AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಸ್ಕಾಂ ನಿರ್ಲಕ್ಷ್ಯಕ್ಕೆ ವಿದ್ಯುತ್​ ತಂತಿ ತಗುಲಿ 70 ಜನರ ಸಾವು: ಇಲ್ಲಿದೆ ಸಂಪೂರ್ಣ ಡೀಟೈಲ್ಸ್​

ರಾಜ್ಯ ರಾಜಧಾನಿ ಬೆಂಗಳೂರಿನ ಕಾಡುಗೋಡಿಯಲ್ಲಿ ರವಿವಾರ (ನ.19) ವಿದ್ಯುತ್ ತಂತಿ ತುಳಿದು ತಾಯಿ ಮತ್ತು ಮಗು ಸಜೀವದಹನವಾಗಿದ್ದರು. ಬೆಸ್ಕಾಂ ವ್ಯಾಪ್ತಿಯಲ್ಲಿ ಕರೆಂಟ್​ ತಂತಿ ತುಳಿದು ಸತ್ತ ಪ್ರಕರಣ ಇದೇ ಮೊದಲಲ್ಲ. ಈ ಹಿಂದೆ ಕೂಡ ಸಾಕಷ್ಟು ಜನ ತಂತಿ ವಿದ್ಯುತ್​ ತಂತಿ ತುಳಿದು ಮೃತಪಟ್ಟಿದ್ದಾರೆ. ಹಾಗಿದ್ದರೆ ಯಾವ ವರ್ಷ ಎಷ್ಟು ಜನ ಮೃತಪಟ್ಟಿದ್ದಾರೆ ಅಥವಾ ಗಾಯಗೊಂಡಿದ್ದಾರೆ? ಇಲ್ಲಿದೆ ಡೀಟೈಲ್ಸ್​

ಬೆಸ್ಕಾಂ ನಿರ್ಲಕ್ಷ್ಯಕ್ಕೆ ವಿದ್ಯುತ್​ ತಂತಿ ತಗುಲಿ 70 ಜನರ ಸಾವು: ಇಲ್ಲಿದೆ ಸಂಪೂರ್ಣ ಡೀಟೈಲ್ಸ್​
ಬೆಸ್ಕಾಂ
Poornima Agali Nagaraj
Poornima Agali Nagaraj| Edited By: ವಿವೇಕ ಬಿರಾದಾರ|

Updated on: Nov 20, 2023 | 1:05 PM

Share

ಬೆಂಗಳೂರು ನ.20: ರಾಜ್ಯ ರಾಜಧಾನಿ ಬೆಂಗಳೂರಿನ (Bengaluru) ಕಾಡುಗೋಡಿಯಲ್ಲಿ ರವಿವಾರ (ನ.19) ವಿದ್ಯುತ್ ತಂತಿ (Electrical wire) ತುಳಿದು ತಾಯಿ ಮತ್ತು ಮಗು ಸಜೀವದಹನವಾಗಿದ್ದರು. ಇದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ತಾಯಿ ಮತ್ತು ಮಗುವಿನ ಸಾವಿಗೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವೆಂದು ಐವರನ್ನು ಅಮಾನತು ಮಾಡಲಾಗಿತ್ತು. ಹಾಗೇ ಈ ಐವರನ್ನು ಬಂಧಿಸಲಾಗಿತ್ತು. ಇದೀಗ ಈ ಅಧಿಕಾರಿಗಳು ಜಾಮೀನಿನ ಮೇಲೆ ಹೊರಗಡೆ ಬಂದಿದ್ದಾರೆ. ಬೆಸ್ಕಾಂ (BESCOM) ವ್ಯಾಪ್ತಿಯಲ್ಲಿ ಕರೆಂಟ್​ ತಂತಿ ತುಳಿದು ಸತ್ತ ಪ್ರಕರಣ ಇದೇ ಮೊದಲಲ್ಲ. ಈ ಹಿಂದೆ ಕೂಡ ಸಾಕಷ್ಟು ಜನ ತಂತಿ ವಿದ್ಯುತ್​ ತಂತಿ ತುಳಿದು ಮೃತಪಟ್ಟಿದ್ದಾರೆ.

ಹಾಗಿದ್ದರೆ ಯಾವ ವರ್ಷ ಎಷ್ಟು ಜನ ಮೃತಪಟ್ಟಿದ್ದಾರೆ ಅಥವಾ ಗಾಯಗೊಂಡಿದ್ದಾರೆ? ಇಲ್ಲಿದೆ ಡೀಟೈಲ್ಸ್​

  1. 2018-19 ರಲ್ಲಿ ತಂತಿ ತಗುಲಿ 11 ಜನ ಮೃತಪಟ್ಟಿದ್ದರು. ಒಬ್ಬರು ಗಾಯಗೊಂಡಿದ್ದರು. ಒಟ್ಟು 12 ಜನರಿಗೆ ವಿದ್ಯುತ್​ ತಂತಿ ತಗುಲಿ ಶಾಕ್ ಹೊಡೆದಿತ್ತು.
  2. 2019-20 ರಲ್ಲಿ 10 ಜನ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದರು. ಒಟ್ಟು 13 ಜನರಿಗೆ ತಂತಿ ತಗುಲಿ ಕರೆಂಟ್ ಶಾಕ್ ಹೊಡೆದಿತ್ತು.
  3. 2020-21 ರಲ್ಲಿ 9 ಜನ ಮೃತಪಟ್ಟಿದ್ದರು, ಮೂವರಿಗೆ ಗಾಯಗಳಾಗಿದ್ದವು. ಒಟ್ಟು 12 ಜನರಿಗೆ ವಿದ್ಯುತ್​ ತಂತಿ ತಗುಲಿತ್ತು.
  4. 2021-22 ರಲ್ಲಿ 13 ಜನ ಮೃತಪಟ್ಟಿದ್ದರು, ಇಬ್ಬರು ಗಾಯಗೊಂಡಿದ್ದರು. ಒಟ್ಟು 15 ಜನರಿಗೆ ತಂತಿ ತಗುಲಿತ್ತು.
  5. 2022-23 ರಲ್ಲಿ 19 ಜನ ಸಾವೀಗೀಡಾಗಿದ್ದು, ಇಬ್ಬರು ಗಾಯಗೊಂಡಿದ್ದರು. ಒಟ್ಟು 21 ಜನರಿಗೆ ಬೆಸ್ಕಾಂ ವಿದ್ಯುತ್​ ತಂತಿ ತಗುಲಿತ್ತು.
  6. 2023-24 (2023ರ ಅಕ್ಟೋಬರ್​ ವರೆಗೆ) 8 ಜನ ಮೃತಪಟ್ಟಿದ್ದಾರೆ. ಒಟ್ಟು 8 ಜನರಿಗೆ ತಂತಿ ತಗುಲಿದೆ. ಕಳೆದ 5 ವರ್ಷದಲ್ಲಿ ಬೆಸ್ಕಾಂ ನಿರ್ಲಕ್ಷ್ಯಕ್ಕೆ 81 ಜನರಿಗೆ ವಿದ್ಯುತ್​ ತಂತಿ ತಗುಲಿದ್ದು, ಇದರಲ್ಲಿ ಒಟ್ಟು 70 ಜನ ಮೃತಪಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ