AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ವ್ಯಾಪ್ತಿಯಲ್ಲಿವೆ ತೆರಿಗೆ ಕಟ್ಟದ 7 ಲಕ್ಷ ಆಸ್ತಿಗಳು; ಇ-ಖಾತಾ ಮೂಲಕ ಬಾಕಿ ತೆರಿಗೆ ವಸೂಲಿಗೆ ಪ್ಲಾನ್

ನಟ ದರ್ಶನ್ ಆ್ಯಂಡ್ ಗ್ಯಾಂಗ್, ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದ್ದ ಪಟ್ಟಣಗೆರೆಯ ಶೆಡ್​ಗೆ ಇತ್ತೀಚೆಗಷ್ಟೇ ಪಾಲಿಕೆ ನೋಟಿಸ್ ನೀಡಿತ್ತು. 15 ವರ್ಷಗಳಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಶೆಡ್ ಗೆ ನೋಟಿಸ್ ನೀಡಿದ್ದ ಪಾಲಿಕೆ, ಇದೀಗ ಇದೇ ರೀತಿ ತೆರಿಗೆ ವಂಚನೆ ಮಾಡಿರೋ 7 ಲಕ್ಷ ಆಸ್ತಿಗಳನ್ನ ಪತ್ತೆ ಹಚ್ಚಿದೆ. ಖಾತೆ ಇಲ್ಲ ಅನ್ನೋ ನೆಪವೊಡ್ಡಿ ತೆರಿಗೆ ಪಾವತಿಸದೇ ಇರೋದರಿಂದ ಪಾಲಿಕೆಗೆ ನೂರಾರು ಕೋಟಿ ನಷ್ಟ ಉಂಟಾಗ್ತಿದ್ದು, ತೆರಿಗೆ ಬಾಕಿದಾರರಿಗೆ ಬಿಸಿ ಮುಟ್ಟಿಸೋಕೆ ಮುಂದಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿವೆ ತೆರಿಗೆ ಕಟ್ಟದ 7 ಲಕ್ಷ ಆಸ್ತಿಗಳು; ಇ-ಖಾತಾ ಮೂಲಕ ಬಾಕಿ ತೆರಿಗೆ ವಸೂಲಿಗೆ ಪ್ಲಾನ್
ಬಿಬಿಎಂಪಿ
ಶಾಂತಮೂರ್ತಿ
ಶಾಂತಮೂರ್ತಿ | Edited By: ಆಯೇಷಾ ಬಾನು|

Updated on: Jun 26, 2024 | 7:05 AM

Share

ಬೆಂಗಳೂರು, ಜೂನ್.26: ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಆದೇಶ ನೀಡಿದ್ದೆ ತಡ, ಪಾಲಿಕೆ ವ್ಯಾಪ್ತಿಯಲ್ಲಿ ಬಾಕಿ ಉಳಿದ ಆಸ್ತಿ ತೆರಿಗೆ ವಸೂಲಿಗಿಳಿದ ಪಾಲಿಕೆ ಕೋಟ್ಯಂತರ ರೂಪಾಯಿ ತೆರಿಗೆ (Tax) ಬಾಕಿ ವಸೂಲಿ ಮಾಡಿತ್ತು. ನೋಟಿಸ್ ನೀಡೋ ಮೂಲಕ, ಆಸ್ತಿ ಸೀಜ್ ಮಾಡೋ ಮೂಲಕ ತೆರಿಗೆ ಬಾಕಿದಾರರಿಗೆ ಬಿಸಿ ಮುಟ್ಟಿಸಿತ್ತು. ಪಾಲಿಕೆ ಚಾಪೆ ಕೆಳಗೆ ತೂರಿದ್ರೆ, ಇದೀಗ ಕೆಲ ಆಸ್ತಿಗಳ ಮಾಲೀಕರು ರಂಗೋಲಿ ಕೆಳಗೆ ತೂರಿದ್ದಾರೆ. ತೆರಿಗೆ ವಸೂಲಿಗಿಳಿದಿದ್ದ ಪಾಲಿಕೆ ಕಣ್ಣುತಪ್ಪಿಸಿದ್ದ ಬರೋಬ್ಬರಿ 7 ಲಕ್ಷ ಆಸ್ತಿಗಳು ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿರೋದು ಇದೀಗ ಬೆಳಕಿಗೆ ಬಂದಿದೆ.

ಇನ್ನು ಇತ್ತೀಚೆಗಷ್ಟೇ ಪಟ್ಟಣಗೆರೆಯ ಜಯಣ್ಣ ಮಾಲೀಕತ್ವದ ಶೆಡ್ ನಿಂದ ಬರೋಬ್ಬರಿ 15 ವರ್ಷದ ತೆರಿಗೆ ಬಾಕಿ ಇದ್ದಿದ್ದನ್ನ ಪತ್ತೆಹಚ್ಚಿದ್ದ ಪಾಲಿಕೆ. ಇದೀಗ ಇದೇ ರೀತಿಯ 7 ಲಕ್ಷ ಪ್ರಾಪರ್ಟಿಗಳು ತೆರಿಗೆ ಕಟ್ಟದೇ, ಖಾತೆಯನ್ನೂ ಮಾಡಿಸದೇ ಕಳ್ಳಾಟವಾಡ್ತಿರೋದು ಬಯಲಾಗಿದೆ. ಇದೀಗ ಈ ರೀತಿ ತೆರಿಗೆ ಕಟ್ಟದೇ ಉಳಿದವರಿಗೆ ಬಿಸಿ ಮುಟ್ಟಿಸಲು ಸಜ್ಜಾಗಿರೋ ಪಾಲಿಕೆ, ಇ-ಖಾತೆ ಮಾಡಿಸಿ ಬಳಿಕ ತೆರಿಗೆ ವಸೂಲಿ ಮಾಡೋಕೆ ಸಜ್ಜಾಗಿದೆ.

ಇದನ್ನೂ ಓದಿ: ಚಿಕಿತ್ಸೆಗೆ ಬಂದ ವೃದ್ಧಗೆ ಮೆಹಂದಿ ಕೋನ್‌ ʼಔಷಧಿʼ: ಸ್ಪಷ್ಟನೆ ನೀಡಿದ ಹಾಸನ ವೈದ್ಯಾಧಿಕಾರಿ

ಸದ್ಯ ಈಗ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಂದಾಗಿ ಪಾಲಿಕೆ ಬೊಕ್ಕಸಕ್ಕೆ ವಾರ್ಷಿಕವಾಗಿ ಬರೋಬ್ಬರಿ 1.50 ಸಾವಿರ ಕೋಟಿ ಆದಾಯ ನಷ್ಟವಾಗ್ತಿದೆ. ಇತ್ತ ಚುನಾವಣೆ ಹಿನ್ನೆಲೆ ಸೈಲೆಂಟ್ ಆಗಿದ್ದ ಪಾಲಿಕೆ, ಈಗ ಈ ರೀತಿ ತೆರಿಗೆ ಬಾಕಿದಾರರಿಗೆ ಬಿಸಿ ಮುಟ್ಟಿಸಲಿದ್ದು, ಇದರಿಂದ ಪಾಲಿಕೆಗೆ ವಾರ್ಷಿಕವಾಗಿ 1 ಸಾವಿರ ಕೋಟಿ ಆದಾಯದ ನೀರಿಕ್ಷೆಯಿದೆ.

ಒಟ್ಟಿನಲ್ಲಿ ಈಗಾಗಲೇ ತೆರಿಗೆ ಬಾಕಿದಾರರಿಗೆ ಒನ್ ಟೈಮ್ ಸೆಟಲ್ ಮೆಂಟ್, ಕಾಲಾವಕಾಶ ನೀಡಿದ್ದ ಪಾಲಿಕೆ, ಇದೀಗ ಏನೇ ಮಾಡಿದ್ರು ಜಗ್ಗದ ತೆರಿಗೆ ಕಳ್ಳರಿಗೆ ಇ-ಖಾತೆ ಮೂಲಕ ವಸೂಲಿಗೆ ಪಾಲಿಕೆ ಮುಂದಾಗಿದ್ದು, ಆಸ್ತಿ ತೆರಿಗೆ ಬಾಕಿದಾರರು ಇನ್ನಾದ್ರೂ ಪಾಲಿಕೆಗೆ ತೆರಿಗೆ ಪಾವತಿಸ್ತಾರಾ ಅನ್ನೋದನ್ನ ಕಾದುನೋಡಬೇಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Shanthamurthy
Shanthamurthy
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು