AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣ: 48 ಎಫ್ಐಆರ್ ದಾಖಲು

ಬೆಂಗಳೂರಿನ ಹಲವು ಖಾಸಗಿ ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿತ್ತು. 48 ಶಾಲೆಗಳಿಗೆ ಕಳುಹಿಸಿದ ಇಮೇಲ್​ನಲ್ಲಿ ಉಗ್ರವಾದ ಪದ ಬಳಿಕೆ ಮಾಡಲಾಗಿದ್ದು, ಪೊಲೀಸ್ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಅಲ್ಲದೆ, ಒಟ್ಟು 48 ಎಫ್​ಐಆರ್​ಗಳನ್ನು ದಾಖಲಿಸಿದ್ದಾರೆ.

ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣ: 48 ಎಫ್ಐಆರ್ ದಾಖಲು
ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದ ಪ್ರಕರಣ ಸಂಬಂಧ 48 ಎಫ್ಐಆರ್ ದಾಖಲು (ಸಾಂದರ್ಭಿಕ ಚಿತ್ರ)
Follow us
Shivaprasad
| Updated By: Rakesh Nayak Manchi

Updated on: Dec 02, 2023 | 7:27 AM

ಬೆಂಗಳೂರು, ಡಿ.2: ನಗರದ (Bengaluru) ಹಲವು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ (Bomb Threat) ಹಾಕಿದ ಪ್ರಕರಣ ಸಂಬಂಧ 48 ಎಫ್​ಐಆರ್​ಗಳು ದಾಖಲಾಗಿವೆ. ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರ ಸೂಚನೆಯಂತೆ ಆಯಾ ಠಾಣಾ ವ್ಯಾಪ್ತಿಯಲ್ಲಿ ಎಫ್ಐಆರ್​ಗಳು ದಾಖಲಾಗಿವೆ. ಈ ಎಲ್ಲಾ ಎಫ್​ಐಆರ್​ಗಳನ್ನು ಕ್ರೂಡೀಕರಿಸಿ ಪೊಲೀಸರು ತನಿಖೆ ನಡೆಸಲಿದ್ದಾರೆ.

ರೈಲ್ವೇ ನಿಲ್ದಾಣ, ವಿಮಾನ ನಿಲ್ದಾಣ, ಬಸ್​ ನಿಲ್ದಾಣಗಳಿಗೆ ಬಾಂಬ್ ಬೆದರಿಕೆಗಳು ಅಗ್ಗಾಗೆ ಬರುತ್ತಿರುತ್ತವೆ. ಆದರೆ, ನಿನ್ನೆ ಬೆಂಗಳೂರಿನ 48 ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ರವಾನೆ ಮಾಡಲಾಗಿತ್ತು. ಈ ಬೆದರಿಕೆಯಲ್ಲಿ ಉಗ್ರವಾದ ಪದಗಳ ಉಲ್ಲೇಖವಾಗಿದ್ದರಿಂದ ಆತಂಕಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಬೆಂಗಳೂರು ಮಾತ್ರವಲ್ಲದೆ, ವಿದೇಶಗಳಲ್ಲೂ ಶಾಲೆಗಳಿಗೆ ಬಂದಿದ್ದ ಬಾಂಬ್​ ಬೆದರಿಕೆ ಸಂದೇಶ

ಮೊದಲು 15 ಶಾಲೆಗಳಿಗೆ ಬೆದರಿಕೆ ಇಮೇಲ್​ ಬಂದಿದೆ. ಬಳಿಕ ಇನ್ನುಳಿದ ಆಡಳಿತ ಮಂಡಳಿಗಳು ತಮ್ಮ ತಮ್ಮ ಶಾಲೆಯ ಇಮೇಲ್ ಪರಿಶೀಲನೆ ಮಾಡಿದ ಬಳಿಕ 48 ಶಾಲೆಗಳಿಗೆ ಅಂತಹದ್ದೇ ಬೆದರಿಕೆ ಸಂದೇಶಗಳು ಬಂದಿರುವುದು ತಿಳಿದುಬಂದಿದೆ. ಬನ್ನೇರುಘಟ್ಟದ 7 ಶಾಲೆಗಳಿಗೆ, ಹೆಬ್ಬಗೋಡಿಯ 4, ಸರ್ಜಾಪುರದ 5, ಜಿಗಣಿಯ 2 ಶಾಲೆಗಳಿಗೆ ಬೆದರಿಕೆ ಸಂದೇಶಗಳು ಬಂದಿದ್ದವು.

ಬೆಂಗಳೂರಿನ ದಕ್ಷಿಣ ವಲಯ-1 ರಲ್ಲಿ 15 ಶಾಲೆಗಳಿಗೆ, ದಕ್ಷಿಣ ವಲಯ 2ರಲ್ಲಿ 3, ವಲಯ 3ರಲ್ಲಿ 10 ಹಾಗೂ ವಲಯ 4ರಲ್ಲಿ 4 ಶಾಲೆಗಳಿಗೆ ಬೆದರಿಕೆ ಸಂದೇಶಗಳು ಬಂದಿದ್ದವು. ಉತ್ತರ ವಲಯಗಳಲ್ಲಿ ಒಟ್ಟು 7 ಶಾಲೆಗಳಿಗೆ ಹಾಗೂ ಅನೇಕಲ್ ತಾಲೂಕಿನ 5 ಶಾಲೆಗಳಿಗೂ ಇಂತಹದ್ದೇ ಇಮೇಲ್ ಬಂದಿದ್ದವು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ:ಕುಮಟಾ-ಶಿರಸಿ ಸಂಪರ್ಕ ಕಡಿತ!
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ:ಕುಮಟಾ-ಶಿರಸಿ ಸಂಪರ್ಕ ಕಡಿತ!