AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣ: 48 ಎಫ್ಐಆರ್ ದಾಖಲು

ಬೆಂಗಳೂರಿನ ಹಲವು ಖಾಸಗಿ ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿತ್ತು. 48 ಶಾಲೆಗಳಿಗೆ ಕಳುಹಿಸಿದ ಇಮೇಲ್​ನಲ್ಲಿ ಉಗ್ರವಾದ ಪದ ಬಳಿಕೆ ಮಾಡಲಾಗಿದ್ದು, ಪೊಲೀಸ್ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಅಲ್ಲದೆ, ಒಟ್ಟು 48 ಎಫ್​ಐಆರ್​ಗಳನ್ನು ದಾಖಲಿಸಿದ್ದಾರೆ.

ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣ: 48 ಎಫ್ಐಆರ್ ದಾಖಲು
ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದ ಪ್ರಕರಣ ಸಂಬಂಧ 48 ಎಫ್ಐಆರ್ ದಾಖಲು (ಸಾಂದರ್ಭಿಕ ಚಿತ್ರ)
Shivaprasad B
| Edited By: |

Updated on: Dec 02, 2023 | 7:27 AM

Share

ಬೆಂಗಳೂರು, ಡಿ.2: ನಗರದ (Bengaluru) ಹಲವು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ (Bomb Threat) ಹಾಕಿದ ಪ್ರಕರಣ ಸಂಬಂಧ 48 ಎಫ್​ಐಆರ್​ಗಳು ದಾಖಲಾಗಿವೆ. ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರ ಸೂಚನೆಯಂತೆ ಆಯಾ ಠಾಣಾ ವ್ಯಾಪ್ತಿಯಲ್ಲಿ ಎಫ್ಐಆರ್​ಗಳು ದಾಖಲಾಗಿವೆ. ಈ ಎಲ್ಲಾ ಎಫ್​ಐಆರ್​ಗಳನ್ನು ಕ್ರೂಡೀಕರಿಸಿ ಪೊಲೀಸರು ತನಿಖೆ ನಡೆಸಲಿದ್ದಾರೆ.

ರೈಲ್ವೇ ನಿಲ್ದಾಣ, ವಿಮಾನ ನಿಲ್ದಾಣ, ಬಸ್​ ನಿಲ್ದಾಣಗಳಿಗೆ ಬಾಂಬ್ ಬೆದರಿಕೆಗಳು ಅಗ್ಗಾಗೆ ಬರುತ್ತಿರುತ್ತವೆ. ಆದರೆ, ನಿನ್ನೆ ಬೆಂಗಳೂರಿನ 48 ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ರವಾನೆ ಮಾಡಲಾಗಿತ್ತು. ಈ ಬೆದರಿಕೆಯಲ್ಲಿ ಉಗ್ರವಾದ ಪದಗಳ ಉಲ್ಲೇಖವಾಗಿದ್ದರಿಂದ ಆತಂಕಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಬೆಂಗಳೂರು ಮಾತ್ರವಲ್ಲದೆ, ವಿದೇಶಗಳಲ್ಲೂ ಶಾಲೆಗಳಿಗೆ ಬಂದಿದ್ದ ಬಾಂಬ್​ ಬೆದರಿಕೆ ಸಂದೇಶ

ಮೊದಲು 15 ಶಾಲೆಗಳಿಗೆ ಬೆದರಿಕೆ ಇಮೇಲ್​ ಬಂದಿದೆ. ಬಳಿಕ ಇನ್ನುಳಿದ ಆಡಳಿತ ಮಂಡಳಿಗಳು ತಮ್ಮ ತಮ್ಮ ಶಾಲೆಯ ಇಮೇಲ್ ಪರಿಶೀಲನೆ ಮಾಡಿದ ಬಳಿಕ 48 ಶಾಲೆಗಳಿಗೆ ಅಂತಹದ್ದೇ ಬೆದರಿಕೆ ಸಂದೇಶಗಳು ಬಂದಿರುವುದು ತಿಳಿದುಬಂದಿದೆ. ಬನ್ನೇರುಘಟ್ಟದ 7 ಶಾಲೆಗಳಿಗೆ, ಹೆಬ್ಬಗೋಡಿಯ 4, ಸರ್ಜಾಪುರದ 5, ಜಿಗಣಿಯ 2 ಶಾಲೆಗಳಿಗೆ ಬೆದರಿಕೆ ಸಂದೇಶಗಳು ಬಂದಿದ್ದವು.

ಬೆಂಗಳೂರಿನ ದಕ್ಷಿಣ ವಲಯ-1 ರಲ್ಲಿ 15 ಶಾಲೆಗಳಿಗೆ, ದಕ್ಷಿಣ ವಲಯ 2ರಲ್ಲಿ 3, ವಲಯ 3ರಲ್ಲಿ 10 ಹಾಗೂ ವಲಯ 4ರಲ್ಲಿ 4 ಶಾಲೆಗಳಿಗೆ ಬೆದರಿಕೆ ಸಂದೇಶಗಳು ಬಂದಿದ್ದವು. ಉತ್ತರ ವಲಯಗಳಲ್ಲಿ ಒಟ್ಟು 7 ಶಾಲೆಗಳಿಗೆ ಹಾಗೂ ಅನೇಕಲ್ ತಾಲೂಕಿನ 5 ಶಾಲೆಗಳಿಗೂ ಇಂತಹದ್ದೇ ಇಮೇಲ್ ಬಂದಿದ್ದವು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್
ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್
ನಿಮ್ಮ 10 ಕೋಟಿ ರೂ. ಎಲ್ಲಿ ಸಾಕಾಗುತ್ತದೆ
ನಿಮ್ಮ 10 ಕೋಟಿ ರೂ. ಎಲ್ಲಿ ಸಾಕಾಗುತ್ತದೆ
ಸ್ಕೂಟಿಯಲ್ಲಿ ಹೋಗುತ್ತಿದ್ದ ಯುವತಿಯ ಬೀಳಿಸಿ ಸರ ಕದ್ದ ಕಳ್ಳ
ಸ್ಕೂಟಿಯಲ್ಲಿ ಹೋಗುತ್ತಿದ್ದ ಯುವತಿಯ ಬೀಳಿಸಿ ಸರ ಕದ್ದ ಕಳ್ಳ