿಭಾಗ ಡಿಸಿಪಿ ದೇವರಾಜ್ ಪ್ರತಿಕ್ರಿಯಿಸಿದ್ದು, ಇದೇ ಜೂನ್ 6ರಂದು ಸಂಜೆ 112 ಗೆ ಒಂದು ಫೋನ್ ಬಂದಿತ್ತು ಸ್ಥಳಕ್ಕೆ ಹೋದಾಗ ಮಹಿಳೆಯರೊಂದಿಗೆ ಅಸಭ್ಯ ವರ್ತನೆ ತೋರಿದ್ದು ಕಂಡುಬಂದಿದೆ. ಸ್ಥಳದಲ್ಲಿ ಇನ್ನೂ ಕೆಲ ಮಹಿಳೆಯರಿಗೆ ಈ ರೀತಿ ಆಗಿರುವುದು ತಿಳಿದುಬಂದಿತ್ತು. ನಂತರ ಆರೇಳು ಕಿ.ಮೀ. ಸಿಸಿಟಿವಿ ಪರಿಶೀಲನೆ ಮಾಡಿ 37 ವರ್ಷದ ಮದನ್ ಎಂಬಾತನನ್ನ ಬಂಧನ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಬಿಎಸ್ಸಿ ಕಂಪ್ಯೂಟರ್ ಸೈನ್ಸ್ ಗ್ರ್ಯಾಜುಯೇಟ್ ಆಗಿರುವ ಆರೋಪಿ ಬಾಣಸವಾಡಿ ಬಳಿ ವಾಸವಾಗಿದ್ದಾನೆ. ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಈತ ಇತ್ತೀಚೆಗೆ ಕೆಲಸ ಬಿಟ್ಟಿದ್ದ. ತನಿಖೆ ವೇಳೆ ಮೂರ್ನಾಲ್ಕು ಠಾಣಾ ವ್ಯಾಪ್ತಿಯಲ್ಲಿ ಈ ರೀತಿ ಮಾಡಿರುವುದಾಗಿ ಹೇಳಿದ್ದಾನೆ. ಹೆಣ್ಣೂರು,ಬಾಣಸವಾಡಿ,ರಾಮಮೂರ್ತಿ ಭಾಗದಲ್ಲಿ ಕೃತ್ಯ ಎಸಗಿದ್ದಾನೆ. ಆರೋಪಿಗೆ ಮದುವೆ ಆಗಿದೆ ಎನ್ನಲಾಗುತ್ತಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಈ ರೀತಿಯ ಹಲವು ಕೃತ್ಯಗಳು ನಡೆಯುತ್ತಿವೆ. ಕೆಲವೆಡೆ ಲೈಂಗಿಕವಾಗಿ ಹಿಂದೆ, ದೌರ್ಜನ್ಯಗಳು ನಡೆದರೆ, ಬಲವಂತವಾಗಿ ಎತ್ತಿಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಮಾಡಿದ ಘಟನೆಗಳೂ ನಡೆದಿವೆ. ಕೆ.ಆರ್. ಮಾರುಕಟ್ಟೆ, ಕೆ.ಆರ್.ಪುರದ ಬಳಿ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಘಟನೆಗಳು ವರದಿ ಆಗಿದ್ದವು. ನಂತರ, ಬೈಕ್‌ನಲ್ಲಿ ಡ್ರಾಪ್ ಕೇಳಿದ ಯುವತಿ ಮೇಲೆ ಅತ್ಯಾಚಾರ ಯತ್ನ ನಡೆದಿತ್ತು. ಅಲ್ಲದೇ ಇತ್ತೀಚೆಗೆ ಯುವತಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾಮುಕನೊಬ್ಬ ಬಂದು ಆಕೆಯ ಎದೆಭಾಗವನ್ನು ಮುಟ್ಟಿ ಎಸ್ಕೇಪ್ ಆಗಿದ್ದ. ಈ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು.

Published On - 3:06 pm, Tue, 10 June 25

ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ