AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಫಿಕ್ ಫೈನ್ ಪಾವತಿಗೆ ಶೇ 50 ವಿನಾಯಿತಿ: ಎರಡು ದಿನದಲ್ಲಿ 2.24 ಕೋಟಿ ರೂ ದಂಡ ಸಂಗ್ರಹ

ರಾಜ್ಯ ಸರ್ಕಾರ ಘೋಷಿಸಿರುವ ಶೇ 50ರಷ್ಟು ಟ್ರಾಫಿಕ್ ದಂಡ ರಿಯಾಯಿತಿ ಜೂನ್ 21ರಿಂದ ಆರಂಭಗೊಂಡಿದೆ. ಕೇವಲ ಎರಡು ದಿನಗಳಲ್ಲಿ ಬೆಂಗಳೂರಿನಲ್ಲಿ 75,487 ಪ್ರಕರಣಗಳಿಂದ 2.24 ಕೋಟಿ ರೂ. ದಂಡ ಸಂಗ್ರಹವಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ. ಜುಲೈ 10ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಟ್ರಾಫಿಕ್ ಫೈನ್ ಪಾವತಿಗೆ ಶೇ 50 ವಿನಾಯಿತಿ: ಎರಡು ದಿನದಲ್ಲಿ 2.24 ಕೋಟಿ ರೂ ದಂಡ ಸಂಗ್ರಹ
ಪ್ರಾತಿನಿಧಿಕ ಚಿತ್ರImage Credit source: Getty images
ಪ್ರದೀಪ್​ ಚಿಕ್ಕಾಟಿ
| Edited By: |

Updated on: Jun 22, 2026 | 9:42 PM

Share

ಬೆಂಗಳೂರು, ಜೂನ್​​ 22: ರಾಜ್ಯ ಸರ್ಕಾರ ಇತ್ತೀಚೆಗೆ ಟ್ರಾಫಿಕ್ ಫೈನ್​ನಲ್ಲಿ (fine) ಶೇಕಡಾ 50 ರಿಯಾಯಿತಿ ಘೋಷಿಸುವ ಮೂಲಕ ವಾಹನ ಸವಾರರಿಗೆ ಗುಡ್​ ನ್ಯೂಸ್​ ನೀಡಿದೆ. ಇದೀಗ ಈ ಉಪಕ್ರಮ ನಿನ್ನೆಯಿಂದ ಅಂದರೆ ಜೂನ್​​ 21ರಿಂದ ಆರಂಭವಾಗಿದೆ. ಈ ಅವಕಾಶವನ್ನು ಸದ್ಬಳಕೆ ಮಾಡಿಕೊಂಡಿರುವ ವಾಹನ ಸವಾರರು ಆರಂಭವಾಗಿ ಎರಡು ದಿನದಲ್ಲಿ 75,487 ಪ್ರಕರಣಗಳಿಂದ ಒಟ್ಟು 2,24,70,450 ರೂ. ದಂಡ ಸಂಗ್ರಹವಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.

ಮುಖ್ಯಾಂಶಗಳು

  • ಸರ್ಕಾರದಿಂದ ಟ್ರಾಫಿಕ್ ಫೈನ್​ನಲ್ಲಿ 50% ರಿಯಾಯಿತಿ
  • ಎರಡು ದಿನದಲ್ಲಿ 2,24,70,450 ರೂ. ದಂಡ ಸಂಗ್ರಹ
  • ಜು.10ರವರೆಗೆ ಅವಕಾಶ ಕಲ್ಪಿಸಿರುವ ರಾಜ್ಯ ಸರ್ಕಾರ

ಮಾಧ್ಯಮ ಪ್ರಕಟಣೆಯಲ್ಲಿ ಏನಿದೆ?  

ಈ ಕುರಿತಾಗಿ ಬೆಂಗಳೂರು ಸಂಚಾರ ಪೊಲೀಸರು ಟ್ವೀಟ್​ ಮಾಡಿದ್ದು, ರಾಜ್ಯ ಸರ್ಕಾರದ ಆದೇಶದಂತೆ ಜೂನ್​​ 4ರಂದು ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್​ನಲ್ಲಿ ದಾಖಲಾದ ಪ್ರಕರಣಗಳಿಗೆ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಪ್ರಕರಣಗಳಲ್ಲಿ ದಂಡವನ್ನು ಪಾವತಿಸಲು ಶೇ.50% ರಷ್ಟು ರಿಯಾಯಿತಿಗೆ ಆದೇಶಿಸಲಾಗಿತ್ತು.

ಬೆಂಗಳೂರು ಸಂಚಾರ ಪೊಲೀಸ್​ ಟ್ವೀಟ್​

ಈ ಆದೇಶವು ಜೂನ್​​ 21ರಿಂದ ಜಾರಿಗೆ ಬಂದಿದೆ. ಎರಡು ದಿನದಲ್ಲಿ ಅಂದರೆ ಜೂನ್​​ 21 ಮತ್ತು 22ರಂದು ಮಾತ್ರ 75,487 ಪ್ರಕರಣಗಳಿಂದ ಒಟ್ಟು 2,24,70,450 ರೂ. ದಂಡ ಸಂಗ್ರಹವಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಚಾರ ನಿಯಮ ಉಲ್ಲಂಘಿಸಿದ ಪ್ರಕರಣಗಳಲ್ಲಿ ಬಾಕಿ ಉಳಿದಿರುವ ದಂಡ ಪಾವತಿಸಲು ಆಗದೆ ತೊಂದರೆ ಅನುಭವಿಸುತ್ತಿರುವ ವಾಹನ ಸವಾರರಿಗಾಗಿ ಸರ್ಕಾರ ಮತ್ತೊಮ್ಮೆ 50% ರಿಯಾಯಿತಿ ಅವಕಾಶ ನೀಡಿದೆ.  ಪೊಲೀಸ್ ಮತ್ತು ಸಾರಿಗೆ ಇಲಾಖೆಗಳು ಜಂಟಿಯಾಗಿ ಬಾಕಿ ಚಲನ್ ಮೊತ್ತದ ಮೇಲೆ ಈ ಬಾರಿ 50% ರಿಯಾಯಿತಿಯನ್ನು ಇತ್ತೀಚೆಗೆ ಘೋಷಿಸಿತ್ತು. ದಂಡ ಭರಿಸಲು ಪರದಾಡುತ್ತಿದ್ದ ಸವಾರರಿಗೆ ಇದು ದೊಡ್ಡ ರಿಲೀಫ್ ಸಿಕ್ಕಂತಾಗಿದೆ.

ಇದನ್ನೂ ಓದಿ: ಟ್ರಾಫಿಕ್ ಫೈನ್ ರಿಯಾಯಿತಿ: ಬೆಂಗಳೂರಿನಲ್ಲಿ 12 ವಿಶೇಷ ಕೌಂಟರ್ ತೆರೆಯಲಿದೆ ಆರ್​ಟಿಒ! ಎಲ್ಲೆಲ್ಲಿ ಎಂಬ ಮಾಹಿತಿ ಇಲ್ಲಿದೆ

ಸದ್ಯ ವಾಹನ ಸವಾರರು ರಾಜ್ಯ ಸರ್ಕಾರ ನೀಡಿರುವ ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳುತ್ತಿದ್ದು ಕೇವಲ ಎರಡೇ ದಿನದಲ್ಲಿ ಕೋಟ್ಯಂತರ ರೂ ಸಂಗ್ರಹವಾಗಿದೆ. ಜುಲೈ 10ರವರೆಗೆ 50% ರಿಯಾಯಿತಿ ದಂಡ ತುಂಬಲು ಅವಕಾಶವಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ