AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಹಿಂದವೀ ಮೀಟ್ ಮಾರ್ಟ್​ಗಳಲ್ಲಿ ನಿನ್ನೆ ಒಂದೇ ದಿನ 43 ಲಕ್ಷ ರೂಪಾಯಿ ವ್ಯಾಪಾರ; ಕೆಲ ಮಾಹಿತಿ ಇಲ್ಲಿದೆ

ಉಳ್ಳಾಲ ಮತ್ತು ಜ್ಞಾನಭಾರತಿ ಹಿಂದವೀ ಮೀಟ್ ಮಾರ್ಟ್​ನಲ್ಲಿ ಸುಮಾರು 3,000 ಕೆಜಿ ಮಟನ್ 950 ಕೆಜಿ ಚಿಕನ್ ಮಾರಟವಾಗಿದ್ದು, ಅಂದಾಜು 21 ಲಕ್ಷದ 71 ಸಾವಿರ ರುಪಾಯಿ ವ್ಯಾಪಾರ ಆಗಿದೆ.

ಬೆಂಗಳೂರಿನ ಹಿಂದವೀ ಮೀಟ್ ಮಾರ್ಟ್​ಗಳಲ್ಲಿ ನಿನ್ನೆ ಒಂದೇ ದಿನ 43 ಲಕ್ಷ ರೂಪಾಯಿ ವ್ಯಾಪಾರ; ಕೆಲ ಮಾಹಿತಿ ಇಲ್ಲಿದೆ
ಹಿಂದವೀ ಮೀಟ್ ಮಾರ್ಟ್
TV9 Web
| Edited By: sandhya thejappa|

Updated on: Apr 04, 2022 | 12:08 PM

Share

ಬೆಂಗಳೂರು: ರಾಜ್ಯದಲ್ಲಿ ಹಲಾಲ್ ಕಟ್ (Halal Cut) ಮಾಂಸ ಖರೀದಿಸದಂತೆ ಹಿಂದೂ ಸಂಘಟನೆಗಳು ಮನವಿ ಮಾಡಿವೆ. ಹಲಾಲ್ ಬಾಯ್ಕಾಟ್ (Halal Boycott) ಅಭಿಯಾನದ ಹಿನ್ನೆಲೆ ನಿನ್ನೆ (ಏಪ್ರಿಲ್ 3) ಹಿಂದವೀ ಮಾರ್ಟ್​ಗಳಲ್ಲಿ ಭರ್ಜರಿ ವ್ಯಾಪಾರ ನಡೆದಿದೆ. ಈ ಮೂಲಕ ಹಲಾಲ್ ಬಾಯ್ಕಾಟ್​ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಬೆಂಗಳೂರಿನ ಹಿಂದವೀ ಮಾರ್ಟ್​ಗಳಲ್ಲಿ ಲಕ್ಷ ಲಕ್ಷ ರೂ. ವ್ಯಾಪಾರ ನಡೆದಿದ್ದು, ಎಂಟು ಹಿಂದವೀ ಮಾರ್ಟ್​ನಿಂದ ಬರೋಬ್ಬರಿ 43 ಲಕ್ಷ ರೂಪಾಯಿ ವ್ಯಾಪಾರ ಆಗಿದೆ. ಇನ್ನು ಬೆಂಗಳೂರಿನ ಜಟ್ಕಾ ಕಟ್ ಅಂಗಡಿಗಳಲ್ಲಿ ನಿನ್ನೆ ಒಂದೇ ದಿನ ಸುಮಾರು 7 ಕೋಟಿ ರೂಪಾಯಿ ವ್ಯಾಪಾರ ಆಗಿದೆ.

ಉಳ್ಳಾಲ ಮತ್ತು ಜ್ಞಾನಭಾರತಿ ಹಿಂದವೀ ಮೀಟ್ ಮಾರ್ಟ್​ನಲ್ಲಿ ಸುಮಾರು 3,000 ಕೆಜಿ ಮಟನ್ 950 ಕೆಜಿ ಚಿಕನ್ ಮಾರಟವಾಗಿದ್ದು, ಅಂದಾಜು 21 ಲಕ್ಷದ 71 ಸಾವಿರ ರುಪಾಯಿ ವ್ಯಾಪಾರ ಆಗಿದೆ. ಕಮ್ಮನಹಳ್ಳಿ ಹಿಂದವೀ ಮೀಟ್ ಮಾರ್ಟ್​ನಲ್ಲಿ 750 ಕೆಜಿ ಮಟನ್, 600 ಕೆಜಿ ಚಿಕನ್ ಸೇಲ್ ಆಗಿದ್ದು, 6 ಲಕ್ಷದ 33 ಸಾವಿರ ರುಪಾಯಿ ಮಾರಾಟವಾಗಿದೆ. ಇನ್ನು ಇಂದಿರಾನಗರದ ಮಾರ್ಟ್​ನಲ್ಲಿ 400 ಕೆಜಿ ಮಟನ್, 500 ಕೆಜಿ ಚಿಕನ್ ಮಾರಾಟವಾಗಿದ್ದು, 3 ಲಕ್ಷದ 70 ಸಾವಿರ ರುಪಾಯಿ ಆದಾಯ ಬಂದಿದೆ.

ಹೊರಮಾವಿನಲ್ಲಿ 300 ಕೆಜಿ ಮಟನ್, 400 ಕೆಜಿ ಚಿಕನ್ ಸೇಲ್ ಆಗಿದೆ. ಇಲ್ಲಿ 2 ಲಕ್ಷದ 82 ಸಾವಿರ ರುಪಾಯಿ ಆದಾಯ ಸಿಕ್ಕಿದೆ ಎಂದು ಅಂದಾಜಿಸಲಾಗಿದೆ. ನಾಗವಾರದಲ್ಲಿ 400 ಕೆಜಿ ಮಟನ್ ಮಾರಾಟವಾಗಿದ್ದು, 2 ಲಕ್ಷದ 80 ಸಾವಿರ ರುಪಾಯಿ ಸಿಕ್ಕಿದೆ. ಬನ್ನೇರುಘಟ್ಟದಲ್ಲಿ 300 ಕೆಜಿ ಮಟನ್ ಮಾರಾಟವಾಗಿದೆ. ಇಲ್ಲಿ 2 ಲಕ್ಷದ ಹತ್ತು ಸಾವಿರ ಆದಾಯ ಬಂದಿದೆ, ನೆಲಗದರನಗಳ್ಳಿಯಲ್ಲಿ 300 ಕೆಜಿ ಮಟನ್, 360 ಕೆಜಿ ಚಿಕನ್ ಸೇಲ್ ಆಗಿದೆ. ಇಲ್ಲಿ 2 ಲಕ್ಷದ 74 ಸಾವಿರ ರುಪಾಯಿ ಮಾರಾಟವಾಗಿದೆ ಎಂದು ಅಂದಾಜಿಲಾಗಿದೆ. ಎಂಟು ಹಿಂದವೀ ಮೀಟ್ ಮಾರ್ಟ್​ನಲ್ಲಿ ನಿನ್ನೆ ಆದ ಅಂದಾಜು ವ್ಯಾಪಾರದ ಮೊತ್ತ 43,20,800 ರೂ. ಎಂದು ತಿಳಿದುಬಂದಿದೆ.

ಇದನ್ನೂ ಓದಿ

ಆಂಧ್ರಪ್ರದೇಶದಲ್ಲಿ ಇಂದಿನಿಂದ ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದ 13 ಜಿಲ್ಲೆಗಳು; ಕೊಟ್ಟ ಭರವಸೆಯಂತೆ ನಡೆದುಕೊಂಡ ಸಿಎಂ ಜಗನ್​ರೆಡ್ಡಿ

ತಂದೆ ಸಾವಿನ ನೋವಲ್ಲೂ SSLC ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿನಿ; ಪರೀಕ್ಷೆ ನಂತರ ತಂದೆಯ ಅಂತ್ಯಕ್ರಿಯೆ

Follow Us
TV9 Web
TV9 Web

TV9 Kannada

Read More
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!