AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSI recruitment: ಶೀಘ್ರದಲ್ಲೇ 545 ಹುದ್ದೆಗಳ ಜೊತೆಗೆ 400 ಪಿಎಸ್ಐ ನೇಮಕಾತಿ – ಜಿ ಪರಮೇಶ್ವರ್

545 ಹುದ್ದೆಗಳ ಜೊತೆಗೆ 400 ಪಿಎಸ್​ಐ ನೇಮಕ ಮಾಡಿಕೊಳ್ಳಬೇಕು. ಪೊಲೀಸ್ ಇಲಾಖೆಯಲ್ಲಿ ಸಬ್​ ಇನ್ಸ್​ಪೆಕ್ಟರ್​​ಗಳ​ ಕೊರತೆ ಇದೆ. ಆದಷ್ಟು ಬೇಗ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಪ್ರಯತ್ನ ಮಾಡುತ್ತೇವೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.

PSI recruitment: ಶೀಘ್ರದಲ್ಲೇ 545 ಹುದ್ದೆಗಳ ಜೊತೆಗೆ 400 ಪಿಎಸ್ಐ ನೇಮಕಾತಿ - ಜಿ ಪರಮೇಶ್ವರ್
ಜಿ ಪರಮೇಶ್ವರ
ಪ್ರಸನ್ನ ಗಾಂವ್ಕರ್​
| Edited By: ವಿವೇಕ ಬಿರಾದಾರ|

Updated on:Jul 16, 2023 | 1:18 PM

Share

ಬೆಂಗಳೂರು: 545 ಹುದ್ದೆಗಳ ಜೊತೆಗೆ 400 ಪಿಎಸ್ಐ ನೇಮಕ (PSI Recruitment) ಮಾಡಿಕೊಳ್ಳಬೇಕು. ಪೊಲೀಸ್ ಇಲಾಖೆಯಲ್ಲಿ ಸಬ್​​​ಇನ್ಸ್​ಪೆಕ್ಟರ್​​ಗಳ (Sub-Inspector)​ ಕೊರತೆ ಇದೆ. ಆದಷ್ಟು ಬೇಗ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಪ್ರಯತ್ನ ಮಾಡುತ್ತೇವೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ (G Parameshwara) ಹೇಳಿದರು. ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ 545 ಪಿಎಸ್​ಐ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮವನ್ನು (PSI recruitment scam) ನ್ಯಾಯಾಂಗ ತನಿಖೆಗೆ ನೀಡುವ ವಿಚಾರವಾಗಿ ಮಾತನಾಡಿದ ಅವರು ಪ್ರಕರಣದ ತನಿಖೆ ಮುಂದುವರಿದಿದೆ. ಅಲ್ಲಿ ಯಾವ ಅನುಮಾನ ಬಂದಿಲ್ಲ ಎಂದರು.

ಪುನರ್ ಪರೀಕ್ಷೆ ಮಾಡಬೇಕೆಂದು ಹಿಂದಿನ ಸರ್ಕಾರ ಆದೇಶಿಸಿತ್ತು. ಸರ್ಕಾರದ ಆದೇಶಕ್ಕೆ ಕೋರ್ಟ್​ನಿಂದ ತಡೆಯಾಜ್ಞೆ ತಂದಿದ್ದಾರೆ. ಹೈಕೋರ್ಟ್​ನಿಂದ ನಿರ್ದೇಶನ ಬರಬೇಕು, ಸೂಚನೆ ಬರಬೇಕು. ಸರ್ಕಾರದ ಅಭಿಪ್ರಾಯವನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗಿದೆ. ಕೋರ್ಟ್ ಏನು ತೀರ್ಪು ಕೊಡುತ್ತೆ ಎಂಬ ನಿರೀಕ್ಷೆಯಲ್ಲಿದ್ದೇವೆ. ಕೋರ್ಟ್ ತೀರ್ಪು ಬಂದ ಮೇಲೆ ಅದರ ಪ್ರಕಾರ ಕ್ರಮಕೈಗೊಳ್ಳುತ್ತೇವೆ ಎಂದರು.

ಇನ್ನು ಯುವಾ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು ಪ್ರಕರಣ ಸಂಬಂಧ ಈಗಾಗಲೇ ಆರೋಪಿಗಳನ್ನು ಬಂಧಿಸಲಾಗಿದೆ. ಪೊಲೀಸರು ಕೂಡ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಉಸ್ತುವಾರಿ ಸಚಿವರು ಹಸ್ತಕ್ಷೇಪ ಮಾಡಿಲ್ಲ, ಮಾಡೋದೂ ಇಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: Jain monk’s murder; ನಮ್ಮ ಪೊಲೀಸರು ಸಮರ್ಥರಾಗಿದ್ದಾರೆ, ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವ ಅಗತ್ಯವಿಲ್ಲ: ಡಾ ಜಿ ಪರಮೇಶ್ವರ

ನಾಳೆ ಬೆಂಗಳೂರಿನಲ್ಲಿ ನಡೆಯುವ ವಿರೋಧ ಪಕ್ಷದ ನಾಯಕರ ಸಭೆ ವಿಚಾರವಾಗಿ ಮಾತನಾಡಿ ಕಳೆದ 9 ವರ್ಷಗಳಿಂದ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದೆ. ಬಿಜೆಪಿ ಆಡಳಿತದಲ್ಲಿ ಬಹಳಷ್ಟು ಅಭಿವೃದ್ಧಿ ಕೆಲಸ ಕುಂಠಿತವಾಗಿದೆ. ಎಲ್ಲಾ ರಾಜ್ಯಗಳಲ್ಲೂ ಭಯದ ವಾತಾವರಣ ಸೃಷ್ಟಿಯಾಗಿದೆ. ಏಕರೂಪ ನಾಗರಿಕ ಸಂಹಿತೆಯಿಂದ ಅಶಾಂತಿ ಮೂಡಿಸುತ್ತಿದೆ. ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ವಿಪಕ್ಷಗಳಾಗಿ ಪ್ರಯತ್ನ ಮಾಡುತ್ತಿದ್ದೇವೆ. ನಾಳಿನ ಸಭೆಯಲ್ಲಿ 20 ಪಕ್ಷಗಳ ‌ಮುಖಂಡರು ಭಾಗಿಯಾಗುತ್ತಾರೆ. ನಮ್ಮ ದೃಷ್ಟಿಯಲ್ಲಿ ಇದು ಒಳ್ಳೆಯ ಬೆಳವಣಿಗೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:58 pm, Sun, 16 July 23

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?