AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

7.11 ಕೋಟಿ ದರೋಡೆ ಹಣ ಕ್ಯಾಸಿನೊಗೆ ಸುರಿಯಲು ಪ್ಲ್ಯಾನ್​! ಚಾರ್ಜ್​​ಶೀಟ್​​ನಲ್ಲಿ ಸ್ಫೋಟಕ ಮಾಹಿತಿ ರಿವೀಲ್​​

ಬೆಂಗಳೂರಿನಲ್ಲಿ ನಡೆದ 7.11 ಕೋಟಿ ರೂ. ದರೋಡೆ ಪ್ರಕರಣದಲ್ಲಿ, ಸಿದ್ಧಾಪುರ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ದರೋಡೆಕೋರರು ಗೋವಾ ಕ್ಯಾಸಿನೋಗಳಲ್ಲಿ ದೋಚಿದ ಹಣವನ್ನು ಖರ್ಚು ಮಾಡಲು ಯೋಜಿಸಿದ್ದರು ಎಂಬ ಸ್ಫೋಟಕ ಮಾಹಿತಿ ಚಾರ್ಜ್‌ಶೀಟ್‌ನಲ್ಲಿ ಬಯಲಾಗಿದೆ. ಸಿಎಂಎಸ್‌ನ ಮಾಜಿ ಉದ್ಯೋಗಿ ಜೇವಿಯರ್ ಪ್ರಮುಖ ಸಂಚುಕೋರನಾಗಿದ್ದು, ಸಾಲ ತೀರಿಸುವ ಉದ್ದೇಶವೂ ಆರೋಪಿಗಳಲ್ಲಿ ಇತ್ತು ಎನ್ನಲಾಗಿದೆ.

7.11 ಕೋಟಿ ದರೋಡೆ ಹಣ ಕ್ಯಾಸಿನೊಗೆ ಸುರಿಯಲು ಪ್ಲ್ಯಾನ್​! ಚಾರ್ಜ್​​ಶೀಟ್​​ನಲ್ಲಿ ಸ್ಫೋಟಕ ಮಾಹಿತಿ ರಿವೀಲ್​​
ಎಟಿಎಂಗೆ ಹಣ ಸಾಗಿಸುತ್ತಿದ್ದ ವಾಹನ ದರೋಡೆ ಕೇಸ್​Image Credit source: Google
ಪ್ರಸನ್ನ ಹೆಗಡೆ
|

Updated on:Feb 13, 2026 | 3:30 PM

Share

ಬೆಂಗಳೂರು, ಫೆಬ್ರವರಿ 13: ಆರ್‌ಬಿಐ ಅಧಿಕಾರಿಗಳಂತೆ ನಟಿಸಿ ದಕ್ಷಿಣ ಬೆಂಗಳೂರಿನಲ್ಲಿ ಸಿಎಂಎಸ್ ಇನ್ಫೋ ಸಿಸ್ಟಮ್ಸ್‌ನ ಹಣ ಸಾಗಾಣಿಕೆ ವ್ಯಾನ್‌ನ್ನು ಅಡ್ಡಗಟ್ಟಿ, ಸಿಬ್ಬಂದಿಯನ್ನು ಬೆದರಿಸಿ 7.11 ಕೋಟಿ ಹಣ ದರೋಡೆ ಪ್ರಕರಣ ಸಂಬಂಧ ಸಿದ್ಧಾಪುರ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. 2025ರ ನವೆಂಬರ್ 19ರಂದು ದೋಚಿದ್ದ ಹಣವನ್ನು ಆರೋಪಿಗಳು ಗೋವಾಕ್ಕೆ ತೆರಳಿ ಕ್ಯಾಸಿನೊಗಳಲ್ಲಿ ಖರ್ಚು ಮಾಡಲು ನಿರ್ಧರಿಸಿದ್ದರು ಎಂಬುದು ಈ ವೇಳೆ ಬೆಳಕಿಗೆ ಬಂದಿದೆ.

54 ಗಂಟೆಗಳಲ್ಲೇ ದರೋಡೆ ಕೇಸ್​ ಭೇದಿಸಿದ್ದ ಪೊಲೀಸರು ಇದೀಗ 1,328 ಪುಟಗಳ ಆರೋಪಪಟ್ಟಿಯಲ್ಲಿ ಹಲವಾರು ಪ್ರಮುಖ ವಿಚಾರಗಳನ್ನು ಉಲ್ಲೇಖಿಸಿದ್ದಾರೆ. ಪ್ರಕರಣದಲ್ಲಿ ಒಂಭತ್ತು ಆರೋಪಿಗಳ ವಿರುದ್ಧ ದರೋಡೆ, ಅಕ್ರಮ ಬಂಧನ/ತಡೆ, ಸಾಕ್ಷ್ಯ ನಾಶಪಡಿಸುವುದು, ಅಪರಾಧ ಸಂಚು, ಜೀವ ಬೆದರಿಕೆ ಸೇರಿದಂತೆ ವಿವಿಧ ಆರೋಪಗಳನ್ನು ದಾಖಲಿಸಲಾಗಿದೆ.

ಇದನ್ನೂ ಓದಿ: ಬಗೆದಷ್ಟು ಬಯಲಾಗುತ್ತಿದೆ RTO ಅಧಿಕಾರಿಗಳ ಭ್ರಷ್ಟಾಚಾರ! ದಾಖಲೆ ಸಮೇತ ಕೋರಮಂಗಲ ಆರ್‌ಟಿಒ ಗೋಲ್ಮಾಲ್ ಬಹಿರಂಗ

ಜಯನಗರ ಎಸಿಪಿ ಮತ್ತು ಅವರ ತಂಡ ವೈಜ್ಞಾನಿಕ ವಿಧಾನದಲ್ಲಿ ತನಿಖೆ ಪೂರ್ಣಗೊಳಿಸಿದ್ದು, ಸಿಎಂಎಸ್ ಇನ್ಫೋ ಸಿಸ್ಟಮ್ಸ್‌ನ ಮಾಜಿ ಉದ್ಯೋಗಿ, ಎ1 ಜೆ. ಜೇವಿಯರ್ ಈ ಸಂಚಿನ ಪ್ರಮುಖ ಸಂಚುಕೋರನಾಗಿದ್ದ. ಕಂಪನಿಯ ಎಲ್ಲಾ ವಿವರಗಳನ್ನೂ ಅವನು ಚೆನ್ನಾಗಿ ತಿಳಿದಿದ್ದ. ಅಲ್ಲದೆ ದರೋಡೆ ಗ್ಯಾಂಗ್ ಸ್ಪಷ್ಟವಾದ ಪರಾರಿ ಮಾರ್ಗ ಕೂಡ ರೂಪಿಸಿಕೊಂಡಿತ್ತು. ಕರ್ನಾಟಕದಿಂದ ಆಂಧ್ರ ಪ್ರದೇಶ ಪ್ರವೇಶಿಸಿ, ಅಲ್ಲಿಂದ ಉತ್ತರ ಪ್ರದೇಶದ ಮೂಲಕ ಅಥವಾ ನೇರವಾಗಿ ಗೋವಾಕ್ಕೆ ತೆರಳುವ ಯೋಜನೆ ಇವರದ್ದಾಗಿತ್ತು. ಅಂತಿಮವಾಗಿ ಗೋವಾಕ್ಕೆ ತೆರಳಿ ಕ್ಯಾಸಿನೊಗಳಲ್ಲಿ ಹಣ ವ್ಯಯಿಸುವ ಉದ್ದೇಶ ಇವರು ಹೊಂದಿದ್ದರು. ಸಾಲದ ಹಣ ತೀರಿಸುವ ಉದ್ದೇಶವೂ ಇವರಲ್ಲಿತ್ತು ಎಂಬ ಅಂಶವನ್ನು ಚಾರ್ಜ್​​ಶೀಟ್​​ನಲ್ಲಿ ಪೊಲೀಸರು ಉಲ್ಲೇಖಿಸಿದ್ದಾರೆ.

ಇನ್ನು ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಕಾನ್ಸ್‌ಟೇಬಲ್, ಎ2 ಅಣ್ಣಪ್ಪ ನಾಯ್ಕ್ ಕೂಡ ಪ್ರಮುಖ ಪಾತ್ರ ವಹಿಸಿದ್ದ. ಎ4 ರವಿ ಕಾರ್ಯಾಚರಣೆ ಜಾರಿಗೊಳಿಸುವಲ್ಲಿ ಪಾತ್ರ ವಹಿಸಿದ್ದರೆ, ಆರೋಪಿ ಎ3 ಗೋಪಾಲ ಪ್ರಸಾದ್ ಅಲಿಯಾಸ್ ಗೋಪಿ ಲಾಜಿಸ್ಟಿಕ್ ಮಾಹಿತಿ ಒದಗಿಸಿದ್ದ ಎನ್ನಲಾಗಿದೆ. ತನಿಖಾ ತಂಡ ಒಟ್ಟು 129 ಪ್ರಮುಖ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು, ಕಣ್ಣಾರೆ ಕಂಡ ಸಾಕ್ಷಿದಾರರ ಹೇಳಿಕೆಗಳು, ತಾಂತ್ರಿಕ ಹಾಗೂ ಫೊರೆನ್ಸಿಕ್ ಸಾಕ್ಷ್ಯಗಳು, ಬೆರಳಚ್ಚುಗಳ ಮೂಲಕ ಆರೋಪಿಗಳ ಗುರುತು ಸೇರಿದಂತೆ ಎಲ್ಲ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 3:29 pm, Fri, 13 February 26

Follow Us
Prasanna Hegde
Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?