AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋದಲ್ಲಿ ಬುಧವಾರ ಒಂದೇ ದಿನ 7 ಲಕ್ಷ ಜನ ಪ್ರಯಾಣ

ಕರ್ನಾಟಕ ಸಾರಿಗೆ ಇಲಾಖೆಯು ಕೆಆರ್​ಪುರಂ ಮೆಟ್ರೋ ನಿಲ್ದಾಣದಿಂದ 37 ಫೀಡರ್ ಬಸ್ ಸೇವೆಗಳನ್ನು ಪ್ರಾರಂಭಿಸಿದೆ. ಈ ಫೀಡರ್ ಬಸ್‌ಗಳು ಕೆಆರ್​ಪುರಂ ಮೆಟ್ರೋ ನಿಲ್ದಾಣದಿಂದ ಹೊರ ವರ್ತುಲ ರಸ್ತೆಯ ಕಡೆಗೆ ಅನೇಕ ಐಟಿ ಪಾರ್ಕ್‌ಗಳನ್ನು ಹೊಂದಿರುವ ಸಿಲ್ಕ್​​ಬೋರ್ಡ್​ವರೆಗೆ ಕಾರ್ಯನಿರ್ವಹಿಸುತ್ತವೆ.

ನಮ್ಮ ಮೆಟ್ರೋದಲ್ಲಿ ಬುಧವಾರ ಒಂದೇ ದಿನ 7 ಲಕ್ಷ ಜನ ಪ್ರಯಾಣ
ನಮ್ಮ ಮೆಟ್ರೋ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Oct 13, 2023 | 7:16 AM

Share

ಬೆಂಗಳೂರು ಅ.13: ಸೋಮವಾರದಿಂದ ಸಂಪೂರ್ಣ ನೇರಳೆ ಮಾರ್ಗ (Purple Line) ಆರಂಭವಾಗಿದ್ದು, ಚಲ್ಲಘಟ್ಟದಿಂದ-ವೈಟ್​ಫಿಲ್ಡ್​​ವರೆಗೆ 42 ಕಿಮೀ ಅನ್ನು ಕೇವಲ ಒಂದು ಗಂಟೆಯಲ್ಲಿ ಪ್ರಯಾಣ ಮಾಡಬಹುದಾಗಿದೆ. ಈ ಮಾರ್ಗ ಪ್ರಾರಂಭವಾದ ದಿನದಿಂದ ಮೆಟ್ರೋ (Metro) ಪ್ರಯಾಣಿಕರ ಸಂಖ್ಯೆ ಹೆಚ್ಚಿದೆ. ಈ ಬಗ್ಗೆ ಬೆಂಗಳೂರು ಸೆಂಟ್ರಲ್ ಸಂಸದ ಪಿಸಿ ಮೋಹನ್ (PC Mohan) ಎಕ್ಸ್​​ (ಟ್ವಿಟರ್​​​) ಟ್ವೀಟ್​ ಮಾಡಿ “ನಮ್ಮ ಮೆಟ್ರೋದಲ್ಲಿ ಬುಧವಾರ ಒಂದೇ ದಿನ 7,01,455 ಜನ ಪ್ರಯಾಣಿಸಿದ್ದಾರೆ ಎಂದು ತಿಳಿಸಿದ್ದಾರೆ”.

ಏತನ್ಮಧ್ಯೆ, ಪೀಕ್ ಅವರ್‌ಗಳಲ್ಲಿ ಮೆಟ್ರೋ ರೈಲುಗಳಲ್ಲಿ ಜನದಟ್ಟಣೆ ಹೆಚ್ಚಿರುತ್ತದೆ. ಹೀಗಾಗಿ ಜನದಟ್ಟಣೆ ಕಡೆಮೆ ಮಾಡಲು ಮೆಟ್ರೋ ರೈಲುಗಳ ಸಂಚಾರ ಏರಿಕೆ ಮಾಡುವಂತೆ ಪ್ರಯಾಣಿಕರು ಒತ್ತಾಯಿಸುತ್ತಿದ್ದಾರೆ. ನೇರಳೆ ಮಾರ್ಗವು ಪೂರ್ವ ಬೆಂಗಳೂರನ್ನು ನಗರದ ಇತರ ಭಾಗಗಳಿಗೆ ಸಂಪರ್ಕಿಸುವುದರಿಂದ, ಅನೇಕ ಐಟಿ ಉದ್ಯೋಗಿಗಳು ದೈನಂದಿನ ಪ್ರಯಾಣಕ್ಕಾಗಿ ಮೆಟ್ರೋವನ್ನು ಬಳಸಲು ಪ್ರಾರಂಭಿಸಿದ್ದಾರೆ.

ಇದನ್ನೂ ಓದಿ: ನೇರಳೆ ಮಾರ್ಗದಲ್ಲಿ ಒಂದೇ ದಿನ 3.35ಲಕ್ಷ ಜನ ಸಂಚಾರ; ಜನಸಂದಣಿಯಿಂದ ರೋಸಿಹೋದ ಟೆಕ್ಕಿ

ಕರ್ನಾಟಕ ಸಾರಿಗೆ ಇಲಾಖೆಯು ಕೆಆರ್​ಪುರಂ ಮೆಟ್ರೋ ನಿಲ್ದಾಣದಿಂದ 37 ಫೀಡರ್ ಬಸ್ ಸೇವೆಗಳನ್ನು ಪ್ರಾರಂಭಿಸಿದೆ. ಈ ಫೀಡರ್ ಬಸ್‌ಗಳು ಕೆಆರ್​ಪುರಂ ಮೆಟ್ರೋ ನಿಲ್ದಾಣದಿಂದ ಹೊರ ವರ್ತುಲ ರಸ್ತೆಯ (Outer Ring Road) ಕಡೆಗೆ ಅನೇಕ ಐಟಿ ಪಾರ್ಕ್‌ಗಳನ್ನು ಹೊಂದಿರುವ ಸಿಲ್ಕ್​​ಬೋರ್ಡ್​ವರೆಗೆ ಕಾರ್ಯನಿರ್ವಹಿಸುತ್ತವೆ ಮತ್ತು ಆಗಾಗ್ಗೆ ತೀವ್ರ ಟ್ರಾಫಿಕ್​​ನಿಂದ ತೊಂದರೆ ಉಂಟಾಗುತ್ತದೆ. ಈ ಫೀಡರ್ ಬಸ್‌ಗಳು ಬೆಳಿಗ್ಗೆ ಮತ್ತು ಸಂಜೆಯ ಪೀಕ್ ​ಅವರ್‌ ಅನುಗುಣವಾಗಿ ಕಾರ್ಯನಿವರ್ಹಿಸುತ್ತವೆ. ಪೀಕ್​ ಅವರ್‌ಗಳಲ್ಲಿ, ಫೀಡರ್ ಬಸ್‌ಗಳು ಪ್ರತಿ ಐದು ನಿಮಿಷಕ್ಕೊಮ್ಮೆ ಸಂಚರಿಸುತ್ತವೆ. ಜನದಟ್ಟಣೆ ಇಲ್ಲದ ಸಮಯದಲ್ಲಿ, ಪ್ರತಿ ಎಂಟು ನಿಮಿಷಗಳಿಗೆ ಬಸ್‌ಗಳು ಲಭ್ಯವಿರುತ್ತವೆ.

ಬೆಂಗಳೂರಿನ ಹೊರ ವರ್ತುಲ ರಸ್ತೆ ಪ್ರದೇಶದಲ್ಲಿ ಜನದಟ್ಟಣೆ ಕಡಿಮೆ ಮಾಡುವುದು ಸರ್ಕಾರದ ಧ್ಯೇಯವಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಮುಂದಿನ ಆರು ತಿಂಗಳಲ್ಲಿ, ಬಿಎಂಟಿಸಿಯಲ್ಲಿ ಅನೇಕ ನಿರ್ಣಾಯಕ ಮತ್ತು ಅಭೂತಪೂರ್ವ ಬದಲಾವಣೆಗಳನ್ನು ತರಲಾಗುವುದು. ಬೆಂಗಳೂರಿನಲ್ಲಿ ಸಾರ್ವಜನಿಕ ಸಾರಿಗೆಯನ್ನು ಹೆಚ್ಚಿಸಲು ಹೆಚ್ಚುವರಿ 2,000 ಬಸ್‌ಗಳನ್ನು ಖರೀದಿಸಲು ಸರ್ಕಾರ ಯೋಜಿಸುತ್ತಿದೆ. ಪೂರ್ವ ಬೆಂಗಳೂರಿನಲ್ಲಿ ಕೆಲಸ ಮಾಡುವ ಜನರು ಕೆಲಸಕ್ಕೆ ಪ್ರಯಾಣಿಸಲು ಸಾರ್ವಜನಿಕ ಸಾರಿಗೆಯನ್ನು ಬಳಸಲು ಆದ್ಯತೆ ನೀಡುವಂತೆ ವಿನಂತಿಸಲಾಗಿದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:15 am, Fri, 13 October 23

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್