AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಹಿಂದವೀ ಮೀಟ್ ಮಾರ್ಟ್​ಗಳಲ್ಲಿ ನಿನ್ನೆ ಒಂದೇ ದಿನ 43 ಲಕ್ಷ ರೂಪಾಯಿ ವ್ಯಾಪಾರ; ಕೆಲ ಮಾಹಿತಿ ಇಲ್ಲಿದೆ

ಉಳ್ಳಾಲ ಮತ್ತು ಜ್ಞಾನಭಾರತಿ ಹಿಂದವೀ ಮೀಟ್ ಮಾರ್ಟ್​ನಲ್ಲಿ ಸುಮಾರು 3,000 ಕೆಜಿ ಮಟನ್ 950 ಕೆಜಿ ಚಿಕನ್ ಮಾರಟವಾಗಿದ್ದು, ಅಂದಾಜು 21 ಲಕ್ಷದ 71 ಸಾವಿರ ರುಪಾಯಿ ವ್ಯಾಪಾರ ಆಗಿದೆ.

ಬೆಂಗಳೂರಿನ ಹಿಂದವೀ ಮೀಟ್ ಮಾರ್ಟ್​ಗಳಲ್ಲಿ ನಿನ್ನೆ ಒಂದೇ ದಿನ 43 ಲಕ್ಷ ರೂಪಾಯಿ ವ್ಯಾಪಾರ; ಕೆಲ ಮಾಹಿತಿ ಇಲ್ಲಿದೆ
ಹಿಂದವೀ ಮೀಟ್ ಮಾರ್ಟ್
TV9 Web
| Edited By: |

Updated on: Apr 04, 2022 | 12:08 PM

Share

ಬೆಂಗಳೂರು: ರಾಜ್ಯದಲ್ಲಿ ಹಲಾಲ್ ಕಟ್ (Halal Cut) ಮಾಂಸ ಖರೀದಿಸದಂತೆ ಹಿಂದೂ ಸಂಘಟನೆಗಳು ಮನವಿ ಮಾಡಿವೆ. ಹಲಾಲ್ ಬಾಯ್ಕಾಟ್ (Halal Boycott) ಅಭಿಯಾನದ ಹಿನ್ನೆಲೆ ನಿನ್ನೆ (ಏಪ್ರಿಲ್ 3) ಹಿಂದವೀ ಮಾರ್ಟ್​ಗಳಲ್ಲಿ ಭರ್ಜರಿ ವ್ಯಾಪಾರ ನಡೆದಿದೆ. ಈ ಮೂಲಕ ಹಲಾಲ್ ಬಾಯ್ಕಾಟ್​ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಬೆಂಗಳೂರಿನ ಹಿಂದವೀ ಮಾರ್ಟ್​ಗಳಲ್ಲಿ ಲಕ್ಷ ಲಕ್ಷ ರೂ. ವ್ಯಾಪಾರ ನಡೆದಿದ್ದು, ಎಂಟು ಹಿಂದವೀ ಮಾರ್ಟ್​ನಿಂದ ಬರೋಬ್ಬರಿ 43 ಲಕ್ಷ ರೂಪಾಯಿ ವ್ಯಾಪಾರ ಆಗಿದೆ. ಇನ್ನು ಬೆಂಗಳೂರಿನ ಜಟ್ಕಾ ಕಟ್ ಅಂಗಡಿಗಳಲ್ಲಿ ನಿನ್ನೆ ಒಂದೇ ದಿನ ಸುಮಾರು 7 ಕೋಟಿ ರೂಪಾಯಿ ವ್ಯಾಪಾರ ಆಗಿದೆ.

ಉಳ್ಳಾಲ ಮತ್ತು ಜ್ಞಾನಭಾರತಿ ಹಿಂದವೀ ಮೀಟ್ ಮಾರ್ಟ್​ನಲ್ಲಿ ಸುಮಾರು 3,000 ಕೆಜಿ ಮಟನ್ 950 ಕೆಜಿ ಚಿಕನ್ ಮಾರಟವಾಗಿದ್ದು, ಅಂದಾಜು 21 ಲಕ್ಷದ 71 ಸಾವಿರ ರುಪಾಯಿ ವ್ಯಾಪಾರ ಆಗಿದೆ. ಕಮ್ಮನಹಳ್ಳಿ ಹಿಂದವೀ ಮೀಟ್ ಮಾರ್ಟ್​ನಲ್ಲಿ 750 ಕೆಜಿ ಮಟನ್, 600 ಕೆಜಿ ಚಿಕನ್ ಸೇಲ್ ಆಗಿದ್ದು, 6 ಲಕ್ಷದ 33 ಸಾವಿರ ರುಪಾಯಿ ಮಾರಾಟವಾಗಿದೆ. ಇನ್ನು ಇಂದಿರಾನಗರದ ಮಾರ್ಟ್​ನಲ್ಲಿ 400 ಕೆಜಿ ಮಟನ್, 500 ಕೆಜಿ ಚಿಕನ್ ಮಾರಾಟವಾಗಿದ್ದು, 3 ಲಕ್ಷದ 70 ಸಾವಿರ ರುಪಾಯಿ ಆದಾಯ ಬಂದಿದೆ.

ಹೊರಮಾವಿನಲ್ಲಿ 300 ಕೆಜಿ ಮಟನ್, 400 ಕೆಜಿ ಚಿಕನ್ ಸೇಲ್ ಆಗಿದೆ. ಇಲ್ಲಿ 2 ಲಕ್ಷದ 82 ಸಾವಿರ ರುಪಾಯಿ ಆದಾಯ ಸಿಕ್ಕಿದೆ ಎಂದು ಅಂದಾಜಿಸಲಾಗಿದೆ. ನಾಗವಾರದಲ್ಲಿ 400 ಕೆಜಿ ಮಟನ್ ಮಾರಾಟವಾಗಿದ್ದು, 2 ಲಕ್ಷದ 80 ಸಾವಿರ ರುಪಾಯಿ ಸಿಕ್ಕಿದೆ. ಬನ್ನೇರುಘಟ್ಟದಲ್ಲಿ 300 ಕೆಜಿ ಮಟನ್ ಮಾರಾಟವಾಗಿದೆ. ಇಲ್ಲಿ 2 ಲಕ್ಷದ ಹತ್ತು ಸಾವಿರ ಆದಾಯ ಬಂದಿದೆ, ನೆಲಗದರನಗಳ್ಳಿಯಲ್ಲಿ 300 ಕೆಜಿ ಮಟನ್, 360 ಕೆಜಿ ಚಿಕನ್ ಸೇಲ್ ಆಗಿದೆ. ಇಲ್ಲಿ 2 ಲಕ್ಷದ 74 ಸಾವಿರ ರುಪಾಯಿ ಮಾರಾಟವಾಗಿದೆ ಎಂದು ಅಂದಾಜಿಲಾಗಿದೆ. ಎಂಟು ಹಿಂದವೀ ಮೀಟ್ ಮಾರ್ಟ್​ನಲ್ಲಿ ನಿನ್ನೆ ಆದ ಅಂದಾಜು ವ್ಯಾಪಾರದ ಮೊತ್ತ 43,20,800 ರೂ. ಎಂದು ತಿಳಿದುಬಂದಿದೆ.

ಇದನ್ನೂ ಓದಿ

ಆಂಧ್ರಪ್ರದೇಶದಲ್ಲಿ ಇಂದಿನಿಂದ ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದ 13 ಜಿಲ್ಲೆಗಳು; ಕೊಟ್ಟ ಭರವಸೆಯಂತೆ ನಡೆದುಕೊಂಡ ಸಿಎಂ ಜಗನ್​ರೆಡ್ಡಿ

ತಂದೆ ಸಾವಿನ ನೋವಲ್ಲೂ SSLC ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿನಿ; ಪರೀಕ್ಷೆ ನಂತರ ತಂದೆಯ ಅಂತ್ಯಕ್ರಿಯೆ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ