AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಹಿಂದವೀ ಮೀಟ್ ಮಾರ್ಟ್​ಗಳಲ್ಲಿ ನಿನ್ನೆ ಒಂದೇ ದಿನ 43 ಲಕ್ಷ ರೂಪಾಯಿ ವ್ಯಾಪಾರ; ಕೆಲ ಮಾಹಿತಿ ಇಲ್ಲಿದೆ

ಉಳ್ಳಾಲ ಮತ್ತು ಜ್ಞಾನಭಾರತಿ ಹಿಂದವೀ ಮೀಟ್ ಮಾರ್ಟ್​ನಲ್ಲಿ ಸುಮಾರು 3,000 ಕೆಜಿ ಮಟನ್ 950 ಕೆಜಿ ಚಿಕನ್ ಮಾರಟವಾಗಿದ್ದು, ಅಂದಾಜು 21 ಲಕ್ಷದ 71 ಸಾವಿರ ರುಪಾಯಿ ವ್ಯಾಪಾರ ಆಗಿದೆ.

ಬೆಂಗಳೂರಿನ ಹಿಂದವೀ ಮೀಟ್ ಮಾರ್ಟ್​ಗಳಲ್ಲಿ ನಿನ್ನೆ ಒಂದೇ ದಿನ 43 ಲಕ್ಷ ರೂಪಾಯಿ ವ್ಯಾಪಾರ; ಕೆಲ ಮಾಹಿತಿ ಇಲ್ಲಿದೆ
ಹಿಂದವೀ ಮೀಟ್ ಮಾರ್ಟ್
TV9 Web
| Updated By: sandhya thejappa|

Updated on: Apr 04, 2022 | 12:08 PM

Share

ಬೆಂಗಳೂರು: ರಾಜ್ಯದಲ್ಲಿ ಹಲಾಲ್ ಕಟ್ (Halal Cut) ಮಾಂಸ ಖರೀದಿಸದಂತೆ ಹಿಂದೂ ಸಂಘಟನೆಗಳು ಮನವಿ ಮಾಡಿವೆ. ಹಲಾಲ್ ಬಾಯ್ಕಾಟ್ (Halal Boycott) ಅಭಿಯಾನದ ಹಿನ್ನೆಲೆ ನಿನ್ನೆ (ಏಪ್ರಿಲ್ 3) ಹಿಂದವೀ ಮಾರ್ಟ್​ಗಳಲ್ಲಿ ಭರ್ಜರಿ ವ್ಯಾಪಾರ ನಡೆದಿದೆ. ಈ ಮೂಲಕ ಹಲಾಲ್ ಬಾಯ್ಕಾಟ್​ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಬೆಂಗಳೂರಿನ ಹಿಂದವೀ ಮಾರ್ಟ್​ಗಳಲ್ಲಿ ಲಕ್ಷ ಲಕ್ಷ ರೂ. ವ್ಯಾಪಾರ ನಡೆದಿದ್ದು, ಎಂಟು ಹಿಂದವೀ ಮಾರ್ಟ್​ನಿಂದ ಬರೋಬ್ಬರಿ 43 ಲಕ್ಷ ರೂಪಾಯಿ ವ್ಯಾಪಾರ ಆಗಿದೆ. ಇನ್ನು ಬೆಂಗಳೂರಿನ ಜಟ್ಕಾ ಕಟ್ ಅಂಗಡಿಗಳಲ್ಲಿ ನಿನ್ನೆ ಒಂದೇ ದಿನ ಸುಮಾರು 7 ಕೋಟಿ ರೂಪಾಯಿ ವ್ಯಾಪಾರ ಆಗಿದೆ.

ಉಳ್ಳಾಲ ಮತ್ತು ಜ್ಞಾನಭಾರತಿ ಹಿಂದವೀ ಮೀಟ್ ಮಾರ್ಟ್​ನಲ್ಲಿ ಸುಮಾರು 3,000 ಕೆಜಿ ಮಟನ್ 950 ಕೆಜಿ ಚಿಕನ್ ಮಾರಟವಾಗಿದ್ದು, ಅಂದಾಜು 21 ಲಕ್ಷದ 71 ಸಾವಿರ ರುಪಾಯಿ ವ್ಯಾಪಾರ ಆಗಿದೆ. ಕಮ್ಮನಹಳ್ಳಿ ಹಿಂದವೀ ಮೀಟ್ ಮಾರ್ಟ್​ನಲ್ಲಿ 750 ಕೆಜಿ ಮಟನ್, 600 ಕೆಜಿ ಚಿಕನ್ ಸೇಲ್ ಆಗಿದ್ದು, 6 ಲಕ್ಷದ 33 ಸಾವಿರ ರುಪಾಯಿ ಮಾರಾಟವಾಗಿದೆ. ಇನ್ನು ಇಂದಿರಾನಗರದ ಮಾರ್ಟ್​ನಲ್ಲಿ 400 ಕೆಜಿ ಮಟನ್, 500 ಕೆಜಿ ಚಿಕನ್ ಮಾರಾಟವಾಗಿದ್ದು, 3 ಲಕ್ಷದ 70 ಸಾವಿರ ರುಪಾಯಿ ಆದಾಯ ಬಂದಿದೆ.

ಹೊರಮಾವಿನಲ್ಲಿ 300 ಕೆಜಿ ಮಟನ್, 400 ಕೆಜಿ ಚಿಕನ್ ಸೇಲ್ ಆಗಿದೆ. ಇಲ್ಲಿ 2 ಲಕ್ಷದ 82 ಸಾವಿರ ರುಪಾಯಿ ಆದಾಯ ಸಿಕ್ಕಿದೆ ಎಂದು ಅಂದಾಜಿಸಲಾಗಿದೆ. ನಾಗವಾರದಲ್ಲಿ 400 ಕೆಜಿ ಮಟನ್ ಮಾರಾಟವಾಗಿದ್ದು, 2 ಲಕ್ಷದ 80 ಸಾವಿರ ರುಪಾಯಿ ಸಿಕ್ಕಿದೆ. ಬನ್ನೇರುಘಟ್ಟದಲ್ಲಿ 300 ಕೆಜಿ ಮಟನ್ ಮಾರಾಟವಾಗಿದೆ. ಇಲ್ಲಿ 2 ಲಕ್ಷದ ಹತ್ತು ಸಾವಿರ ಆದಾಯ ಬಂದಿದೆ, ನೆಲಗದರನಗಳ್ಳಿಯಲ್ಲಿ 300 ಕೆಜಿ ಮಟನ್, 360 ಕೆಜಿ ಚಿಕನ್ ಸೇಲ್ ಆಗಿದೆ. ಇಲ್ಲಿ 2 ಲಕ್ಷದ 74 ಸಾವಿರ ರುಪಾಯಿ ಮಾರಾಟವಾಗಿದೆ ಎಂದು ಅಂದಾಜಿಲಾಗಿದೆ. ಎಂಟು ಹಿಂದವೀ ಮೀಟ್ ಮಾರ್ಟ್​ನಲ್ಲಿ ನಿನ್ನೆ ಆದ ಅಂದಾಜು ವ್ಯಾಪಾರದ ಮೊತ್ತ 43,20,800 ರೂ. ಎಂದು ತಿಳಿದುಬಂದಿದೆ.

ಇದನ್ನೂ ಓದಿ

ಆಂಧ್ರಪ್ರದೇಶದಲ್ಲಿ ಇಂದಿನಿಂದ ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದ 13 ಜಿಲ್ಲೆಗಳು; ಕೊಟ್ಟ ಭರವಸೆಯಂತೆ ನಡೆದುಕೊಂಡ ಸಿಎಂ ಜಗನ್​ರೆಡ್ಡಿ

ತಂದೆ ಸಾವಿನ ನೋವಲ್ಲೂ SSLC ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿನಿ; ಪರೀಕ್ಷೆ ನಂತರ ತಂದೆಯ ಅಂತ್ಯಕ್ರಿಯೆ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!