ಬೆಂಗಳೂರಿಗೆ ಇನ್ನೂ 6 ಟಿಎಂಸಿ ಕಾವೇರಿ ನೀರು ತರ್ತೇವೆ: ಡಿಸಿಎಂ ಡಿಕೆ ಶಿವಕುಮಾರ್​

| Updated By: ಗಂಗಾಧರ​ ಬ. ಸಾಬೋಜಿ

Updated on: Feb 13, 2025 | 9:54 PM

ಬೆಂಗಳೂರಿನ ಉದ್ಯಮಗಳಿಗೆ ನೀರಿನ ಅಭಾವವನ್ನು ನಿವಾರಿಸಲು ಕಾವೇರಿ ನದಿಯಿಂದ 6 ಟಿಎಂಸಿ ನೀರನ್ನು ತರಲು ಕರ್ನಾಟಕ ಸರ್ಕಾರ ಯೋಜನೆ ರೂಪಿಸಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಘೋಷಿಸಿದ್ದಾರೆ. ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಾತನಾಡಿದ ಅವರು, ಉದ್ಯಮಗಳಿಗೆ ನೀರು, ವಿದ್ಯುತ್ ಮತ್ತು ಭೂಮಿಯನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರಿಗೆ ಇನ್ನೂ 6 ಟಿಎಂಸಿ ಕಾವೇರಿ ನೀರು ತರ್ತೇವೆ: ಡಿಸಿಎಂ ಡಿಕೆ ಶಿವಕುಮಾರ್​
ಬೆಂಗಳೂರಿಗೆ ಇನ್ನೂ 6 ಟಿಎಂಸಿ ಕಾವೇರಿ ನೀರು ತರ್ತೇವೆ: ಡಿಸಿಎಂ ಡಿಕೆ ಶಿವಕುಮಾರ್​
Follow us on

ಬೆಂಗಳೂರು, ಫೆಬ್ರವರಿ 13: ಬೆಂಗಳೂರು ನಗರದಲ್ಲಿ ಉದ್ಯಮಗಳಿಗೆ ನೀರಿನ ಅಗತ್ಯವಿದೆ. ಹಾಗಾಗಿ ಕಾವೇರಿ ನದಿಯಿಂದ ಇನ್ನೂ 6 ಟಿಎಂಸಿ ನೀರು ತರುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್​ (DK Shivakumar) ಹೇಳಿದ್ದಾರೆ. ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಾತನಾಡಿದ ಅವರು, ಜಲಸಂಪನ್ಮೂಲ ಇಲಾಖೆ ನನ್ನ ಬಳಿಯೇ ಇದೆ. ಯಾವ ಬೆಲೆ ತೆತ್ತಾದರೂ 6 ಟಿಎಂಸಿ ನೀರು ತರಲಾಗುವುದು ಎಂದು ಹೇಳಿದ್ದಾರೆ.

ನೀರಿನ ಬಗ್ಗೆ ಯೋಚನೆ ಮಾಡಬೇಡಿ. ಎತ್ತಿನಹೊಳೆ ಮೂಲಕ ನೀರು ಕೊಡುವ ಚಿಂತನೆ ನಡೆಸಿದೆ. ನೀರು, ವಿದ್ಯುತ್, ಜಾಗ ಕೊಡಲು ನಮ್ಮ ಸರ್ಕಾರ ಸಿದ್ಧ. 19 ದೇಶಗಳಿಂದ ಬಂದು ಹೂಡಿಕೆಗೆ ಒಪ್ಪಂದ ಮಾಡಲಾಗಿದೆ. ನಮ್ಮಲ್ಲಿನ ಸಮುದ್ರಗಳು ಕೂಡ ಗೋವಾಗಿಂತ ಕಡಿಮೆ ಇಲ್ಲ ಎಂದಿದ್ದಾರೆ.

ಇದನ್ನೂ ಓದಿ: ಇನ್ವೆಸ್ಟ್ ಕರ್ನಾಟಕ: ವೋಲ್ವೋ ಕಂಪನಿಯಿಂದ 1,400 ಕೋಟಿ ರೂ ಹೂಡಿಕೆ, ಸಿಎಂ ಸಮ್ಮುಖದಲ್ಲಿ ಒಡಂಬಡಿಕೆಗೆ ಸಹಿ

ಜತೆಗೆ ಇಲ್ಲಿನ ಟ್ರಾಫಿಕ್ ಸಮಸ್ಯೆ ಸಹ ಬಗೆಹರಿಸಲಾಗುವುದು. ಉದ್ಯಮಿಗಳು ಕೂಡ ಸಕಾರಾತ್ಮಕವಾಗಿ ಸ್ಪಂದಿಸಬೇಕು. ಬೆಂಗಳೂರಿನಿಂದ ಆಚೆಗೂ ಯೋಜನೆಗಳಿಗೆ ಸ್ಪಂದಿಸಬೇಕು. ಈಗ ರಸ್ತೆ ಅಗಲೀಕರಣ ಸಾಧ್ಯವಿಲ್ಲ. ನಗರದಲ್ಲಿ ಟ್ರಾಫಿಕ್ ಕಂಟ್ರೋಲ್ ಬಗ್ಗೆ ಚಿಂತನೆ ನಡೆಸಿದ್ದೇವೆ. ಡಬಲ್ ಡೆಕ್ಕರ್ ರಸ್ತೆ ಮಾಡಿದ್ದೇವೆ, ಟನಲ್ ಮಾಡುವ ಯೋಚನೆ ಇದೆ. ನಿಮ್ಮ ಬಗ್ಗೆ ಸರ್ಕಾರ ಬಹಳ ಚಿಂತನೆ ಮಾಡಿದೆ ಎಂದರು.

ಸರ್ಕಾರದ ಪರವಾಗಿ ಎಲ್ಲರಿಗೂ ಧನ್ಯವಾದ ಹೇಳಿದ ಡಿಕೆ ಶಿವಕುಮಾರ್

ಕರ್ನಾಟಕ ಸರ್ಕಾರದ ಪರವಾಗಿ ಎಲ್ಲರಿಗೂ ಧನ್ಯವಾದ ಹೇಳಿದ ಡಿಕೆ ಶಿವಕುಮಾರ್​, ನೀವೇ ನಮ್ಮ ಆಸ್ತಿ, ನೀವು ಸ್ಟ್ರಾಂಗ್ ಇದ್ದರೆ ನಾವು ಸ್ಟ್ರಾಂಗ್. ನೀವು ವೀಕ್ ಆದರೆ, ನಾವು ವೀಕ್ ಆಗ್ತೀವಿ ಎಂದಿದ್ದಾರೆ. ಸಣ್ಣ ಉದ್ಯಮಗಳ ಮೂಲಕ ಜನರಿಗೆ ಉದ್ಯೋಗ ನೀಡಿದ್ದೀರಿ. ಕರ್ನಾಟಕಕ್ಕೆ ದೊಡ್ಡ ಇತಿಹಾಸವಿದೆ. ನಮಗೆ ಕಾರ್ಮಿಕರು ಬೇಕು, ಕಾರ್ಮಿಕರಿಗೆ ಶಕ್ತಿ ತುಂಬಬೇಕು. ಸರ್ಕಾರ ಯಾವಾಗಲೂ ನಿಮ್ಮ ಬಗ್ಗೆ ಆಲೋಚಿಸಿದಾಗ ಮಾತ್ರ, ನೀವು ನಮ್ಮ ಸಹಾಯಕ್ಕೆ ನಿಲ್ಲುತ್ತೀರಿ. ನಿಮಗೆ ಕಡಿಮೆ ಬಡ್ಡಿಗೆ ಹಣ, ಜಮೀನು ಕೊಟ್ಟರೆ ಕೆಲಸ ಮಾಡುತ್ತೀರಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: Invest Karnataka: ಜಿಂದಾಲ್ ಗ್ರೂಪ್​ಗೆ ‘ದಶಕದ ಹೂಡಿಕೆದಾರ’ ಪ್ರಶಸ್ತಿ ಕೊಟ್ಟ ಕರ್ನಾಟಕ ಸರ್ಕಾರ

ಇಡೀ ಏಷ್ಯಗೆ 1904 ಶಿವನಸಮುದ್ರದಿಂದ ವಿದ್ಯುತ್ ಸಿಕ್ತು. ನಂತರ ಎಲ್ಲಾ ಕಡೆ ವಿದ್ಯುತ್ ಬಂತು. ಅಂದಿನ ಕಾಲದಲ್ಲೇ HAL, IT, BHEL ಎಲ್ಲವೂ ನೆಹರು ಅವರ ಕಾಲದಲ್ಲೇ ಬಂತು. ಕೈಗಾರಿಕೋದ್ಯಮಿಗಳೇ ನಮ್ಮ‌ ಆಸ್ತಿ. 100 ಕೋಟಿ ರೂ. ಬರುವವರೆಗೆ ಒಂದು ಲೆಕ್ಕ. ಆಮೇಲೆ ಮತ್ತೊಂದು‌ ಲೆಕ್ಕಾ, ಜಸ್ಟ್ ಸೊನ್ನೆ ಸೇರಿಸುವುದು ಅಷ್ಟೇ. ಸರ್ಕಾರ ನಿಮ್ಮ ಬಗ್ಗೆ ಹೆಚ್ಚು ಆಲೋಚನೆ ಮಾಡಿದಾಗ ಮಾತ್ರ ಬದಲಾವಣೆ ಸಾಧ್ಯ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.