AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೆತ್ ನೋಟ್​ನಲ್ಲಿ ಪತ್ನಿಗೆ ಕ್ಷಮೆ ಕೇಳಿ ಪ್ರಾಣ ಕಳೆದುಕೊಂಡ ಬೆಂಗಳೂರಿನ ಉದ್ಯಮಿ

ಬೆಂಗಳೂರಿನಲ್ಲಿ ಉದ್ಯಮಿಯೊಬ್ಬರು ಡೆತ್​ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್ ನೋಟ್​ನಲ್ಲಿ ಪತ್ನಿಗೆ ಕ್ಷಮೆ ಕೇಳಿ ಪ್ರಾಣ ಕಳೆದುಕೊಂಡಿದ್ದು, ಘಟನಾ ಸ್ಥಳಕ್ಕೆ ಹುಳಿಮಾವು ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಬಡ್ಡಿ ಟಾರ್ಚರ್​ಗೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಪೊಲೀಸರು ಎಲ್ಲಾ ಆಯಾಮಗಳ ಮೂಲಕ ತನಿಖೆ ನಡೆಸಿದ್ದಾರೆ.

ಡೆತ್ ನೋಟ್​ನಲ್ಲಿ ಪತ್ನಿಗೆ ಕ್ಷಮೆ ಕೇಳಿ ಪ್ರಾಣ ಕಳೆದುಕೊಂಡ ಬೆಂಗಳೂರಿನ ಉದ್ಯಮಿ
ಕಲಾಲ್ ದತ್ತ
ರಾಚಪ್ಪಾಜಿ ನಾಯ್ಕ್
| Edited By: |

Updated on: Jan 07, 2025 | 2:59 PM

Share

ಬೆಂಗಳೂರು, (ಜನವರಿ 07): ಉದ್ಯಮಿಯೊಬ್ಬರು ಡೆತ್​ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹುಳಿಮಾವು ಠಾಣಾ ವ್ಯಾಪ್ತಿಯ ಅಕ್ಷಯನಗರದ ಉದ್ಯಮಿ ಕಲಾಲ್ ದತ್ತ(40) ನಿನ್ನೆ(ಜನವರಿ 06) ಸಂಜೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಡೆತ್​ ನೋಟ್​ ಬರೆದಿಟ್ಟಿದ್ದು, ಸಾಲದಿಂದ ಬೇಸತ್ತು ಬಡ್ಡಿ ಟಾರ್ಚರ್​ಗೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಸದ್ಯಕ್ಕೆ ಸ್ಥಳಕ್ಕೆ ಹುಳಿಮಾವು ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಸಾಲದಿಂದ ಬೇಸತ್ತು ಬಡ್ಡಿ ಟಾರ್ಚರ್​ಗೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್​ನೋಟ್​ನಲ್ಲಿ ಉಲ್ಲೇಖವಾಗಿದೆ. ಹಾಗೇ ಡೆತ್ ನೋಟ್ ನಲ್ಲಿ ಪತ್ನಿಗೆ ಕ್ಷಮೆ ಕೇಳಿದ್ದಾರೆ. ಇನ್ನು ಈ ಸಂಬಂಧ ಮೃತ ಕಲಾಲ್ ದತ್ತ ಸಜಿನಿ, ತಮ್ಮ ಪತಿಯ ಬ್ಯುಸಿನೆಸ್​ ಪಾರ್ಟನರ್​​ ವಿರುದ್ಧ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ತುಮಕೂರು: ರಸ್ತೆ ಅಪಘಾತದಲ್ಲಿ ತಾಯಿ-ಮಕ್ಕಳು ಸೇರಿದಂತೆ ಮೂವರ ಸಾವು

2016 ರಿಂದ ಮೃತ ಕಲಾಲ್ ದತ್ತ ಹಾಗೂ ಎಜಿ ಮರಿಸ್ವಾಮಿ ಎನ್ನುವರು ಸೇರಿಕೊಂಡು ಸಾಯಿ ಫೆಸಿಲಿಟಿ ಸರ್ವೀಸಸ್ ಕಂಪನಿ ನಡೆಸುತ್ತಿದ್ದರು. ಈ ವೇಳೆ ಮರಿಸ್ವಾಮಿ ಸುಮಾರು ನಾಲ್ಕು ಕೋಟಿ ಹಣ ಪಡೆದು ವಂಚನೆ ಮಾಡಿರುವುದಾಗಿ ಮೃತ ಉದ್ಯಮಿ ಕಲಾಲ್ ದತ್ತ ಪತ್ನಿ ಸಜಿನಿ ಅವರು ಹುಳಿಮಾವು ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಬಗ್ಗೆ ಹುಳಿಮಾವು ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ