AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಮಾವಿನ ಮೇಳದಲ್ಲಿ 500 ಟನ್​ ಮಾವು ಮಾರಾಟ

ಬೆಂಗಳೂರಿನ ಲಾಲ್​ಬಾಗ್​ನಲ್ಲಿ ನಡೆದ ಮಾವು ಮತ್ತು ಹಲಸಿನ ಮೇಳದಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ಮೇಳಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಾರಾಂತ್ಯದಲ್ಲಿ ಹೆಚ್ಚು ಮಾರಾಟವಾಗಿದೆ. ಈ ಬಾರಿ 13 ರಿಂದ 14 ತಳಿಯ ಮಾವು ಮಾರಾಟವಾಗಿದ್ದು, ರೈತರು ಸಂತಸಗೊಂಡಿದ್ದಾರೆ.

ಬೆಂಗಳೂರು ಮಾವಿನ ಮೇಳದಲ್ಲಿ 500 ಟನ್​ ಮಾವು ಮಾರಾಟ
ಮಾವು ಸವಿಯುತ್ತಿರುವುದು
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Jun 12, 2024 | 9:55 AM

Share

ಬೆಂಗಳೂರು, ಜೂನ್​ 12: ಮೇ 23 ರಿಂದ ಜೂನ್​ 9ರವರೆಗು ಬೆಂಗಳೂರಿನ (Bengaluru) ಲಾಲ್​ಬಾಗ್​ನಲ್ಲಿ (Lalbagh) ಮಾವು (Mango) ಮತ್ತು ಹಲಸಿನ (Jackfruit) ಮೇಳ ನಡೆಯಿತು. 17 ದಿನಗಳ ಕಾಲ ನಡೆದ ಮಾವು ಮೇಳದಲ್ಲಿ ಬರೊಬ್ಬರಿ 500 ಟನ್​​ ಮಾವುಗಳು ಮಾರಾಟವಾಗಿದೆ. ರಾಜ್ಯದ 100ಕ್ಕೂ ಹೆಚ್ಚು ರೈತರು 50ಕ್ಕೂ ಹೆಚ್ಚು ಮಳಿಗೆಗಳನ್ನು ಹಾಕಿದ್ದರು ಎಂದು ಮೇಳದ ಆಯೋಜಕರಾದ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತ (KSMDMCL) ವ್ಯವಸ್ಥಾಪಕ ನಿರ್ದೇಶಕ ಸಿ.ಜಿ.ನಾಗರಾಜು ತಿಳಿಸಿದರು.

ಕಳೆದ ವರ್ಷಕ್ಕಿಂತ ಈ ಬಾರಿ ಮೇಳಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಾರಾಂತ್ಯದಲ್ಲಿ ಹೆಚ್ಚು ಮಾರಾಟವಾಗಿದೆ. ಈ ಬಾರಿ 13 ರಿಂದ 14 ತಳಿಯ ಮಾವು ಮಾರಾಟವಾಗಿದ್ದು, ರೈತರು ಸಂತಸಗೊಂಡಿದ್ದಾರೆ. ಭೌಗೋಳಿಕ ಸೂಚಕ (ಜಿಐ) ಟ್ಯಾಗ್ ಕೂಡ ಮೇಳದಲ್ಲಿ ಇತ್ತು ಎಂದು ಹೇಳಿದರು.

ಕರಿ ಇಶಾದ್ ಮಾವಿನ ತಳಿ ಕೂಡ ಈ ವರ್ಷ ಮೇಳದಲ್ಲಿ ಲಭ್ಯವಿತ್ತು. ಕರಿ ಇಶಾದ್ ಮಾವನ್ನು ಜನರು ಹೆಚ್ಚಾಗಿ ಕೊಂಡುಕೊಂಡರು. ಕರಿ ಇಶಾದ್​ ತಳಿ ಹೆಚ್ಚು ಮಾರಾಟವಾಗಿದ್ದರಿಂದ ರೈತರು ಹೆಚ್ಚು ಸಂತಸ ಪಟ್ಟರು. ಈ ಹಿಂದೆ ಈ ತಳಿಗೆ ಹೆಚ್ಚಿನ ಬೇಡಿಕೆ ಇರಲಿಲ್ಲ. ಆದರೆ ಈ ಬಾರಿ ಕರಿ ಇಶಾದ್​ ತಳಿಗೆ ಹೆಚ್ಚು ಬೇಡಿಕೆ ಬಂದಿದೆ. ಮೇಳದ ವೇಳೆ ರೈತರು ಮೂರು ಮೂರು ಬಾರಿ ತಮ್ಮ ದಾಸ್ತಾನು ತರಸಿದರು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಪಾರ್ಕ್‌ಗಳ ಸಮಯ ವಿಸ್ತರಣೆ, ಇಲ್ಲಿದೆ ಹೊಸ ಟೈಮಿಂಗ್ಸ್

ಆನ್‌ಲೈನ್ ಮಾರಾಟ ವೇದಿಕೆ ಕರ್ಸಿರಿ ಎಲ್ಲೂ ಅಧಿಕ ಪ್ರಮಾಣದಲ್ಲಿ ಮಾವು ಮಾರಾಟವಾಗಿದೆ. ಕರ್ಸಿರೊ ಮೂಲಕ ಗ್ರಾಹಕರು ಉತ್ತಮ ಗುಣಮಟ್ಟದ ಮಾವುಗಳನ್ನು ಖರೀದಿಸಿದರು. ಇಂಡಿಯಾ ಪೋಸ್ಟ್​ ಮೂಲಕ ಮಾವುಗಳು ರೈತರಿಂದ ನೇರವಾಗಿ ಗ್ರಾಹಕರ ಕೈ ಸೇರಿದವು. ಆನ್‌ಲೈನ್ ವೇದಿಕೆ ಮುಖಾಂತರ ಕನಿಷ್ಠ 27 ರೈತರು ಕರಿ ಇಶಾದ್ ಸೇರಿದಂತೆ 13 ತಳಿಯ ಮಾವಿನ ಹಣ್ಣುಗಳನ್ನು ಮಾರಾಟ ಮಾಡಿದ್ದಾರೆ ಎಂದರು.

ಆನ್​ಲೈನ್​ ಪೋರ್ಟಲ್‌ನಲ್ಲಿ 4,514 ಬಾಕ್ಸ್‌ಗಳ (13.5 ಟನ್) ಮಾವಿನಹಣ್ಣುಗಳನ್ನು ಮಾರಾಟ ಮಾಡಿದ್ದೇವೆ ಮತ್ತು ಕಾರಿ ಇಶಾದ್‌ಗಾಗಿ ನಾವು 60 – 70 ಆರ್ಡರ್‌ಗಳನ್ನು ಸ್ವೀಕರಿಸಿದ್ದೇವೆ. ನಮ್ಮ ಪ್ಲಾಟ್‌ಫಾರ್ಮ್‌ಗಳ ಹೊರತಾಗಿ, ರೈತರು ವಿವಿಧ 14 ಪೋರ್ಟಲ್‌ಗಳ ಮೂಲಕವೂ ಮಾವು ಮಾರಾಟ ಮಾಡಿದ್ದಾರೆ. ಈ ಪೋರ್ಟಲ್​ಗಳ ಮೂಲಕ ರೈತರು ನೇರವಾಗಿ ಇಂಡಿಯಾ ಪೋಸ್ಟ್ ಮೂಲಕ ಗ್ರಾಹಕರಿಗೆ ಮಾವಿನಹಣ್ಣುಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ