AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣ: 48 ಎಫ್ಐಆರ್ ದಾಖಲು

ಬೆಂಗಳೂರಿನ ಹಲವು ಖಾಸಗಿ ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿತ್ತು. 48 ಶಾಲೆಗಳಿಗೆ ಕಳುಹಿಸಿದ ಇಮೇಲ್​ನಲ್ಲಿ ಉಗ್ರವಾದ ಪದ ಬಳಿಕೆ ಮಾಡಲಾಗಿದ್ದು, ಪೊಲೀಸ್ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಅಲ್ಲದೆ, ಒಟ್ಟು 48 ಎಫ್​ಐಆರ್​ಗಳನ್ನು ದಾಖಲಿಸಿದ್ದಾರೆ.

ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣ: 48 ಎಫ್ಐಆರ್ ದಾಖಲು
ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದ ಪ್ರಕರಣ ಸಂಬಂಧ 48 ಎಫ್ಐಆರ್ ದಾಖಲು (ಸಾಂದರ್ಭಿಕ ಚಿತ್ರ)
Shivaprasad B
| Updated By: Rakesh Nayak Manchi|

Updated on: Dec 02, 2023 | 7:27 AM

Share

ಬೆಂಗಳೂರು, ಡಿ.2: ನಗರದ (Bengaluru) ಹಲವು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ (Bomb Threat) ಹಾಕಿದ ಪ್ರಕರಣ ಸಂಬಂಧ 48 ಎಫ್​ಐಆರ್​ಗಳು ದಾಖಲಾಗಿವೆ. ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರ ಸೂಚನೆಯಂತೆ ಆಯಾ ಠಾಣಾ ವ್ಯಾಪ್ತಿಯಲ್ಲಿ ಎಫ್ಐಆರ್​ಗಳು ದಾಖಲಾಗಿವೆ. ಈ ಎಲ್ಲಾ ಎಫ್​ಐಆರ್​ಗಳನ್ನು ಕ್ರೂಡೀಕರಿಸಿ ಪೊಲೀಸರು ತನಿಖೆ ನಡೆಸಲಿದ್ದಾರೆ.

ರೈಲ್ವೇ ನಿಲ್ದಾಣ, ವಿಮಾನ ನಿಲ್ದಾಣ, ಬಸ್​ ನಿಲ್ದಾಣಗಳಿಗೆ ಬಾಂಬ್ ಬೆದರಿಕೆಗಳು ಅಗ್ಗಾಗೆ ಬರುತ್ತಿರುತ್ತವೆ. ಆದರೆ, ನಿನ್ನೆ ಬೆಂಗಳೂರಿನ 48 ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ರವಾನೆ ಮಾಡಲಾಗಿತ್ತು. ಈ ಬೆದರಿಕೆಯಲ್ಲಿ ಉಗ್ರವಾದ ಪದಗಳ ಉಲ್ಲೇಖವಾಗಿದ್ದರಿಂದ ಆತಂಕಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಬೆಂಗಳೂರು ಮಾತ್ರವಲ್ಲದೆ, ವಿದೇಶಗಳಲ್ಲೂ ಶಾಲೆಗಳಿಗೆ ಬಂದಿದ್ದ ಬಾಂಬ್​ ಬೆದರಿಕೆ ಸಂದೇಶ

ಮೊದಲು 15 ಶಾಲೆಗಳಿಗೆ ಬೆದರಿಕೆ ಇಮೇಲ್​ ಬಂದಿದೆ. ಬಳಿಕ ಇನ್ನುಳಿದ ಆಡಳಿತ ಮಂಡಳಿಗಳು ತಮ್ಮ ತಮ್ಮ ಶಾಲೆಯ ಇಮೇಲ್ ಪರಿಶೀಲನೆ ಮಾಡಿದ ಬಳಿಕ 48 ಶಾಲೆಗಳಿಗೆ ಅಂತಹದ್ದೇ ಬೆದರಿಕೆ ಸಂದೇಶಗಳು ಬಂದಿರುವುದು ತಿಳಿದುಬಂದಿದೆ. ಬನ್ನೇರುಘಟ್ಟದ 7 ಶಾಲೆಗಳಿಗೆ, ಹೆಬ್ಬಗೋಡಿಯ 4, ಸರ್ಜಾಪುರದ 5, ಜಿಗಣಿಯ 2 ಶಾಲೆಗಳಿಗೆ ಬೆದರಿಕೆ ಸಂದೇಶಗಳು ಬಂದಿದ್ದವು.

ಬೆಂಗಳೂರಿನ ದಕ್ಷಿಣ ವಲಯ-1 ರಲ್ಲಿ 15 ಶಾಲೆಗಳಿಗೆ, ದಕ್ಷಿಣ ವಲಯ 2ರಲ್ಲಿ 3, ವಲಯ 3ರಲ್ಲಿ 10 ಹಾಗೂ ವಲಯ 4ರಲ್ಲಿ 4 ಶಾಲೆಗಳಿಗೆ ಬೆದರಿಕೆ ಸಂದೇಶಗಳು ಬಂದಿದ್ದವು. ಉತ್ತರ ವಲಯಗಳಲ್ಲಿ ಒಟ್ಟು 7 ಶಾಲೆಗಳಿಗೆ ಹಾಗೂ ಅನೇಕಲ್ ತಾಲೂಕಿನ 5 ಶಾಲೆಗಳಿಗೂ ಇಂತಹದ್ದೇ ಇಮೇಲ್ ಬಂದಿದ್ದವು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಪಘಾತದಲ್ಲಿ ಮೃತಪಟ್ಟ ಪತ್ನಿಯನ್ನು ಬೈಕ್​ನಲ್ಲಿ ಕಟ್ಟಿ ಹೊತ್ತೊಯ್ದ ಪತಿ
ಅಪಘಾತದಲ್ಲಿ ಮೃತಪಟ್ಟ ಪತ್ನಿಯನ್ನು ಬೈಕ್​ನಲ್ಲಿ ಕಟ್ಟಿ ಹೊತ್ತೊಯ್ದ ಪತಿ
ಕೊನೆಯ ಓವರ್​ನಲ್ಲಿ 7 ರನ್​ಗಳ​ ಗುರಿ ನಿಯಂತ್ರಿಸಿ ಪಂದ್ಯ ಗೆಲ್ಲಿಸಿದ ಆಶಿಶ್
ಕೊನೆಯ ಓವರ್​ನಲ್ಲಿ 7 ರನ್​ಗಳ​ ಗುರಿ ನಿಯಂತ್ರಿಸಿ ಪಂದ್ಯ ಗೆಲ್ಲಿಸಿದ ಆಶಿಶ್
VIDEO: ಮ್ಯಾಕ್ಸ್​ವೆಲ್ ಮ್ಯಾಜಿಕ್... ಎಂತಹ ಅದ್ಭುತ ಕ್ಯಾಚ್
VIDEO: ಮ್ಯಾಕ್ಸ್​ವೆಲ್ ಮ್ಯಾಜಿಕ್... ಎಂತಹ ಅದ್ಭುತ ಕ್ಯಾಚ್
ಮೈಸೂರು ದಸರಾ 2025 ರ ಉದ್ಘಾಟಕರು ಯಾರು? ಸಚಿವ ಮಹದೇವಪ್ಪ ಕೊಟ್ಟರು ಸುಳಿವು
ಮೈಸೂರು ದಸರಾ 2025 ರ ಉದ್ಘಾಟಕರು ಯಾರು? ಸಚಿವ ಮಹದೇವಪ್ಪ ಕೊಟ್ಟರು ಸುಳಿವು
171 ರನ್​ ಗಳಿಸಿದ ಪಾಕಿಸ್ತಾನ್: 184 ರನ್​ ಚೇಸ್ ಮಾಡಿ ಗೆದ್ದ ವಿಂಡೀಸ್
171 ರನ್​ ಗಳಿಸಿದ ಪಾಕಿಸ್ತಾನ್: 184 ರನ್​ ಚೇಸ್ ಮಾಡಿ ಗೆದ್ದ ವಿಂಡೀಸ್
Daily Devotional: ಮಕ್ಕಳಿಗೆ ಬಾಲಾರಿಷ್ಟ ದೋಷಕ್ಕೆ ಪರಿಹಾರ ತಿಳಿಯಿರಿ
Daily Devotional: ಮಕ್ಕಳಿಗೆ ಬಾಲಾರಿಷ್ಟ ದೋಷಕ್ಕೆ ಪರಿಹಾರ ತಿಳಿಯಿರಿ
Daily horoscope: ಹಿಂಜರಿಕೆಯಿಂದ ನಿಮಗೆ ಒಳ್ಳೆಯದೇ ಆಗಲಿದೆ
Daily horoscope: ಹಿಂಜರಿಕೆಯಿಂದ ನಿಮಗೆ ಒಳ್ಳೆಯದೇ ಆಗಲಿದೆ
ವಿದ್ಯುತ್​ ದೀಪಾಲಂಕಾರ ನೋಡುತ್ತ ಮೈಸೂರು ಅರಮನೆಗೆ ಬಂದ ದಸರಾ ಆನೆಗಳು
ವಿದ್ಯುತ್​ ದೀಪಾಲಂಕಾರ ನೋಡುತ್ತ ಮೈಸೂರು ಅರಮನೆಗೆ ಬಂದ ದಸರಾ ಆನೆಗಳು
ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ.: ಯತ್ನಾಳ್
ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ.: ಯತ್ನಾಳ್
ಮೋದಿ ತೆರಳುತ್ತಿದ್ದ ವೇಳೆ ಬ್ಯಾರಿಕೇಡ್​ ಜಂಪ್ ಮಾಡಲು ಯತ್ನಿಸಿದ ಯುವಕ
ಮೋದಿ ತೆರಳುತ್ತಿದ್ದ ವೇಳೆ ಬ್ಯಾರಿಕೇಡ್​ ಜಂಪ್ ಮಾಡಲು ಯತ್ನಿಸಿದ ಯುವಕ