AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಬಿಜೆಪಿ ನಾಯಕರ ಮೇಲಿನ ಕ್ರಿಮಿನಲ್​ ಕೇಸ್​ಗಳ ಸಂಖ್ಯೆ ಬಿಚ್ಚಿಟ್ಟ ಕಾಂಗ್ರೆಸ್ ವಕ್ತಾರ ರಮೇಶ್​ ಬಾಬು

ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿರುವ ನಳಿನ್ ಕುಮಾರ್​ ಕಟೀಲ್​ ವಿರುದ್ಧ 4 ಕ್ರಿಮಿನಲ್​ ಪ್ರಕರಣಗಳಿವೆ ಎಂದು ನಗರದ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್​​ ವಕ್ತಾರ ರಮೇಶ್ ಬಾಬು ಹೇಳಿಕೆ ನೀಡಿದರು.

ಕರ್ನಾಟಕ ಬಿಜೆಪಿ ನಾಯಕರ ಮೇಲಿನ ಕ್ರಿಮಿನಲ್​ ಕೇಸ್​ಗಳ ಸಂಖ್ಯೆ ಬಿಚ್ಚಿಟ್ಟ ಕಾಂಗ್ರೆಸ್ ವಕ್ತಾರ ರಮೇಶ್​ ಬಾಬು
ಕಾಂಗ್ರೆಸ್ ವಕ್ತಾರ ರಮೇಶ್ ಬಾಬು
TV9 Web
| Edited By: |

Updated on:Dec 01, 2022 | 5:22 PM

Share

ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಒಂದಲ್ಲ ಒಂದು ವಿಚಾರಕ್ಕೆ ಕಾಂಗ್ರೆಸ್ (Congress)​​ ಹಾಗೂ ಬಿಜೆಪಿ ನಡುವೆ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಇದೀಗ ರೌಡಿಗಳು ಬಿಜೆಪಿ ನಾಯಕರ ಜೊತೆ ಕಾಣಿಸಿಕೊಳ್ಳುತ್ತಿರುವುದನ್ನು ಕಾಂಗ್ರೆಸ್ ಅಸ್ತ್ರವನ್ನಾಗಿ ಮಾಡಿಕೊಂಡು ಬಿಜೆಪಿ ವಿರುದ್ಧ ಮುಗಿಬಿದ್ದಿದೆ. ಇನ್ನು ಈ ಬಗ್ಗೆ ಇಂದು(ಡಿ.1) ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ವಕ್ತಾರ ರಮೇಶ್ ಬಾಬು (Ramesh Babu), ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್​ ಕಟೀಲ್, ಪ್ರತಾಪ್ ಸಿಂಹ, ಸದಾನಂದಗೌಡ ಸೇರಿದಂತೆ ರಾಜ್ಯ ಬಿಜೆಪಿಯ ಒಟ್ಟು 47 ಶಾಸಕರ ವಿರುದ್ಧ ಕ್ರಿಮಿನಲ್ ಕೇಸ್​ಗಳಿವೆ ಎಂದು ಆರೋಪಿಸಿದರು.

ಸಚಿವ ಶ್ರೀರಾಮುಲು ವಿರುದ್ಧ ಒಂದು ಕ್ರಿಮಿನಲ್ ಕೇಸ್ ಇದೆ. ಸಚಿವ ಕೆ.ಗೋಪಾಲಯ್ಯ ವಿರುದ್ಧ ಒಂದು ಕೊಲೆ ಕೇಸ್ ಇದೆ. ಬಿಜೆಪಿ ಸಂಸದ ಪ್ರತಾಪ್ ಸಿಂಹ​ 4 ಕೇಸ್​ಗೆ ತಡೆ ತಂದಿದ್ದಾರೆ. ಮಾಜಿ ಸಿಎಂ ಸದಾನಂದಗೌಡ ಒಂದು ಕೇಸ್​ನಲ್ಲಿ ತಡೆ ತಂದಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ರಮೇಶ್ ಬಾಬು ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯದಲ್ಲಿ 60 ರೌಡಿಶೀಟರ್​ಗಳು ಬಿಜೆಪಿ ಸೇರಲು ಸಿದ್ಧರಿದ್ದಾರೆ: ವಕ್ತಾರ ಎಂ.ಲಕ್ಷ್ಮಣ 

ಬಿಜೆಪಿ ಸೇರಲು ರಾಜ್ಯಾದ್ಯಂತ ರೌಡಿಗಳು ಉತ್ಸುಕರಾಗಿದ್ದಾರೆ. ರಾಜ್ಯದಲ್ಲಿ 60 ರೌಡಿಶೀಟರ್​ಗಳು ಬಿಜೆಪಿ ಸೇರಲು ಸಿದ್ಧರಿದ್ದಾರೆ. ಯಾವ್ಯಾವ ಕ್ಷೇತ್ರಗಳಲ್ಲಿ ಕಾಂಗ್ರೆಸ್, ಜೆಡಿಎಸ್​​ ಗೆಲ್ಲಬಹುದಿತ್ತೋ, ಆ ಕ್ಷೇತ್ರಗಳಲ್ಲಿ ರೌಡಿಗಳನ್ನು ಬಿಡುತ್ತಿದ್ದಾರೆ ಎಂದು ಕೆಪಿಸಿಸಿ ಕಚೇರಿಯಲ್ಲಿ ವಕ್ತಾರ ಎಂ.ಲಕ್ಷ್ಮಣ ಗಂಭೀರ ಆರೋಪ ಮಾಡಿದರು. ಬಿಜೆಪಿಗೆ ರೌಡಿಗಳ ಸೇರ್ಪಡೆ ಸಂಬಂಧ ಈಗಾಗಲೇ ಸಭೆ ನಡೆದಿದೆ. ರಾಜ್ಯಾದ್ಯಂತ 60 ರೌಡಿಗಳು ಬಿಜೆಪಿಗೆ ಸೇರ್ಪಡೆ ಆಗುತ್ತಿದ್ದಾರಂತೆ ಎಂದರು.

ಇದನ್ನೂ ಓದಿ: ವೋಟರ್ ಐಡಿ ಪರಿಷ್ಕರಣೆ ಅಕ್ರಮ ಪ್ರಕರಣ, ಪ್ರಜಾಪ್ರಭುತ್ವ ಎತ್ತಸಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ ನಿವೃತ್ತ ನ್ಯಾ.ಸಂತೋಷ ಹೆಗ್ಡೆ

ಬಿಜೆಪಿಯ ಮೂವರು ಸಂಸದರ ವಿರುದ್ಧ ಕ್ರಿಮಿನಲ್ ಕೇಸ್​ಗಳಿವೆ. ಆ್ಯಕ್ಸಿಡೆಂಟ್ ಮಾಡಿ ನಾಲ್ವರು ಅಮಾಯಕರನ್ನು ಸಿ.ಟಿ.ರವಿ ಕೊಂದಿದ್ದ. ಇಂತಹ ಸಿ.ಟಿ.ರವಿ ಸತ್ಯಹರಿಶ್ಚಂದ್ರನಂತೆ ಮಾತನಾಡುತ್ತಾರೆ. ನಮ್ಮ ನಾಯಕರ ಬಗ್ಗೆ ಮಾತಾಡಲು ಬಿಜೆಪಿಯವರಿಗೆ ನೈತಿಕತೆಯಿಲ್ಲ ಎಂದು ಎಂ.ಲಕ್ಷ್ಮಣ ಹೇಳಿದರು.

ರೌಡಿಶೀಟರ್‌ಗಳು ರಾಜಕೀಯಕ್ಕೆ ಬರಬಾರದು ಇದಕ್ಕೆ ಕಡಿವಾಣ ಹಾಕಬೇಕು: 

ರೌಡಿಶೀಟರ್​​ಗಳನ್ನ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳುತ್ತಿರುವ ವಿಚಾರವಾಗಿ ನಿವೃತ್ತ ನ್ಯಾ.ಸಂತೋಷ ಹೆಗ್ಡೆ ಅವರು ಪ್ರತಿಕ್ರಿಯೆ ನೀಡಿದ್ದು, ಎಲ್ಲರೂ ರಾಜಕೀಯಕ್ಕೆ ಬರಬೇಕು ಎಂದುಕೊಳ್ಳುತ್ತಿದ್ದಾರೆ. ಐಎಎಸ್‌ ಅಧಿಕಾರಿಗಳು, ಗೂಂಡಾಗಳು ರಾಜಕೀಯಕ್ಕೆ ಬರುತ್ತಿದ್ದಾರೆ. ಇಲ್ಲಿರುವಷ್ಟು ಸಂಪಾದನೆ ಎಲ್ಲಿಯೂ ಬರುವುದಿಲ್ಲ ಎಂದುಕೊಂಡಿದ್ದಾರೆ. ಇದೇ ಕಾರಣಕ್ಕೆ ರೌಡಿಶೀಟರ್‌ಗಳು ರಾಜಕೀಯಕ್ಕೆ ಬರುತ್ತಿದ್ದಾರೆ. ಇದಕ್ಕೆ ಕಡಿವಾಣ ಬೀಳಬೇಕು, ವ್ಯವಸ್ಥೆ ಸುಧಾರಣೆ ಆಗಬೇಕು. ಲೋಕಾಯುಕ್ತ ಈಗ ಅಧಿಕಾರ ಕೊಟ್ಟಿದ್ದಾರೆ ಅದು ಹೇಗೆ ಆಡಳಿತ ನಡೆಸುತ್ತದೆ ಎನ್ನುವುದು ಕಾದು ನೋಡೋಣ ಎಂದು ಹೇಳಿದರು.

ಇದನ್ನೂ ಓದಿ: ಜಮೀರ್ ಹಣಿಯಲು ‘ಸೈಲೆಂಟ್’ ಅಸ್ತ್ರ: ಸೈಲೆಂಟ್ ಸುನೀಲ್ ಮೂಲಕ ಸೋಲಿಸಲು ರಣತಂತ್ರ…!

ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ವಾಗ್ದಾಳಿ

ಇನ್ನು ಈ ವಿಚಾರವಾಗಿ ಕಾಂಗ್ರೆಸ್ ಮತ್ತೆ ಬಿಜೆಪಿ ವಿರುದ್ಧ ಸರಣಿ ಟ್ವೀಟ್ ಮೂಲಕ ವಾಗ್ದಾಳಿ ಮಾಡಿದೆ. ರೌಡಿಗಳಿಗೂ ಬಿಜೆಪಿ ನಾಯಕರಿಗೂ ಏನು ಸಂಬಂಧ? ರೌಡಿಗಳಿಗೂ ಬಿಜೆಪಿಗೂ ಯಾವ ನಂಟು, ಏನು ವ್ಯವಹಾರ? ಎಂದು ಟ್ವೀಟ್​ ಮೂಲಕ ರಾಜ್ಯ ಕಾಂಗ್ರೆಸ್ ಘಟಕ ಬಿಜೆಪಿಗೆ ಪ್ರಶ್ನೆ ಮಾಡಿದೆ. ಈಗಾಗಲೇ ಸೈಲೆಂಟ್ ಸುನಿಲ್, ಫೈಟರ್ ರವಿ, ಬೆತ್ತನಗೆರೆ ಶಂಕರ ಮತ್ತಿತರರು ಬಿಜೆಪಿ ಜೊತೆ ಗುರುತಿಸಿಕೊಂಡಿದ್ದಾರೆ. ಆದ್ರೆ ಈಗ ವಿಲ್ಸನ್​ಗಾರ್ಡನ್​ ನಾಗ ಕೂಡ ನಿನ್ನೆ ರಾತ್ರಿ ಸಚಿವರ ಮನೆಗೆ ಭೇಟಿ ನೀಡಿದ್ದಾನೆ. ಸಚಿವ ವಿ.ಸೋಮಣ್ಣ ಮನೆಗೆ ರೌಡಿಶೀಟರ್​ ನಾಗ ಬಂದಿದ್ದೇಕೆ? ನಾಗನೂ ಬಿಜೆಪಿ ರೌಡಿ ಮೋರ್ಚಾ ಸೇರುವ ಸಂಭವವಿದೆಯೇ? ಎಂದು ಟ್ವೀಟ್ ಮೂಲಕ ಕಾಂಗ್ರೆಸ್​ ಟೀಕೆ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:10 pm, Thu, 1 December 22

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್