AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದಿದ್ದ 7 ಬಿಎಂಟಿಸಿ ಅಧಿಕಾರಿಗಳು ಸಸ್ಪೆಂಡ್

ಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದಿದ್ದ ಬಿಎಂಟಿಸಿಯ ಏಳು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಅಮಾನತುಗೊಂಡುವವರು ಯಾರು-ಯಾರು? ಯಾಕಾಗಿ ಲಂಚ ಪಡೆದಿದ್ದರು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದಿದ್ದ 7 ಬಿಎಂಟಿಸಿ ಅಧಿಕಾರಿಗಳು ಸಸ್ಪೆಂಡ್
BMTC
TV9 Web
| Edited By: |

Updated on:Jan 14, 2024 | 5:12 PM

Share

ಬೆಂಗಳೂರು, (ಜನವರಿ 14): ಗೂಗಲ್ ಪೇ, ಫೋನ್ ಪೇ (google Pay And Phone Pay) ಮೂಲಕ ಲಂಚ (Bribe)  ಪಡೆದಿದ್ದ ಬಿಎಂಟಿಸಿಯ (BMTC) ಏಳು ಅಧಿಕಾರಿಗಳನ್ನು ಸಸ್ಪೆಂಡ್(Suspended) ಮಾಡಲಾಗಿದೆ. ಸುಮಾರು ಒಂದೂವರೆ ಕೋಟಿ ರುಪಾಯಿಗೂ ಹೆಚ್ಚು ವಸೂಲಿ ಮಾಡಿದ್ದು, ಬಿಎಂಟಿಸಿಯ ಏಳು ಅಧಿಕಾರಿಗಳ ಅಕೌಂಟ್ ನಲ್ಲಿ ಕೋಟಿ ಕೋಟಿ ಹಣ ಪತ್ತೆಯಾಗಿದೆ. ಬಿಎಂಟಿಸಿಯಲ್ಲಿ ಇದೆ ಮೊದಲ ಬಾರಿಗೆ ಅಧಿಕಾರಿಗಳ ಅಕೌಂಟ್ ನಲ್ಲಿ ಇಷ್ಟು ದೊಡ್ಡ ಮೊತ್ತ ಪತ್ತೆಯಾಗಿದೆ.

ಒಬ್ಬೊಬ್ಬ ಅಧಿಕಾರಿಗಳ ಅಕೌಂಟ್ ನಲ್ಲಿ ಸುಮಾರು 20 ರಿಂದ 25 ಲಕ್ಷ ರೂಪಾಯಿ ಸಿಕ್ಕಿದೆ. ಇದರೊಂದಿಗೆ ಒಟ್ಟು ಏಳು ಅಧಿಕಾರಿಗಳಿಂದ ಸುಮಾರು ಒಂದೂವರೆ ಕೋಟಿ ರುಪಾಯಿ ಅಕ್ರಮ ಹಣ ಪತ್ತೆಯಾಗಿದೆ. ಡ್ಯೂಟಿ, ವೀಕ್ಲಿ ಆಫ್ ರಜೆ ಹಾಗೂ ಕಂಡಿಷನ್ ಇರುವ ಮತ್ತು ಹೆಚ್ಚು ಕಲೆಕ್ಷನ್ ಬರುವ ಬಸ್ ಬೇಕು ಅಂದರೆ ಡಿಪೋ ಮ್ಯಾನೇಜರ್, ಮತ್ತು ಹಿರಿಯ ಅಧಿಕಾರಿಗಳಿಗೆ ಹಣ ನೀಡಬೇಕು. ಹಣ ನೀಡಿದ್ರೆ ಎಲ್ಲಾ ವ್ಯವಸ್ಥೆ ಮಾಡುತ್ತಾರೆ ಹಣ ನೀಡಿಲ್ಲ ಅಂದರೆ ಮಾನಸಿಕವಾಗಿ ಕಿರುಕುಳ ನೀಡುವುದು ಮಾಡುತ್ತಾರೆ.

ಈ ಹಿನ್ನೆಲೆಯಲ್ಲಿ ಕಂಡಕ್ಟರ್ ಡ್ರೈವರ್ ಗಳಿಂದ ಪ್ರತಿ ವಾರ 500 ರುಪಾಯಿ ಅಂತೆ ಪ್ರತಿ ತಿಂಗಳಿಗೆ ಎರಡು ಸಾವಿರ ರುಪಾಯಿ ವಸೂಲಿ ಮಾಡಲಾಗ್ತಿತ್ತು. ಈ ಬಗ್ಗೆ ಟಿವಿ9 ಅಕ್ಟೋಬರ್-2ರಂದು ಸುದ್ದಿ ಪ್ರಸಾರ ಮಾಡಿತ್ತು. ಅಲ್ಲದೇ ಖುದ್ದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರ ಗಮನಕ್ಕೆ ತರಲಾಗಿತ್ತು.

ಸಚಿವರು ಕೂಡಲೇ ಅಂದಿನ ಬಿಎಂಟಿಸಿ ಎಂಡಿ ಜಿ. ಸತ್ಯವತಿ ಅವರಿಗೆ ತನಿಖೆ ಮಾಡಲು ಆದೇಶ ಮಾಡಿದ್ದರು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಬಿಎಂಟಿಸಿಯ ಭದ್ರತಾ ಮತ್ತು ಜಾಗೃತದಳದ ಅಧಿಕಾರಿಗಳು, ಏಳು ಅಧಿಕಾರಿಗಳ ಎಲ್ಲಾ ಬ್ಯಾಂಕ್ ಡಿಟೇಲ್ಸ್ ತನಿಖೆ ನಡೆಸಿದಾಗ ಪ್ರತಿಯೊಬ್ಬರ ಅಕೌಂಟ್ ಗೆ ಡ್ರೈವರ್ ಕಂಡಕ್ಟರ್ ಗಳಿಂದ ಲಕ್ಷಾಂತರ ರೂಪಾಯಿ ಹಣವನ್ನು ಗೂಗಲ್ ಪೇ ಫೋನ್ ಪೇ ಮೂಲಕ ಹಾಕಿಸಿಕೊಂಡಿರೋದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಏಳು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ.

ಯಾವ ಅಧಿಕಾರಿಗಳು ಅಮಾನತ್ತು?

1. ಮಂಜುಳಾ.ಆರ್- ಸಿಬ್ಬಂದಿ ಮೇಲ್ವಿಚಾರಕಿ ಡಿಪೋ ನಂ-27 2. ಪ್ರೀತಮ್- ಕಿರಿಯ ಸಹಾಯಕ ಡಿಪೋ ನಂ-27 3. ಮನೋಜ್ ಕುಮಾರ್ ಎಲ್.ಎಸ್- ಕಿರಿಯ ಸಹಾಯಕ ಡಿಪೋ ನಂ-27 4. ಧನಂಜಯ. ವಿ- ಸಹಾಯಕ ಲೆಕ್ಕಿಗ ಡಿಪೋ ನಂ-27 5.ಸುಮ.ಎ- ಕಿರಿಯ ಸಹಾಯಕಿ ಡಿಪೋ ನಂ-27 6. ಶಾಂತವ್ವ- ಕಿರಿಯ ಸಹಾಯಕಿ ಡಿಪೋ ನಂ-27 7. ದೇವರಾಜ್.ಜಿ- ಸಹಾಯಕ ಕುಶಲಕರ್ಮಿ ಡಿಪೋ ನಂ-27

Published On - 5:05 pm, Sun, 14 January 24

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು