AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಇನ್ನೂ 6 ಟಿಎಂಸಿ ಕಾವೇರಿ ನೀರು ತರ್ತೇವೆ: ಡಿಸಿಎಂ ಡಿಕೆ ಶಿವಕುಮಾರ್​

ಬೆಂಗಳೂರಿನ ಉದ್ಯಮಗಳಿಗೆ ನೀರಿನ ಅಭಾವವನ್ನು ನಿವಾರಿಸಲು ಕಾವೇರಿ ನದಿಯಿಂದ 6 ಟಿಎಂಸಿ ನೀರನ್ನು ತರಲು ಕರ್ನಾಟಕ ಸರ್ಕಾರ ಯೋಜನೆ ರೂಪಿಸಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಘೋಷಿಸಿದ್ದಾರೆ. ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಾತನಾಡಿದ ಅವರು, ಉದ್ಯಮಗಳಿಗೆ ನೀರು, ವಿದ್ಯುತ್ ಮತ್ತು ಭೂಮಿಯನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರಿಗೆ ಇನ್ನೂ 6 ಟಿಎಂಸಿ ಕಾವೇರಿ ನೀರು ತರ್ತೇವೆ: ಡಿಸಿಎಂ ಡಿಕೆ ಶಿವಕುಮಾರ್​
ಬೆಂಗಳೂರಿಗೆ ಇನ್ನೂ 6 ಟಿಎಂಸಿ ಕಾವೇರಿ ನೀರು ತರ್ತೇವೆ: ಡಿಸಿಎಂ ಡಿಕೆ ಶಿವಕುಮಾರ್​
Anil Kalkere
| Edited By: |

Updated on: Feb 13, 2025 | 9:54 PM

Share

ಬೆಂಗಳೂರು, ಫೆಬ್ರವರಿ 13: ಬೆಂಗಳೂರು ನಗರದಲ್ಲಿ ಉದ್ಯಮಗಳಿಗೆ ನೀರಿನ ಅಗತ್ಯವಿದೆ. ಹಾಗಾಗಿ ಕಾವೇರಿ ನದಿಯಿಂದ ಇನ್ನೂ 6 ಟಿಎಂಸಿ ನೀರು ತರುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್​ (DK Shivakumar) ಹೇಳಿದ್ದಾರೆ. ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಾತನಾಡಿದ ಅವರು, ಜಲಸಂಪನ್ಮೂಲ ಇಲಾಖೆ ನನ್ನ ಬಳಿಯೇ ಇದೆ. ಯಾವ ಬೆಲೆ ತೆತ್ತಾದರೂ 6 ಟಿಎಂಸಿ ನೀರು ತರಲಾಗುವುದು ಎಂದು ಹೇಳಿದ್ದಾರೆ.

ನೀರಿನ ಬಗ್ಗೆ ಯೋಚನೆ ಮಾಡಬೇಡಿ. ಎತ್ತಿನಹೊಳೆ ಮೂಲಕ ನೀರು ಕೊಡುವ ಚಿಂತನೆ ನಡೆಸಿದೆ. ನೀರು, ವಿದ್ಯುತ್, ಜಾಗ ಕೊಡಲು ನಮ್ಮ ಸರ್ಕಾರ ಸಿದ್ಧ. 19 ದೇಶಗಳಿಂದ ಬಂದು ಹೂಡಿಕೆಗೆ ಒಪ್ಪಂದ ಮಾಡಲಾಗಿದೆ. ನಮ್ಮಲ್ಲಿನ ಸಮುದ್ರಗಳು ಕೂಡ ಗೋವಾಗಿಂತ ಕಡಿಮೆ ಇಲ್ಲ ಎಂದಿದ್ದಾರೆ.

ಇದನ್ನೂ ಓದಿ: ಇನ್ವೆಸ್ಟ್ ಕರ್ನಾಟಕ: ವೋಲ್ವೋ ಕಂಪನಿಯಿಂದ 1,400 ಕೋಟಿ ರೂ ಹೂಡಿಕೆ, ಸಿಎಂ ಸಮ್ಮುಖದಲ್ಲಿ ಒಡಂಬಡಿಕೆಗೆ ಸಹಿ

ಜತೆಗೆ ಇಲ್ಲಿನ ಟ್ರಾಫಿಕ್ ಸಮಸ್ಯೆ ಸಹ ಬಗೆಹರಿಸಲಾಗುವುದು. ಉದ್ಯಮಿಗಳು ಕೂಡ ಸಕಾರಾತ್ಮಕವಾಗಿ ಸ್ಪಂದಿಸಬೇಕು. ಬೆಂಗಳೂರಿನಿಂದ ಆಚೆಗೂ ಯೋಜನೆಗಳಿಗೆ ಸ್ಪಂದಿಸಬೇಕು. ಈಗ ರಸ್ತೆ ಅಗಲೀಕರಣ ಸಾಧ್ಯವಿಲ್ಲ. ನಗರದಲ್ಲಿ ಟ್ರಾಫಿಕ್ ಕಂಟ್ರೋಲ್ ಬಗ್ಗೆ ಚಿಂತನೆ ನಡೆಸಿದ್ದೇವೆ. ಡಬಲ್ ಡೆಕ್ಕರ್ ರಸ್ತೆ ಮಾಡಿದ್ದೇವೆ, ಟನಲ್ ಮಾಡುವ ಯೋಚನೆ ಇದೆ. ನಿಮ್ಮ ಬಗ್ಗೆ ಸರ್ಕಾರ ಬಹಳ ಚಿಂತನೆ ಮಾಡಿದೆ ಎಂದರು.

ಸರ್ಕಾರದ ಪರವಾಗಿ ಎಲ್ಲರಿಗೂ ಧನ್ಯವಾದ ಹೇಳಿದ ಡಿಕೆ ಶಿವಕುಮಾರ್

ಕರ್ನಾಟಕ ಸರ್ಕಾರದ ಪರವಾಗಿ ಎಲ್ಲರಿಗೂ ಧನ್ಯವಾದ ಹೇಳಿದ ಡಿಕೆ ಶಿವಕುಮಾರ್​, ನೀವೇ ನಮ್ಮ ಆಸ್ತಿ, ನೀವು ಸ್ಟ್ರಾಂಗ್ ಇದ್ದರೆ ನಾವು ಸ್ಟ್ರಾಂಗ್. ನೀವು ವೀಕ್ ಆದರೆ, ನಾವು ವೀಕ್ ಆಗ್ತೀವಿ ಎಂದಿದ್ದಾರೆ. ಸಣ್ಣ ಉದ್ಯಮಗಳ ಮೂಲಕ ಜನರಿಗೆ ಉದ್ಯೋಗ ನೀಡಿದ್ದೀರಿ. ಕರ್ನಾಟಕಕ್ಕೆ ದೊಡ್ಡ ಇತಿಹಾಸವಿದೆ. ನಮಗೆ ಕಾರ್ಮಿಕರು ಬೇಕು, ಕಾರ್ಮಿಕರಿಗೆ ಶಕ್ತಿ ತುಂಬಬೇಕು. ಸರ್ಕಾರ ಯಾವಾಗಲೂ ನಿಮ್ಮ ಬಗ್ಗೆ ಆಲೋಚಿಸಿದಾಗ ಮಾತ್ರ, ನೀವು ನಮ್ಮ ಸಹಾಯಕ್ಕೆ ನಿಲ್ಲುತ್ತೀರಿ. ನಿಮಗೆ ಕಡಿಮೆ ಬಡ್ಡಿಗೆ ಹಣ, ಜಮೀನು ಕೊಟ್ಟರೆ ಕೆಲಸ ಮಾಡುತ್ತೀರಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: Invest Karnataka: ಜಿಂದಾಲ್ ಗ್ರೂಪ್​ಗೆ ‘ದಶಕದ ಹೂಡಿಕೆದಾರ’ ಪ್ರಶಸ್ತಿ ಕೊಟ್ಟ ಕರ್ನಾಟಕ ಸರ್ಕಾರ

ಇಡೀ ಏಷ್ಯಗೆ 1904 ಶಿವನಸಮುದ್ರದಿಂದ ವಿದ್ಯುತ್ ಸಿಕ್ತು. ನಂತರ ಎಲ್ಲಾ ಕಡೆ ವಿದ್ಯುತ್ ಬಂತು. ಅಂದಿನ ಕಾಲದಲ್ಲೇ HAL, IT, BHEL ಎಲ್ಲವೂ ನೆಹರು ಅವರ ಕಾಲದಲ್ಲೇ ಬಂತು. ಕೈಗಾರಿಕೋದ್ಯಮಿಗಳೇ ನಮ್ಮ‌ ಆಸ್ತಿ. 100 ಕೋಟಿ ರೂ. ಬರುವವರೆಗೆ ಒಂದು ಲೆಕ್ಕ. ಆಮೇಲೆ ಮತ್ತೊಂದು‌ ಲೆಕ್ಕಾ, ಜಸ್ಟ್ ಸೊನ್ನೆ ಸೇರಿಸುವುದು ಅಷ್ಟೇ. ಸರ್ಕಾರ ನಿಮ್ಮ ಬಗ್ಗೆ ಹೆಚ್ಚು ಆಲೋಚನೆ ಮಾಡಿದಾಗ ಮಾತ್ರ ಬದಲಾವಣೆ ಸಾಧ್ಯ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ