AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ, ಪ್ರವಾಹ ವಿಪತ್ತು ನೈಸರ್ಗಿಕ ವಿಕೋಪ ನಿರ್ವಹಣೆಗೆ 6 ಸಚಿವರ ಸಮಿತಿ ರಚನೆ: ಸರ್ಕಾರ ಆದೇಶ

ರಾಜ್ಯದಲ್ಲಿನ ಬರ, ಪ್ರವಾಹ ವಿಪತ್ತು ನೈಸರ್ಗಿಕ ವಿಕೋಪ ನಿರ್ವಹಣೆಗೆ ಸಚಿವ ಕೃಷ್ಣ ಭೈರೇಗೌಡ ಅಧ್ಯಕ್ಷತೆಯಲ್ಲಿ 6 ಸಚಿವರ ಸಂಪುಟ ಉಪಸಮಿತಿಯನ್ನು ರಾಜ್ಯ ಸರ್ಕಾರ ರಚನೆ ಮಾಡಿದೆ. ವಿಪತ್ತು ನಿರ್ವಹಣೆ, ಪರಿಸ್ಥಿತಿ ಪರಾಮರ್ಶಿಸಿ ಅಗತ್ಯ ಸೂಚನೆ ನೀಡಲು ಸಚಿವ ಸಂಪುಟ ಉಪ ಸಮಿತಿಗೆ ಜವಾಬ್ದಾರಿ ನೀಡಲಾಗಿದೆ. 

ಬರ, ಪ್ರವಾಹ ವಿಪತ್ತು ನೈಸರ್ಗಿಕ ವಿಕೋಪ ನಿರ್ವಹಣೆಗೆ 6 ಸಚಿವರ ಸಮಿತಿ ರಚನೆ: ಸರ್ಕಾರ ಆದೇಶ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on:Jun 22, 2023 | 3:08 PM

Share

ಬೆಂಗಳೂರು: ರಾಜ್ಯದಲ್ಲಿನ ಬರ, ಪ್ರವಾಹ ವಿಪತ್ತು ನೈಸರ್ಗಿಕ ವಿಕೋಪ (natural calamities) ನಿರ್ವಹಣೆಗೆ ಸಚಿವ ಕೃಷ್ಣ ಭೈರೇಗೌಡ ಅಧ್ಯಕ್ಷತೆಯಲ್ಲಿ 6 ಸಚಿವರ ಸಂಪುಟ ಉಪಸಮಿತಿಯನ್ನು ರಾಜ್ಯ ಸರ್ಕಾರ ರಚನೆ ಮಾಡಿದೆ. ಸತೀಶ್ ಜಾರಕಿಹೊಳಿ, ಪ್ರಿಯಾಂಕ್​​ ಖರ್ಗೆ, ಎನ್​​.ಚಲುವರಾಯಸ್ವಾಮಿ, S.S.ಮಲ್ಲಿಕಾರ್ಜುನ, ಕೆ.ಎನ್.ರಾಜಣ್ಣ ಸಮಿತಿಯ ಸದಸ್ಯರಾಗಿ ನೇಮಕ ಮಾಡಲಾಗಿದೆ. ವಿಪತ್ತು ನಿರ್ವಹಣೆ, ಪರಿಸ್ಥಿತಿ ಪರಾಮರ್ಶಿಸಿ ಅಗತ್ಯ ಸೂಚನೆ ನೀಡಲು ನೀತಿ ನಿರೂಪಣೆ ನೀಡಲು ಸಚಿವ ಸಂಪುಟ ಉಪ ಸಮಿತಿಗೆ ಜವಾಬ್ದಾರಿ ನೀಡಲಾಗಿದೆ.

ರಾಜ್ಯದಲ್ಲಿ ಮುಂಗಾರುಪೂರ್ವ ಮಳೆ ಆರಂಭವಾಗಿದೆ. ಕೆಲವೆಡೆ ಪ್ರಾಕೃತಿಕ ವಿಕೋಪಗಳಿಂದಾಗಿ ಸಾವು ಸಂಭವಿಸಿತ್ತಿವೆ. ಈ ಮಧ್ಯೆ, ಪ್ರಾಕೃತಿಕ ವಿಕೋಪ ತಡೆಗೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜತೆ ಇತ್ತೀಚೆಗೆ ವಿಡಿಯೋ ಕಾನ್ಫರೆನ್ಸ್ ಮಾಡಿದ್ದರು.

ಇದನ್ನೂ ಓದಿ: ಕೊನೆಗೂ ವಿರೋಧ ಪಕ್ಷ ನಾಯಕನ ಆಯ್ಕೆಗೆ ಕೂಡಿಬಂತು ಮುಹೂರ್ತ, ಬಿಜೆಪಿಯಲ್ಲಿ ಯಾರಾಗ್ತಾರೆ ಪ್ರತಿಪಕ್ಷದ ನಾಯಕ?

ಸಿಡಿಲು, ಆಳಿಕಲ್ಲು ಮಳೆಯಿಂದಾಗಿ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅನಾಹುತಗಳಾಗಿವೆ. ಇಂತಹ ಅನಾಹುತಗಳನ್ನು ತಡೆಗಟ್ಟಲು ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು. ಮಳೆ ಬಂದು ಮರಗಳು ಬಿದ್ದುಹೋದರೆ, ಕೂಡಲೇ ತೆರವು ಗೊಳಿಸಬೇಕು ಎಂದು ಹೇಳಿದ್ದರು.

ಯಾವುದೇ ರೀತಿಯ ಅನಾಹುತ ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಮುನ್ನೆಚ್ಚರಿಕೆ ತೆಗೆದುಕೊಂಡರೆ ಅನಾಹುತಗಳನ್ನು ತಪ್ಪಿಸಲು ಸಾಧ್ಯವಾಗುತ್ತದೆ. ಕರ್ತವ್ಯ ಲೋಪವಾಗಂದತೆ ಸೂಚನೆ ನೀಡಿದ್ದರು.

ಇದನ್ನೂ ಓದಿ: ಕೇಂದ್ರ ಗೃಹ ಅಮಿತ್​ ಶಾ ಭೇಟಿಯಾಗಿ ಒಂದು ಪ್ರಮುಖ ಬೇಡಿಕೆ ಇಟ್ಟ ಸಿದ್ದರಾಮಯ್ಯ: ಏನದು?

ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಸಲಕರಣೆಗಳನ್ನು ಸಿದ್ಧಪಡಿಸಿಕೊಳ್ಳಬೇಕು, ಪ್ರವಾಹ ಬರುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ. ಬೆಳೆಹಾನಿ ಮಾಹಿತಿ ಇರಬೇಕು. ಅನುದಾನ ಅಗತ್ಯವಿದ್ದಲ್ಲಿ ಮನವಿ ಸಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಈ ಹಿಂದೆ ತಿಳಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:48 pm, Thu, 22 June 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ