AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಮಾವಿನ ಮೇಳದಲ್ಲಿ 500 ಟನ್​ ಮಾವು ಮಾರಾಟ

ಬೆಂಗಳೂರಿನ ಲಾಲ್​ಬಾಗ್​ನಲ್ಲಿ ನಡೆದ ಮಾವು ಮತ್ತು ಹಲಸಿನ ಮೇಳದಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ಮೇಳಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಾರಾಂತ್ಯದಲ್ಲಿ ಹೆಚ್ಚು ಮಾರಾಟವಾಗಿದೆ. ಈ ಬಾರಿ 13 ರಿಂದ 14 ತಳಿಯ ಮಾವು ಮಾರಾಟವಾಗಿದ್ದು, ರೈತರು ಸಂತಸಗೊಂಡಿದ್ದಾರೆ.

ಬೆಂಗಳೂರು ಮಾವಿನ ಮೇಳದಲ್ಲಿ 500 ಟನ್​ ಮಾವು ಮಾರಾಟ
ಮಾವು ಸವಿಯುತ್ತಿರುವುದು
ವಿವೇಕ ಬಿರಾದಾರ
|

Updated on: Jun 12, 2024 | 9:55 AM

Share

ಬೆಂಗಳೂರು, ಜೂನ್​ 12: ಮೇ 23 ರಿಂದ ಜೂನ್​ 9ರವರೆಗು ಬೆಂಗಳೂರಿನ (Bengaluru) ಲಾಲ್​ಬಾಗ್​ನಲ್ಲಿ (Lalbagh) ಮಾವು (Mango) ಮತ್ತು ಹಲಸಿನ (Jackfruit) ಮೇಳ ನಡೆಯಿತು. 17 ದಿನಗಳ ಕಾಲ ನಡೆದ ಮಾವು ಮೇಳದಲ್ಲಿ ಬರೊಬ್ಬರಿ 500 ಟನ್​​ ಮಾವುಗಳು ಮಾರಾಟವಾಗಿದೆ. ರಾಜ್ಯದ 100ಕ್ಕೂ ಹೆಚ್ಚು ರೈತರು 50ಕ್ಕೂ ಹೆಚ್ಚು ಮಳಿಗೆಗಳನ್ನು ಹಾಕಿದ್ದರು ಎಂದು ಮೇಳದ ಆಯೋಜಕರಾದ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತ (KSMDMCL) ವ್ಯವಸ್ಥಾಪಕ ನಿರ್ದೇಶಕ ಸಿ.ಜಿ.ನಾಗರಾಜು ತಿಳಿಸಿದರು.

ಕಳೆದ ವರ್ಷಕ್ಕಿಂತ ಈ ಬಾರಿ ಮೇಳಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಾರಾಂತ್ಯದಲ್ಲಿ ಹೆಚ್ಚು ಮಾರಾಟವಾಗಿದೆ. ಈ ಬಾರಿ 13 ರಿಂದ 14 ತಳಿಯ ಮಾವು ಮಾರಾಟವಾಗಿದ್ದು, ರೈತರು ಸಂತಸಗೊಂಡಿದ್ದಾರೆ. ಭೌಗೋಳಿಕ ಸೂಚಕ (ಜಿಐ) ಟ್ಯಾಗ್ ಕೂಡ ಮೇಳದಲ್ಲಿ ಇತ್ತು ಎಂದು ಹೇಳಿದರು.

ಕರಿ ಇಶಾದ್ ಮಾವಿನ ತಳಿ ಕೂಡ ಈ ವರ್ಷ ಮೇಳದಲ್ಲಿ ಲಭ್ಯವಿತ್ತು. ಕರಿ ಇಶಾದ್ ಮಾವನ್ನು ಜನರು ಹೆಚ್ಚಾಗಿ ಕೊಂಡುಕೊಂಡರು. ಕರಿ ಇಶಾದ್​ ತಳಿ ಹೆಚ್ಚು ಮಾರಾಟವಾಗಿದ್ದರಿಂದ ರೈತರು ಹೆಚ್ಚು ಸಂತಸ ಪಟ್ಟರು. ಈ ಹಿಂದೆ ಈ ತಳಿಗೆ ಹೆಚ್ಚಿನ ಬೇಡಿಕೆ ಇರಲಿಲ್ಲ. ಆದರೆ ಈ ಬಾರಿ ಕರಿ ಇಶಾದ್​ ತಳಿಗೆ ಹೆಚ್ಚು ಬೇಡಿಕೆ ಬಂದಿದೆ. ಮೇಳದ ವೇಳೆ ರೈತರು ಮೂರು ಮೂರು ಬಾರಿ ತಮ್ಮ ದಾಸ್ತಾನು ತರಸಿದರು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಪಾರ್ಕ್‌ಗಳ ಸಮಯ ವಿಸ್ತರಣೆ, ಇಲ್ಲಿದೆ ಹೊಸ ಟೈಮಿಂಗ್ಸ್

ಆನ್‌ಲೈನ್ ಮಾರಾಟ ವೇದಿಕೆ ಕರ್ಸಿರಿ ಎಲ್ಲೂ ಅಧಿಕ ಪ್ರಮಾಣದಲ್ಲಿ ಮಾವು ಮಾರಾಟವಾಗಿದೆ. ಕರ್ಸಿರೊ ಮೂಲಕ ಗ್ರಾಹಕರು ಉತ್ತಮ ಗುಣಮಟ್ಟದ ಮಾವುಗಳನ್ನು ಖರೀದಿಸಿದರು. ಇಂಡಿಯಾ ಪೋಸ್ಟ್​ ಮೂಲಕ ಮಾವುಗಳು ರೈತರಿಂದ ನೇರವಾಗಿ ಗ್ರಾಹಕರ ಕೈ ಸೇರಿದವು. ಆನ್‌ಲೈನ್ ವೇದಿಕೆ ಮುಖಾಂತರ ಕನಿಷ್ಠ 27 ರೈತರು ಕರಿ ಇಶಾದ್ ಸೇರಿದಂತೆ 13 ತಳಿಯ ಮಾವಿನ ಹಣ್ಣುಗಳನ್ನು ಮಾರಾಟ ಮಾಡಿದ್ದಾರೆ ಎಂದರು.

ಆನ್​ಲೈನ್​ ಪೋರ್ಟಲ್‌ನಲ್ಲಿ 4,514 ಬಾಕ್ಸ್‌ಗಳ (13.5 ಟನ್) ಮಾವಿನಹಣ್ಣುಗಳನ್ನು ಮಾರಾಟ ಮಾಡಿದ್ದೇವೆ ಮತ್ತು ಕಾರಿ ಇಶಾದ್‌ಗಾಗಿ ನಾವು 60 – 70 ಆರ್ಡರ್‌ಗಳನ್ನು ಸ್ವೀಕರಿಸಿದ್ದೇವೆ. ನಮ್ಮ ಪ್ಲಾಟ್‌ಫಾರ್ಮ್‌ಗಳ ಹೊರತಾಗಿ, ರೈತರು ವಿವಿಧ 14 ಪೋರ್ಟಲ್‌ಗಳ ಮೂಲಕವೂ ಮಾವು ಮಾರಾಟ ಮಾಡಿದ್ದಾರೆ. ಈ ಪೋರ್ಟಲ್​ಗಳ ಮೂಲಕ ರೈತರು ನೇರವಾಗಿ ಇಂಡಿಯಾ ಪೋಸ್ಟ್ ಮೂಲಕ ಗ್ರಾಹಕರಿಗೆ ಮಾವಿನಹಣ್ಣುಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ