AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಸ್ಕಾಂ ನಿರ್ಲಕ್ಷ್ಯಕ್ಕೆ ವಿದ್ಯುತ್​ ತಂತಿ ತಗುಲಿ 70 ಜನರ ಸಾವು: ಇಲ್ಲಿದೆ ಸಂಪೂರ್ಣ ಡೀಟೈಲ್ಸ್​

ರಾಜ್ಯ ರಾಜಧಾನಿ ಬೆಂಗಳೂರಿನ ಕಾಡುಗೋಡಿಯಲ್ಲಿ ರವಿವಾರ (ನ.19) ವಿದ್ಯುತ್ ತಂತಿ ತುಳಿದು ತಾಯಿ ಮತ್ತು ಮಗು ಸಜೀವದಹನವಾಗಿದ್ದರು. ಬೆಸ್ಕಾಂ ವ್ಯಾಪ್ತಿಯಲ್ಲಿ ಕರೆಂಟ್​ ತಂತಿ ತುಳಿದು ಸತ್ತ ಪ್ರಕರಣ ಇದೇ ಮೊದಲಲ್ಲ. ಈ ಹಿಂದೆ ಕೂಡ ಸಾಕಷ್ಟು ಜನ ತಂತಿ ವಿದ್ಯುತ್​ ತಂತಿ ತುಳಿದು ಮೃತಪಟ್ಟಿದ್ದಾರೆ. ಹಾಗಿದ್ದರೆ ಯಾವ ವರ್ಷ ಎಷ್ಟು ಜನ ಮೃತಪಟ್ಟಿದ್ದಾರೆ ಅಥವಾ ಗಾಯಗೊಂಡಿದ್ದಾರೆ? ಇಲ್ಲಿದೆ ಡೀಟೈಲ್ಸ್​

ಬೆಸ್ಕಾಂ ನಿರ್ಲಕ್ಷ್ಯಕ್ಕೆ ವಿದ್ಯುತ್​ ತಂತಿ ತಗುಲಿ 70 ಜನರ ಸಾವು: ಇಲ್ಲಿದೆ ಸಂಪೂರ್ಣ ಡೀಟೈಲ್ಸ್​
ಬೆಸ್ಕಾಂ
Poornima Agali Nagaraj
| Edited By: |

Updated on: Nov 20, 2023 | 1:05 PM

Share

ಬೆಂಗಳೂರು ನ.20: ರಾಜ್ಯ ರಾಜಧಾನಿ ಬೆಂಗಳೂರಿನ (Bengaluru) ಕಾಡುಗೋಡಿಯಲ್ಲಿ ರವಿವಾರ (ನ.19) ವಿದ್ಯುತ್ ತಂತಿ (Electrical wire) ತುಳಿದು ತಾಯಿ ಮತ್ತು ಮಗು ಸಜೀವದಹನವಾಗಿದ್ದರು. ಇದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ತಾಯಿ ಮತ್ತು ಮಗುವಿನ ಸಾವಿಗೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವೆಂದು ಐವರನ್ನು ಅಮಾನತು ಮಾಡಲಾಗಿತ್ತು. ಹಾಗೇ ಈ ಐವರನ್ನು ಬಂಧಿಸಲಾಗಿತ್ತು. ಇದೀಗ ಈ ಅಧಿಕಾರಿಗಳು ಜಾಮೀನಿನ ಮೇಲೆ ಹೊರಗಡೆ ಬಂದಿದ್ದಾರೆ. ಬೆಸ್ಕಾಂ (BESCOM) ವ್ಯಾಪ್ತಿಯಲ್ಲಿ ಕರೆಂಟ್​ ತಂತಿ ತುಳಿದು ಸತ್ತ ಪ್ರಕರಣ ಇದೇ ಮೊದಲಲ್ಲ. ಈ ಹಿಂದೆ ಕೂಡ ಸಾಕಷ್ಟು ಜನ ತಂತಿ ವಿದ್ಯುತ್​ ತಂತಿ ತುಳಿದು ಮೃತಪಟ್ಟಿದ್ದಾರೆ.

ಹಾಗಿದ್ದರೆ ಯಾವ ವರ್ಷ ಎಷ್ಟು ಜನ ಮೃತಪಟ್ಟಿದ್ದಾರೆ ಅಥವಾ ಗಾಯಗೊಂಡಿದ್ದಾರೆ? ಇಲ್ಲಿದೆ ಡೀಟೈಲ್ಸ್​

  1. 2018-19 ರಲ್ಲಿ ತಂತಿ ತಗುಲಿ 11 ಜನ ಮೃತಪಟ್ಟಿದ್ದರು. ಒಬ್ಬರು ಗಾಯಗೊಂಡಿದ್ದರು. ಒಟ್ಟು 12 ಜನರಿಗೆ ವಿದ್ಯುತ್​ ತಂತಿ ತಗುಲಿ ಶಾಕ್ ಹೊಡೆದಿತ್ತು.
  2. 2019-20 ರಲ್ಲಿ 10 ಜನ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದರು. ಒಟ್ಟು 13 ಜನರಿಗೆ ತಂತಿ ತಗುಲಿ ಕರೆಂಟ್ ಶಾಕ್ ಹೊಡೆದಿತ್ತು.
  3. 2020-21 ರಲ್ಲಿ 9 ಜನ ಮೃತಪಟ್ಟಿದ್ದರು, ಮೂವರಿಗೆ ಗಾಯಗಳಾಗಿದ್ದವು. ಒಟ್ಟು 12 ಜನರಿಗೆ ವಿದ್ಯುತ್​ ತಂತಿ ತಗುಲಿತ್ತು.
  4. 2021-22 ರಲ್ಲಿ 13 ಜನ ಮೃತಪಟ್ಟಿದ್ದರು, ಇಬ್ಬರು ಗಾಯಗೊಂಡಿದ್ದರು. ಒಟ್ಟು 15 ಜನರಿಗೆ ತಂತಿ ತಗುಲಿತ್ತು.
  5. 2022-23 ರಲ್ಲಿ 19 ಜನ ಸಾವೀಗೀಡಾಗಿದ್ದು, ಇಬ್ಬರು ಗಾಯಗೊಂಡಿದ್ದರು. ಒಟ್ಟು 21 ಜನರಿಗೆ ಬೆಸ್ಕಾಂ ವಿದ್ಯುತ್​ ತಂತಿ ತಗುಲಿತ್ತು.
  6. 2023-24 (2023ರ ಅಕ್ಟೋಬರ್​ ವರೆಗೆ) 8 ಜನ ಮೃತಪಟ್ಟಿದ್ದಾರೆ. ಒಟ್ಟು 8 ಜನರಿಗೆ ತಂತಿ ತಗುಲಿದೆ. ಕಳೆದ 5 ವರ್ಷದಲ್ಲಿ ಬೆಸ್ಕಾಂ ನಿರ್ಲಕ್ಷ್ಯಕ್ಕೆ 81 ಜನರಿಗೆ ವಿದ್ಯುತ್​ ತಂತಿ ತಗುಲಿದ್ದು, ಇದರಲ್ಲಿ ಒಟ್ಟು 70 ಜನ ಮೃತಪಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?