AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ACB Raid: 20 ವರ್ಷಗಳ ಹಿಂದೆ ಮನೆಮನೆಗೆ ಪೇಪರ್, ಹಾಲು ಹಾಕುತ್ತಿದ್ದ ಬಿಡಿಎ ಮಧ್ಯವರ್ತಿ ಮೋಹನ್ ಮನೆಯಲ್ಲಿ ಇಂದು 4.5 ಕೆಜಿ ಚಿನ್ನ ಪತ್ತೆ!

ದಾಳಿ ವೇಳೆ ಬರೋಬ್ಬರಿ 4.5 ಕೆಜಿ ಚಿನ್ನ ಪತ್ತೆಯಾಗಿದೆ. ಐಷಾರಾಮಿ ಮನೆಯಲ್ಲಿ ಎರಡೂವರೆ ಕೋಟಿ ಮೌಲ್ಯದ ಚಿನ್ನ ಪತ್ತೆಯಾಗಿದೆ. ಮೋಹನ್ ಅಧಿಕಾರಿಗಳ ಜತೆ ಶಾಮೀಲಾಗಿ ಅಕ್ರಮ ನಡೆಸಿರುವ ಆರೋಪ ಕೇಳಿಬಂದಿದೆ.

ACB Raid: 20 ವರ್ಷಗಳ ಹಿಂದೆ ಮನೆಮನೆಗೆ ಪೇಪರ್, ಹಾಲು ಹಾಕುತ್ತಿದ್ದ ಬಿಡಿಎ ಮಧ್ಯವರ್ತಿ ಮೋಹನ್ ಮನೆಯಲ್ಲಿ ಇಂದು 4.5 ಕೆಜಿ ಚಿನ್ನ ಪತ್ತೆ!
ಮೋಹನ್​ ಮನೆಯಲ್ಲಿ ಪತ್ತೆಯಾದ ಚಿನ್ನಾಭರಣ
TV9 Web
| Edited By: |

Updated on:Mar 22, 2022 | 12:31 PM

Share

ಬೆಂಗಳೂರು: ಬಿಡಿಎ (BDA) ಮಧ್ಯವರ್ತಿ ಮೋಹನ್ ಕುಮಾರ್ ಮನೆ ಮೇಲೆ ಎಸಿಬಿ (ACB) ಅಧಿಕಾರಿಗಳು ಇಂದು (ಮಾರ್ಚ್ 22) ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಮೋಹನ್ ವಿರುದ್ಧ ಭ್ರಷ್ಟಾಚಾರ, ಅವ್ಯವಹಾರದ ಆರೋಪದ ಹಿನ್ನೆಲೆ ಆರ್.ಟಿ.ನಗರದ ಮನೋರಾಯನಪಾಳ್ಯದಲ್ಲಿರುವ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಬರೋಬ್ಬರಿ 4.5 ಕೆಜಿ ಚಿನ್ನ ಪತ್ತೆಯಾಗಿದೆ. ಐಷಾರಾಮಿ ಮನೆಯಲ್ಲಿ ಎರಡೂವರೆ ಕೋಟಿ ಮೌಲ್ಯದ ಚಿನ್ನ ಪತ್ತೆಯಾಗಿದೆ. ಮೋಹನ್ ಅಧಿಕಾರಿಗಳ ಜತೆ ಶಾಮೀಲಾಗಿ ಅಕ್ರಮ ನಡೆಸಿರುವ ಆರೋಪ ಕೇಳಿಬಂದಿದೆ.

ಜೊತೆಗೆ ಮೋಹನ್ ಕುಮಾರ್ ಅವರ ಮನೆಯಲ್ಲಿ ಕಂತೆ ಕಂತೆ ಹಣವೂ ಪತ್ತೆಯಾಗಿದೆ. ಅಪಾರ ಪ್ರಮಾಣದ ಬೆಳ್ಳಿ ತಟ್ಟೆ, ಲೋಟ, ಬಟ್ಟಲು, ದೀಪ,  ಚಿನ್ನದ ಸರ, ಚಿನ್ನದ ಓಲೆ, ಚಿನ್ನಡ ಡಾಬು ಸಿಕ್ಕಿದೆ. 9 ಜನ ಎಸಿಬಿ ಅಧಿಕಾರಿಗಳ ತಂಡದಿಂದ ಶೋಧಕಾರ್ಯ ಮುಂದುವರಿದಿದೆ. ಎಸಿಬಿ ಡಿವೈಎಸ್​ಪಿ ಪ್ರಕಾಶ್ ರೆಡ್ಡಿ, ಇನ್ಸ್‌ಪೆಕ್ಟರ್ ಮಂಜುನಾಥ್ ಸೇರಿದಂತೆ 9 ಅಧಿಕಾರಿಗಳ ತಂಡದಿಂದ ಶೋಧಕಾರ್ಯ ನಡೆಯುತ್ತಿದೆ.

ಅವ್ಯವಹಾರದಲ್ಲಿ ತೊಡಗಿದ ಆರೋಪ ಕೇಳಿಬಂದ ಹಿನ್ನೆಲೆ ಬೆಂಗಳೂರಿನಲ್ಲಿ ಏಕಕಾಲದಲ್ಲಿ ಬೆಂಗಳೂರಿನಲ್ಲಿ ಎಸಿಬಿ ಎಸ್​ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ 100ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳಿಂದ, 9 ಕಡೆ ದಾಳಿ ಮಾಡಲಾಗಿದೆ. ಚಾಮರಾಜಪೇಟೆಯ ಬಿ.ಎನ್.ರಘು, R.T.ನಗರ ಬಳಿಯ ಮನೋರಾಯನಪಾಳ್ಯದ ಮೋಹನ್, ದೊಮ್ಮಲೂರಿನ ಮನೋಜ್, ಆರ್.ಆರ್.ನಗರದ ತೇಜು, ಮಲ್ಲತ್ತಹಳ್ಳಿಯ ಮುನಿರತ್ನ ಅಲಿಯಾಸ್ ರತ್ನವೇಲು, ಮುದ್ದಿನಪಾಳ್ಯದ ಅಶ್ವತ್ಥ್ ಹಾಗೂ ಚಿಕ್ಕಹನುಮಯ್ಯ, ಚಾಮುಂಡೇಶ್ವರಿನಗರದ ರಾಮು ಮತ್ತು ಚಾಮುಂಡೇಶ್ವರಿ ನಗರ, ಬಿಡಿಎ ಲೇಔಟ್​ನ ಲಕ್ಷ್ಮಣ ಮೇಲೆ ಎಸಿಬಿ ಅಧಿಕಾರಿಗಳಿಂದ ದಾಳಿ ಮಾಡಲಾಗಿದೆ.

ಪೆಪರ್, ಹಾಲು ಹಾಕುತ್ತಿದ್ದ ಮೋಹನ್: ಮೋಹನ್ ಕುಮಾರ್ ದೊಡ್ಡಬಳ್ಳಾಪುರದ ಮಳವಳ್ಳಿಯ ಗ್ರಾಮದಲ್ಲಿ ವಿದ್ಯಾಭ್ಯಾಸ ಮಾಡಿದ್ದಾರೆ. ಎಸ್​ಎಸ್​ಎಲ್​ಸಿ ಮುಗಿಸಿದ್ದಾರೆ. ಇವರು ಮೊದಲಿಗೆ ಬೆಂಗಳೂರಿನಲ್ಲಿ ಪೆಪರ್, ಹಾಲು ವಿತರಣೆ ಮಾಡುತ್ತಿದ್ದರಂತೆ. ಬಳಿಕ ಬಿಡಿಎ ಅಧಿಕಾರಿಯ ಒಬ್ಬರಿಗೆ ಚಾಲಕನಾಗಿ ಸೇರಿಕೊಂಡರು. ಅಲ್ಲಿಂದ ಬಿಡಿಎ ಜೊತೆಗೆ ನಂಟು ಶುರುವಾಗಿದೆ. ಇವರಿಗೆ ಎರಡು ಮದುವೆ ಆಗಿದೆ. ಈಗ ಇರುವ ಖುಷಿ ಮನೆ ಮೊದಲ ಹೆಂಡತಿಗಾಗಿ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಮೊದಲನೆಯ ಹೆಂಡತಿ ಜೊತೆ ಡಿವೋರ್ಸ್ ಆಗಿದೆ. ಎರಡು ಹೆಂಡತಿ ಜೊತೆಗೆ ಜೀವನ ಮಾಡುತ್ತಿದ್ದಾರೆ.ಮನೆಯ ಪಕ್ಕದಲ್ಲಿ ಒಂದು ಫುಲ್ ಸೈಟ್ ಕೂಡ ಇದೆ ಎಂದು ಟಿವಿ9ಗೆ ಉನ್ನತ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ.

ಇದನ್ನೂ ಓದಿ

ಉಕ್ರೇನ್ ಮೇಲಿನ ರಷ್ಯಾ ದಾಳಿ ಖಂಡಿಸಲು ಭಾರತಕ್ಕೆ ಭಯ: ಜೋ ಬೈಡೆನ್

ಕಲ್ಲಂಗಡಿ ಬೀಜಗಳನ್ನ ಎಸೆಯುವ ಮುನ್ನ ಅದರ ಪ್ರಯೋಜನಗಳನ್ನ ತಿಳಿದುಕೊಳ್ಳಿ

Published On - 10:39 am, Tue, 22 March 22

ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ