AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಫಿಕ್ ಫೈನ್ ರಿಯಾಯಿತಿಗೆ ಗುಡ್ ರೆಸ್ಪಾನ್ಸ್: ಕೇವಲ 14 ದಿನದಲ್ಲಿ 18 ಕೋಟಿಗೂ ಅಧಿಕ ದಂಡ ಸಂಗ್ರಹ

ಸಂಚಾರಿ ನಿಯಮ ಉಲ್ಲಂಘನೆ ದಂಡದ ಮೇಲಿನ ಶೇಕಡಾ 50ರಷ್ಟು ರಿಯಾಯಿತಿ ಯೋಜನೆಗೆ ಸದ್ಯ ಬೆಂಗಳೂರಿನಲ್ಲಿ ಭರ್ಜರಿ ಸ್ಪಂದನೆ ದೊರೆಯುತ್ತಿದೆ. ಬೆಂಗಳೂರು ಸಂಚಾರ ಪೊಲೀಸರು ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಕೇವಲ 14 ದಿನಗಳಲ್ಲಿ 18.15 ಕೋಟಿ ರೂ ದಂಡ ವಸೂಲಿಯಾಗಿದೆ. ಜೊತೆಗೆ 6.06 ಲಕ್ಷ ಪ್ರಕರಣಗಳು ಇತ್ಯರ್ಥಗೊಂಡಿವೆ.

ಟ್ರಾಫಿಕ್ ಫೈನ್ ರಿಯಾಯಿತಿಗೆ ಗುಡ್ ರೆಸ್ಪಾನ್ಸ್: ಕೇವಲ 14 ದಿನದಲ್ಲಿ 18 ಕೋಟಿಗೂ ಅಧಿಕ ದಂಡ ಸಂಗ್ರಹ
ಪ್ರಾತಿನಿಧಿಕ ಚಿತ್ರ Image Credit source: thehindu.com
ಗಂಗಾಧರ​ ಬ. ಸಾಬೋಜಿ
|

Updated on: Jul 05, 2026 | 3:18 PM

Share

ಮುಖ್ಯಾಂಶಗಳು

  • ಟ್ರಾಫಿಕ್ ಫೈನ್ ಶೇ 50 ರಿಯಾಯಿತಿ ಸಖತ್ ರೆಸ್ಪಾನ್ಸ್
  • ಈರವರೆಗೂ 6,06,032 ಪ್ರಕರಣಗಳು ಇತ್ಯರ್ಥ
  • ಕೋಟಿ ಕೋಟಿ ರೂ ದಂಡದ ಹಣ ಪಾವತಿ

ಬೆಂಗಳೂರು, ಜುಲೈ 05: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಸಂಚಾರ ನಿಯಮ ಉಲ್ಲಂಘನೆಯ ಬಾಕಿ ದಂಡದ ಮೇಲಿನ ಶೇಕಡಾ 50ರಷ್ಟು ರಿಯಾಯಿತಿ ಯೋಜನೆಗೆ (Traffic Fine Discount) ಸಾರ್ವಜನಿಕರಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜೂನ್ 21, ರಿಂದ ಜುಲೈ 4ರವರೆಗೆ ಅಂದರೆ ಕೇವಲ 14 ದಿನಗಳ ಅವಧಿಯಲ್ಲಿ ಒಟ್ಟು 18,15,42,200 ರೂ ದಂಡದ ಹಣ ಪಾವತಿಯಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.

ಕೋಟಿ ಕೋಟಿ ದಂಡದ ಹಣ ಪಾವತಿ

ಈ ಕುರಿತಾಗಿ ಬೆಂಗಳೂರು ಸಂಚಾರ ಪೊಲೀಸರು ಟ್ವೀಟ್ ಮಾಡಿದ್ದು, ಕರ್ನಾಟಕ ರಾಜ್ಯ ಸರ್ಕಾರವು ಜೂನ್​​ 04ರಿಂದ ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಾಖಲಾದ ಪ್ರಕರಣಗಳಿಗೆ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಪ್ರಕರಣಗಳಲ್ಲಿ ದಂಡವನ್ನು ಪಾವತಿಸಲು ಶೇ.50% ರಷ್ಟು ರಿಯಾಯಿತಿಗೆ ಆದೇಶಿಸಿತ್ತು. ಅದರಂತೆ ಜೂನ್​​ 21ರಿಂದ ಜಾರಿಗೆ ಬಂದಿತ್ತು.

ಬೆಂಗಳೂರು ಸಂಚಾರ ಪೊಲೀಸರು ಟ್ವೀಟ್

ದಂಡವನ್ನು ಪಾವತಿಸಲು ನಿಗದಿಪಡಿಸಲಾಗಿದ್ದ ರಿಯಾಯಿತಿ ಅವಧಿ ಅಂದರೆ ಜೂನ್​​ 21ರಿಂದ ಜುಲೈ 04ರ ವರೆಗೆ ವಿವಿಧ ಮಾಧ್ಯಮಗಳ ಮೂಲಕ ಬರೋಬ್ಬರಿ 6,06,032 ಪ್ರಕರಣಗಳು ಇತ್ಯರ್ಥಗೊಂಡಿದ್ದು, ಒಟ್ಟು ರೂ.18,15,42,200 ರೂ ದಂಡ ಸಂಗ್ರಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಟ್ರಾಫಿಕ್ ಫೈನ್ ಶೇ 50 ರಿಯಾಯಿತಿ: ಕೇವಲ 4 ದಿನದಲ್ಲಿ 6 ಕೋಟಿ ರೂ. ಸಂಗ್ರಹ!

ವಾಹನ ಸವಾರರು ಈ ರಿಯಾಯಿತಿ ದರದಲ್ಲಿ ಬಾಕಿ ದಂಡ ಪಾವತಿಸಲು ಜುಲೈ 10ರವರೆಗೆ ಮಾತ್ರ ಅವಕಾಶವಿದೆ. ಇನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಹಾಗೂ ದಂಡ ಪಾವತಿ ಪ್ರಕ್ರಿಯೆಯನ್ನು ಸುಗಮಗೊಳಿಸಲು ನಗರದ ಪ್ರಮುಖ ಜಂಕ್ಷನ್‌ಗಳಲ್ಲಿ ಪಿಎಸ್​ಐ ಒಳಗೊಂಡಂತೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದರೊಂದಿಗೆ, ವಾಹನ ಸವಾರರು ಸಂಚಾರ ನಿಯಮಗಳನ್ನು ಉಲ್ಲಂಘಿಸದಂತೆ ಜಾಗೃತಿ ಮೂಡಿಸುವ ಕಾರ್ಯದಲ್ಲೂ ಸಿಬ್ಬಂದಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ವರದಿ: ನಟರಾಜ್​, ಮೆಟ್ರೋ ಟಿವಿ9 

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ದೇವೇಗೌಡ್ರು ನಿವಾಸಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ
ದೇವೇಗೌಡ್ರು ನಿವಾಸಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ
ಸಿಜೆಪಿ ಪ್ರತಿಭಟನೆ: ಮುಂಜಾಗ್ರತಾ ಕ್ರಮವಾಗಿ ಪೊಲೀಸರ ರಜೆ ರದ್ದು
ಸಿಜೆಪಿ ಪ್ರತಿಭಟನೆ: ಮುಂಜಾಗ್ರತಾ ಕ್ರಮವಾಗಿ ಪೊಲೀಸರ ರಜೆ ರದ್ದು
ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ 8 ಸೇತುವೆಗಳು ಜಲಾವೃತ
ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ 8 ಸೇತುವೆಗಳು ಜಲಾವೃತ
ಬಿಪಿಎಲ್ ಕಾರ್ಡುದಾರರಿಗೆ ಗುಡ್​ ನ್ಯೂಸ್ ನೀಡಿದ ಆಹಾರ ಸಚಿವ ಮುನಿಯಪ್ಪ
ಬಿಪಿಎಲ್ ಕಾರ್ಡುದಾರರಿಗೆ ಗುಡ್​ ನ್ಯೂಸ್ ನೀಡಿದ ಆಹಾರ ಸಚಿವ ಮುನಿಯಪ್ಪ
ಬಿಡಾಡಿ ವಾಹನಗಳ ಟೋಯಿಂಗ್: ರಸ್ತೆ ಬದಿಯಲ್ಲಿ ನಿಂತಿದ್ದ ವಾಹನಗಳು ಜಪ್ತಿ
ಬಿಡಾಡಿ ವಾಹನಗಳ ಟೋಯಿಂಗ್: ರಸ್ತೆ ಬದಿಯಲ್ಲಿ ನಿಂತಿದ್ದ ವಾಹನಗಳು ಜಪ್ತಿ
‘ಸ್ವಾರ್ಥ ಬಿಡಿ’: ಚಿತ್ರರಂಗದವರ ಬಗ್ಗೆ ಸಾಧುಕೋಕಿಲ ಬೇಸರ
‘ಸ್ವಾರ್ಥ ಬಿಡಿ’: ಚಿತ್ರರಂಗದವರ ಬಗ್ಗೆ ಸಾಧುಕೋಕಿಲ ಬೇಸರ
ಕಾಕ್ರೋಚ್ ಹೋರಾಟಗಾರರಿಗೆ ಮುಲ್ಲಾಗಳು ಬಿರಿಯಾನಿ ತಿನ್ನಿಸ್ತಾವಸ್ರೆ: ಸಿಂಹ
ಕಾಕ್ರೋಚ್ ಹೋರಾಟಗಾರರಿಗೆ ಮುಲ್ಲಾಗಳು ಬಿರಿಯಾನಿ ತಿನ್ನಿಸ್ತಾವಸ್ರೆ: ಸಿಂಹ
ಸಾರಿಗೆ ಸಚಿವರ ಕ್ಷೇತ್ರದಲ್ಲೇ ಗೋದಾಮಾಗಿ ಮಾರ್ಪಟ್ಟಿರುವ ಬಸ್​​ ನಿಲ್ದಾಣ!
ಸಾರಿಗೆ ಸಚಿವರ ಕ್ಷೇತ್ರದಲ್ಲೇ ಗೋದಾಮಾಗಿ ಮಾರ್ಪಟ್ಟಿರುವ ಬಸ್​​ ನಿಲ್ದಾಣ!
ಚಾಲಕನ ಜೀವಕ್ಕಿಂತ ಬಿಯರ್ ಬಾಟಲಿಯೇ ಮುಖ್ಯವಾಯಿತೇ?
ಚಾಲಕನ ಜೀವಕ್ಕಿಂತ ಬಿಯರ್ ಬಾಟಲಿಯೇ ಮುಖ್ಯವಾಯಿತೇ?
ನೀಟ್ ಪ್ರತಿಭಟನೆ, ಮೋದಿ ಹೇಳಿಕೆ ಬಗ್ಗೆ ಪ್ರಲ್ಹಾದ್ ಜೋಶಿ ಮಹತ್ವದ ಹೇಳಿಕೆ
ನೀಟ್ ಪ್ರತಿಭಟನೆ, ಮೋದಿ ಹೇಳಿಕೆ ಬಗ್ಗೆ ಪ್ರಲ್ಹಾದ್ ಜೋಶಿ ಮಹತ್ವದ ಹೇಳಿಕೆ