Sign In

By signing in or creating an account, you agree with Associated Broadcasting Company's Terms & Conditions and Privacy Policy.

ACB Raid: 20 ವರ್ಷಗಳ ಹಿಂದೆ ಮನೆಮನೆಗೆ ಪೇಪರ್, ಹಾಲು ಹಾಕುತ್ತಿದ್ದ ಬಿಡಿಎ ಮಧ್ಯವರ್ತಿ ಮೋಹನ್ ಮನೆಯಲ್ಲಿ ಇಂದು 4.5 ಕೆಜಿ ಚಿನ್ನ ಪತ್ತೆ!

ದಾಳಿ ವೇಳೆ ಬರೋಬ್ಬರಿ 4.5 ಕೆಜಿ ಚಿನ್ನ ಪತ್ತೆಯಾಗಿದೆ. ಐಷಾರಾಮಿ ಮನೆಯಲ್ಲಿ ಎರಡೂವರೆ ಕೋಟಿ ಮೌಲ್ಯದ ಚಿನ್ನ ಪತ್ತೆಯಾಗಿದೆ. ಮೋಹನ್ ಅಧಿಕಾರಿಗಳ ಜತೆ ಶಾಮೀಲಾಗಿ ಅಕ್ರಮ ನಡೆಸಿರುವ ಆರೋಪ ಕೇಳಿಬಂದಿದೆ.

ACB Raid: 20 ವರ್ಷಗಳ ಹಿಂದೆ ಮನೆಮನೆಗೆ ಪೇಪರ್, ಹಾಲು ಹಾಕುತ್ತಿದ್ದ ಬಿಡಿಎ ಮಧ್ಯವರ್ತಿ ಮೋಹನ್ ಮನೆಯಲ್ಲಿ ಇಂದು 4.5 ಕೆಜಿ ಚಿನ್ನ ಪತ್ತೆ!
ಮೋಹನ್​ ಮನೆಯಲ್ಲಿ ಪತ್ತೆಯಾದ ಚಿನ್ನಾಭರಣ
Follow us
TV9 Web
| Updated By: sandhya thejappa

Updated on:Mar 22, 2022 | 12:31 PM

ಬೆಂಗಳೂರು: ಬಿಡಿಎ (BDA) ಮಧ್ಯವರ್ತಿ ಮೋಹನ್ ಕುಮಾರ್ ಮನೆ ಮೇಲೆ ಎಸಿಬಿ (ACB) ಅಧಿಕಾರಿಗಳು ಇಂದು (ಮಾರ್ಚ್ 22) ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಮೋಹನ್ ವಿರುದ್ಧ ಭ್ರಷ್ಟಾಚಾರ, ಅವ್ಯವಹಾರದ ಆರೋಪದ ಹಿನ್ನೆಲೆ ಆರ್.ಟಿ.ನಗರದ ಮನೋರಾಯನಪಾಳ್ಯದಲ್ಲಿರುವ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಬರೋಬ್ಬರಿ 4.5 ಕೆಜಿ ಚಿನ್ನ ಪತ್ತೆಯಾಗಿದೆ. ಐಷಾರಾಮಿ ಮನೆಯಲ್ಲಿ ಎರಡೂವರೆ ಕೋಟಿ ಮೌಲ್ಯದ ಚಿನ್ನ ಪತ್ತೆಯಾಗಿದೆ. ಮೋಹನ್ ಅಧಿಕಾರಿಗಳ ಜತೆ ಶಾಮೀಲಾಗಿ ಅಕ್ರಮ ನಡೆಸಿರುವ ಆರೋಪ ಕೇಳಿಬಂದಿದೆ.

ಜೊತೆಗೆ ಮೋಹನ್ ಕುಮಾರ್ ಅವರ ಮನೆಯಲ್ಲಿ ಕಂತೆ ಕಂತೆ ಹಣವೂ ಪತ್ತೆಯಾಗಿದೆ. ಅಪಾರ ಪ್ರಮಾಣದ ಬೆಳ್ಳಿ ತಟ್ಟೆ, ಲೋಟ, ಬಟ್ಟಲು, ದೀಪ,  ಚಿನ್ನದ ಸರ, ಚಿನ್ನದ ಓಲೆ, ಚಿನ್ನಡ ಡಾಬು ಸಿಕ್ಕಿದೆ. 9 ಜನ ಎಸಿಬಿ ಅಧಿಕಾರಿಗಳ ತಂಡದಿಂದ ಶೋಧಕಾರ್ಯ ಮುಂದುವರಿದಿದೆ. ಎಸಿಬಿ ಡಿವೈಎಸ್​ಪಿ ಪ್ರಕಾಶ್ ರೆಡ್ಡಿ, ಇನ್ಸ್‌ಪೆಕ್ಟರ್ ಮಂಜುನಾಥ್ ಸೇರಿದಂತೆ 9 ಅಧಿಕಾರಿಗಳ ತಂಡದಿಂದ ಶೋಧಕಾರ್ಯ ನಡೆಯುತ್ತಿದೆ.

ಅವ್ಯವಹಾರದಲ್ಲಿ ತೊಡಗಿದ ಆರೋಪ ಕೇಳಿಬಂದ ಹಿನ್ನೆಲೆ ಬೆಂಗಳೂರಿನಲ್ಲಿ ಏಕಕಾಲದಲ್ಲಿ ಬೆಂಗಳೂರಿನಲ್ಲಿ ಎಸಿಬಿ ಎಸ್​ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ 100ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳಿಂದ, 9 ಕಡೆ ದಾಳಿ ಮಾಡಲಾಗಿದೆ. ಚಾಮರಾಜಪೇಟೆಯ ಬಿ.ಎನ್.ರಘು, R.T.ನಗರ ಬಳಿಯ ಮನೋರಾಯನಪಾಳ್ಯದ ಮೋಹನ್, ದೊಮ್ಮಲೂರಿನ ಮನೋಜ್, ಆರ್.ಆರ್.ನಗರದ ತೇಜು, ಮಲ್ಲತ್ತಹಳ್ಳಿಯ ಮುನಿರತ್ನ ಅಲಿಯಾಸ್ ರತ್ನವೇಲು, ಮುದ್ದಿನಪಾಳ್ಯದ ಅಶ್ವತ್ಥ್ ಹಾಗೂ ಚಿಕ್ಕಹನುಮಯ್ಯ, ಚಾಮುಂಡೇಶ್ವರಿನಗರದ ರಾಮು ಮತ್ತು ಚಾಮುಂಡೇಶ್ವರಿ ನಗರ, ಬಿಡಿಎ ಲೇಔಟ್​ನ ಲಕ್ಷ್ಮಣ ಮೇಲೆ ಎಸಿಬಿ ಅಧಿಕಾರಿಗಳಿಂದ ದಾಳಿ ಮಾಡಲಾಗಿದೆ.

ಪೆಪರ್, ಹಾಲು ಹಾಕುತ್ತಿದ್ದ ಮೋಹನ್: ಮೋಹನ್ ಕುಮಾರ್ ದೊಡ್ಡಬಳ್ಳಾಪುರದ ಮಳವಳ್ಳಿಯ ಗ್ರಾಮದಲ್ಲಿ ವಿದ್ಯಾಭ್ಯಾಸ ಮಾಡಿದ್ದಾರೆ. ಎಸ್​ಎಸ್​ಎಲ್​ಸಿ ಮುಗಿಸಿದ್ದಾರೆ. ಇವರು ಮೊದಲಿಗೆ ಬೆಂಗಳೂರಿನಲ್ಲಿ ಪೆಪರ್, ಹಾಲು ವಿತರಣೆ ಮಾಡುತ್ತಿದ್ದರಂತೆ. ಬಳಿಕ ಬಿಡಿಎ ಅಧಿಕಾರಿಯ ಒಬ್ಬರಿಗೆ ಚಾಲಕನಾಗಿ ಸೇರಿಕೊಂಡರು. ಅಲ್ಲಿಂದ ಬಿಡಿಎ ಜೊತೆಗೆ ನಂಟು ಶುರುವಾಗಿದೆ. ಇವರಿಗೆ ಎರಡು ಮದುವೆ ಆಗಿದೆ. ಈಗ ಇರುವ ಖುಷಿ ಮನೆ ಮೊದಲ ಹೆಂಡತಿಗಾಗಿ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಮೊದಲನೆಯ ಹೆಂಡತಿ ಜೊತೆ ಡಿವೋರ್ಸ್ ಆಗಿದೆ. ಎರಡು ಹೆಂಡತಿ ಜೊತೆಗೆ ಜೀವನ ಮಾಡುತ್ತಿದ್ದಾರೆ.ಮನೆಯ ಪಕ್ಕದಲ್ಲಿ ಒಂದು ಫುಲ್ ಸೈಟ್ ಕೂಡ ಇದೆ ಎಂದು ಟಿವಿ9ಗೆ ಉನ್ನತ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ.

ಇದನ್ನೂ ಓದಿ

ಉಕ್ರೇನ್ ಮೇಲಿನ ರಷ್ಯಾ ದಾಳಿ ಖಂಡಿಸಲು ಭಾರತಕ್ಕೆ ಭಯ: ಜೋ ಬೈಡೆನ್

ಕಲ್ಲಂಗಡಿ ಬೀಜಗಳನ್ನ ಎಸೆಯುವ ಮುನ್ನ ಅದರ ಪ್ರಯೋಜನಗಳನ್ನ ತಿಳಿದುಕೊಳ್ಳಿ

Published On - 10:39 am, Tue, 22 March 22

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ