AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ನೆರೆಮನೆಯಲ್ಲಿ 7 ವರ್ಷದ ಬಾಲಕಿ ಅನುಮಾಸ್ಪದ ಸಾವು

ಬೆಂಗಳೂರಿನಲ್ಲಿ 7 ವರ್ಷದ ಬಾಲಕಿ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾಳೆ. ಮಗಳು ಹಠ ಮಾಡುತ್ತಾಳೆ ಬುದ್ದಿ ಹೇಳಿ ಎಂದು ಪಕ್ಕದ ಮನೆಗೆ ಕಳಿಸಿದ್ದಾಗ ಆಕೃತಿ ಎನ್ನುವ ಬಾಲಕಿ ಮೃತಪಟ್ಟಿದ್ದಾಳೆ. ಈ ಸಾವಿನ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.

ಬೆಂಗಳೂರು: ನೆರೆಮನೆಯಲ್ಲಿ 7 ವರ್ಷದ ಬಾಲಕಿ ಅನುಮಾಸ್ಪದ ಸಾವು
ಮೃತ ಬಾಲಕಿ
ಬಿ ಮೂರ್ತಿ, ನೆಲಮಂಗಲ
| Edited By: |

Updated on: Nov 19, 2023 | 4:13 PM

Share

ಬೆಂಗಳೂರು, (ನವೆಂಬರ್ 19): ಮಗಳು ಹಠ ಮಾಡುತ್ತಾಳೆ ಬುದ್ದಿ ಹೇಳಿ ಎಂದುಪಕ್ಕದ ಮನೆಗೆ ಕಳಿಸಿದ್ದಾಗ 7 ವರ್ಷದ ಬಾಲಕಿ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾಳೆ. ಬೆಂಗಳೂರು (Bengaluru) ಉತ್ತರ ತಾಲೂಕಿನ ಗಂಗೊಂಡಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಆಕೃತಿ (07) ಮೃತ ಬಾಲಕಿ. ವಿನೋದ್ ಮತ್ತು ನಳಿನ ದಂಪತಿಗಳ ಪುತ್ರಿ ಆಕೃತಿ ಎನ್ನುವ ಬಾಲಕಿ, ಆಕೃತಿ ಪಕ್ಕದ ಮನೆಯ ನಂಜುಂಡಪ್ಪ, ಪಲ್ಲವಿ ಮನೆಗೆ ಹೋದಾಗ ಮೃತಪಟ್ಟಿದ್ದಾಳೆ.

ಅದೇನಾಯ್ತೋ ಏನೋ ಪೋಷಕರಿಗೆ ಗಮನಕ್ಕೆ ಬಾರದೆ ನಂಜುನಂಡಪ್ಪ ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ, ಈ ಬಾಲಕಿ ಮೃತಪಟ್ಟಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಇದನ್ನೂ ಓದಿ: ಬೆಂಗಳೂರು: ಬೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಬಾಣಂತಿ, ಹಸುಗೂಸು ದಾರುಣ ಸಾವು

ನಿನ್ನೆ ತಡರಾತ್ರಿ 2:10ರ ಸುಮಾರಿಗೆ ಮಗು ವಾಂತಿ ಮಾಡುತ್ತಿದೆ ಎಂದು ನಂಜುಂಡಪ್ಪ ಆಸ್ಪತ್ರೆಗೆ ಕರಕೊಂಡು ಹೋಗಿದ್ದಾರೆ. ಆದ್ರೆ, ಬಾಲಕಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಇದಕ್ಕೂ ಮೊದಲು ಎರಡು ಬಾಲಕಿ ಪೋಷಕರಿಗೆ ಎರಡು ಬಾರಿ ಫೋನ್ ಮಾಡಿದ್ದಾರೆ. ಆದ್ರೆ, ನಿದ್ರೆಯಲ್ಲಿದ್ದ ಬಾಲಕಿ ಪೋಷಕರು ಮನೆ ಬಾಗಿಲು ತೆಗೆದಿಲ್ಲ ಎಂದು ತಿಳಿದುಬಂದಿದೆ.

ಈ ಬಗ್ಗೆ FSL ತಂಡ ಪರಿಶೀಲನೆ ನಡೆಸಿದ ವೇಳೆ ಬಾಲಕಿಯ ಮೈಕೈ ಬಳಿ ರಕ್ತ ಹೆಪ್ಪುಗಟ್ಟಿದ ಗಾಯಗಳು ಕಂಡುಬಂದಿವೆ. ಮಗುವಿಗೆ ಭಯ ಹುಟ್ಟಿಸಲು ಯಾವುದೋ ವಸ್ತುವಿನಿಂದ ಹೊಡೆಯುವ ವೇಳೆ ಉಸಿರುಗಟ್ಟಿ ಸತ್ತಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಇನ್ನು ಈ ಬಗ್ಗೆ ಮೃತ ಬಾಲಕಿಯ ಪೋಷಕರು ಪಕ್ಕದ ಮನೆಯ ನಂಜುಂಡಪ್ಪ ವಿರುದ್ಧ ದೂರು ನೀಡಿದ್ದು, ಈ ದೂರಿನ ಮೇರೆಗೆ ನೆರೆಮನೆಯ ನಂಜುಂಡಪ್ಪ, ಪಲ್ಲವಿಯನ್ನ ಮಾದನಾಯಕನಹಳ್ಳಿ ಪೊಲೀಸರು ವಶಕ್ಕೆ ಪಡದು ವಿಚಾರಣೆ ನಡೆಸಿದ್ದಾರೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ