AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ತಿಬೆಲೆ ಪಟಾಕಿ ದುರಂತ: ನಾಲ್ವರು ಅಧಿಕಾರಿಗಳ ಅಮಾನತು, ಇನ್ನಷ್ಟು ತಲೆದಂಡ ಸಾಧ್ಯತೆ

Attibele Fire incident : ಬೆಂಗಳೂರಿನ ಅತ್ತಿಬೆಲೆ ಪಟಾಕಿ ದುರಂತ ಪ್ರಕರಣಕ್ಕೆ ಸಬಂಧಿಸಿದಂತೆ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಬೆನ್ನಲ್ಲೆ ಇದೀಗ ಡಿಇ ಕಾಯ್ದಿರಿಸಿ ಪಾರದರ್ಶಕವಾದ ವರದಿ ನೀಡದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಆರೋಪದ ಮೇಲೆ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಅತ್ತಿಬೆಲೆ ಪಟಾಕಿ ದುರಂತ: ನಾಲ್ವರು ಅಧಿಕಾರಿಗಳ ಅಮಾನತು, ಇನ್ನಷ್ಟು ತಲೆದಂಡ ಸಾಧ್ಯತೆ
ಅತ್ತಿಬೆಲೆ ಅಗ್ನಿ ದುರಂತ
ರಾಮು, ಆನೇಕಲ್​
| Edited By: |

Updated on: Oct 11, 2023 | 10:21 AM

Share

ಬೆಂಗಳೂರು, (ಅಕ್ಟೋಬರ್ 11): ಅತ್ತಿಬೆಲೆ ಪಟಾಕಿ ದುರಂತ (Attibele Fire incident ) ಪ್ರಕರಣಕ್ಕೆ ಸಬಂಧಿಸಿದಂತೆ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಆನೇಕಲ್ ತಾಲೂಕಿನ ಹಿಂದಿನ ತಹಶೀಲ್ದಾರ್ ಶಶಿಧರ್ ಮಾಡ್ಯಾಳ್, ಉಪ ತಹಶೀಲ್ದಾರ್ ಶ್ರೀಧರ್, ರಾಜಸ್ವ ನಿರೀಕ್ಷಕ ಅತ್ತಿಬೆಲೆ, ಗ್ರಾಮ ಆಡಳಿತಾಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಕೃತ ಆದೇಶ ಹೊರಡಿಸಿದೆ. ಅಲ್ಲದೇ ಇಲಾಖಾ ತನಿಖೆಗೆ ಆದೇಶಿಸಲಾಗಿದೆ.

ಅತ್ತಿಬೆಲೆ ಅಗ್ನಿ ಅವಘಡಕ್ಕೆ ಅಧಿಕಾರಿಗಳೇ ಹೊಣೆ ಎಂದು ವರದಿ ಬಂದಿತ್ತು. ಪಟಾಕಿ ಅಂಗಡಿಗೆ 1ಸಾವಿರ ಕೆ.ಜಿ ಮಾತ್ರ ಸ್ಟಾಕ್ ಇಡಲು ಅವಕಾಶ ನೀಡಲಾಗಿತ್ತು. ಪರವಾನಿಗೆ ನೀಡುವಾಗ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸದೆ ಪರವಾನಿಗೆ ನೀಡಿರುವ ಹಿನ್ನಲೆಯಲ್ಲಿ ಈ ಅವಘಡಕ್ಕೆ ಕಾರಣವೆಂದು 4 ಜನ ಅಧಿಕಾರಿಗಳನ್ನ ಸೇವೆಯಿಂದ ಅಮಾನತು ಮಾಡಿ ಇಲಾಖೆ ತನಿಖೆಗೆ ಆದೇಶಿಸಲಾಗಿದೆ. ಈ ಪ್ರಕರಣದಲ್ಲಿ ಇನ್ನಷ್ಟು ಅಧಿಕಾರಿಗಳ ತಲೆದಂಡವಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ. ಪೊಲೀಸ್ ಮತ್ತು ಅಗ್ನಿಶಾಮಕ ಠಾಣೆ ಇಲಾಖೆ ಅಧಿಕಾರಿಗಳನ್ನು ಸಸ್ಪೆಂಡ್ ಮಾಡುವ ಸಾಧ್ಯತೆಗಳಿವೆ.

ಇದನ್ನೂ ಓದಿ: ಅತ್ತಿಬೆಲೆ ಪಟಾಕಿ ಅಗ್ನಿ ದುರಂತ ಪ್ರಕರಣ ಸಿಐಡಿಗೆ, ಮೃತ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಮಂಗಳವಾರ ಅಮಾನತಿನ ಬಗ್ಗೆ ಡಿಸಿ, ಎಸ್‍ಪಿಗೆ ಸಿಎಂ ಸೂಚನೆ ನೀಡಿದ್ದರು. ಇದೀಗ ಸಿಎಂ ಸೂಚನೆ ಬೆನ್ನಲ್ಲೆ ಇದೀಗ ಡಿಇ ಕಾಯ್ದಿರಿಸಿ ಪಾರದರ್ಶಕವಾದ ವರದಿ ನೀಡದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಆರೋಪದ ಮೇಲೆ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!