AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೆತ್ ನೋಟ್​ನಲ್ಲಿ ಪತ್ನಿಗೆ ಕ್ಷಮೆ ಕೇಳಿ ಪ್ರಾಣ ಕಳೆದುಕೊಂಡ ಬೆಂಗಳೂರಿನ ಉದ್ಯಮಿ

ಬೆಂಗಳೂರಿನಲ್ಲಿ ಉದ್ಯಮಿಯೊಬ್ಬರು ಡೆತ್​ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್ ನೋಟ್​ನಲ್ಲಿ ಪತ್ನಿಗೆ ಕ್ಷಮೆ ಕೇಳಿ ಪ್ರಾಣ ಕಳೆದುಕೊಂಡಿದ್ದು, ಘಟನಾ ಸ್ಥಳಕ್ಕೆ ಹುಳಿಮಾವು ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಬಡ್ಡಿ ಟಾರ್ಚರ್​ಗೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಪೊಲೀಸರು ಎಲ್ಲಾ ಆಯಾಮಗಳ ಮೂಲಕ ತನಿಖೆ ನಡೆಸಿದ್ದಾರೆ.

ಡೆತ್ ನೋಟ್​ನಲ್ಲಿ ಪತ್ನಿಗೆ ಕ್ಷಮೆ ಕೇಳಿ ಪ್ರಾಣ ಕಳೆದುಕೊಂಡ ಬೆಂಗಳೂರಿನ ಉದ್ಯಮಿ
ಕಲಾಲ್ ದತ್ತ
ರಾಚಪ್ಪಾಜಿ ನಾಯ್ಕ್
| Edited By: |

Updated on: Jan 07, 2025 | 2:59 PM

Share

ಬೆಂಗಳೂರು, (ಜನವರಿ 07): ಉದ್ಯಮಿಯೊಬ್ಬರು ಡೆತ್​ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹುಳಿಮಾವು ಠಾಣಾ ವ್ಯಾಪ್ತಿಯ ಅಕ್ಷಯನಗರದ ಉದ್ಯಮಿ ಕಲಾಲ್ ದತ್ತ(40) ನಿನ್ನೆ(ಜನವರಿ 06) ಸಂಜೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಡೆತ್​ ನೋಟ್​ ಬರೆದಿಟ್ಟಿದ್ದು, ಸಾಲದಿಂದ ಬೇಸತ್ತು ಬಡ್ಡಿ ಟಾರ್ಚರ್​ಗೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಸದ್ಯಕ್ಕೆ ಸ್ಥಳಕ್ಕೆ ಹುಳಿಮಾವು ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಸಾಲದಿಂದ ಬೇಸತ್ತು ಬಡ್ಡಿ ಟಾರ್ಚರ್​ಗೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್​ನೋಟ್​ನಲ್ಲಿ ಉಲ್ಲೇಖವಾಗಿದೆ. ಹಾಗೇ ಡೆತ್ ನೋಟ್ ನಲ್ಲಿ ಪತ್ನಿಗೆ ಕ್ಷಮೆ ಕೇಳಿದ್ದಾರೆ. ಇನ್ನು ಈ ಸಂಬಂಧ ಮೃತ ಕಲಾಲ್ ದತ್ತ ಸಜಿನಿ, ತಮ್ಮ ಪತಿಯ ಬ್ಯುಸಿನೆಸ್​ ಪಾರ್ಟನರ್​​ ವಿರುದ್ಧ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ತುಮಕೂರು: ರಸ್ತೆ ಅಪಘಾತದಲ್ಲಿ ತಾಯಿ-ಮಕ್ಕಳು ಸೇರಿದಂತೆ ಮೂವರ ಸಾವು

2016 ರಿಂದ ಮೃತ ಕಲಾಲ್ ದತ್ತ ಹಾಗೂ ಎಜಿ ಮರಿಸ್ವಾಮಿ ಎನ್ನುವರು ಸೇರಿಕೊಂಡು ಸಾಯಿ ಫೆಸಿಲಿಟಿ ಸರ್ವೀಸಸ್ ಕಂಪನಿ ನಡೆಸುತ್ತಿದ್ದರು. ಈ ವೇಳೆ ಮರಿಸ್ವಾಮಿ ಸುಮಾರು ನಾಲ್ಕು ಕೋಟಿ ಹಣ ಪಡೆದು ವಂಚನೆ ಮಾಡಿರುವುದಾಗಿ ಮೃತ ಉದ್ಯಮಿ ಕಲಾಲ್ ದತ್ತ ಪತ್ನಿ ಸಜಿನಿ ಅವರು ಹುಳಿಮಾವು ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಬಗ್ಗೆ ಹುಳಿಮಾವು ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಹರಿಪ್ರಸಾದ್​​ ಅಮಾನತಿಗೆ ಬಿಜೆಪಿ ಪಟ್ಟು: ರಣಾಂಗಣವಾದ ವಿಧಾನ ಪರಿಷತ್​
ಹರಿಪ್ರಸಾದ್​​ ಅಮಾನತಿಗೆ ಬಿಜೆಪಿ ಪಟ್ಟು: ರಣಾಂಗಣವಾದ ವಿಧಾನ ಪರಿಷತ್​
ಮನೆ ಕೊಟ್ಟ ಸರ್ಕಾರ, ಮೂಲ ಸೌಕರ್ಯ ಕೊಡಲು ಮರೆಯಿತು!
ಮನೆ ಕೊಟ್ಟ ಸರ್ಕಾರ, ಮೂಲ ಸೌಕರ್ಯ ಕೊಡಲು ಮರೆಯಿತು!
ಅಯೋಧ್ಯೆಯ ರಾಮ ಮಂದಿರಕ್ಕೆ ಬಂದಿಳಿದ 286 ಕೆಜಿ ತೂಕದ ಸ್ವರ್ಣ ಧನಸ್ಸು
ಅಯೋಧ್ಯೆಯ ರಾಮ ಮಂದಿರಕ್ಕೆ ಬಂದಿಳಿದ 286 ಕೆಜಿ ತೂಕದ ಸ್ವರ್ಣ ಧನಸ್ಸು
ನರೇಗಾ ಹೆಸರು ವಿವಾದ, ಸರ್ಕಾರ-ಪ್ರತಿಪಕ್ಷಗಳ ನಡುವೆ ಜಟಾಪಟಿ
ನರೇಗಾ ಹೆಸರು ವಿವಾದ, ಸರ್ಕಾರ-ಪ್ರತಿಪಕ್ಷಗಳ ನಡುವೆ ಜಟಾಪಟಿ
ಸಂಧ್ಯಾ ಜೊತೆ ಸರಳವಾಗಿ ವಿವಾಹ ಆದ ಉಗ್ರಂ ಮಂಜು; ಇಲ್ಲಿದೆ ವಿಡಿಯೋ
ಸಂಧ್ಯಾ ಜೊತೆ ಸರಳವಾಗಿ ವಿವಾಹ ಆದ ಉಗ್ರಂ ಮಂಜು; ಇಲ್ಲಿದೆ ವಿಡಿಯೋ
ಮೊದಲೇ ಗೆಲುವಿನ ಸೂಚನೆ ಕೊಟ್ಟಿದ್ದ ಸುದೀಪ್; ಗಿಲ್ಲಿ ಹೇಳಿದ್ದಿಷ್ಟು
ಮೊದಲೇ ಗೆಲುವಿನ ಸೂಚನೆ ಕೊಟ್ಟಿದ್ದ ಸುದೀಪ್; ಗಿಲ್ಲಿ ಹೇಳಿದ್ದಿಷ್ಟು
ರೈಲ್ವೆ ಹಳಿಯಲ್ಲಿ ಅಡ್ಡವಾಗಿ ನಿಂತಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ರೈಲು
ರೈಲ್ವೆ ಹಳಿಯಲ್ಲಿ ಅಡ್ಡವಾಗಿ ನಿಂತಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ರೈಲು
ಯಾರೇ ಗೆದ್ರು ಖುಷೀನೆ; ಅಶ್ವಿನಿ ಹೇಳಿದ್ದ ಕೊನೆಯ ಮಾತು ನನೆಪಿಸಿಕೊಂಡ ಗಿಲ್ಲಿ
ಯಾರೇ ಗೆದ್ರು ಖುಷೀನೆ; ಅಶ್ವಿನಿ ಹೇಳಿದ್ದ ಕೊನೆಯ ಮಾತು ನನೆಪಿಸಿಕೊಂಡ ಗಿಲ್ಲಿ