AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

75 ದಿನ ಉಚಿತ ಬೂಸ್ಟರ್ ಡೋಸ್ ಅಭಿಯಾನ; ಕಾರ್ಯಕ್ರಮಕ್ಕೆ ಸಿಎಂ ಬೊಮ್ಮಾಯಿ ಚಾಲನೆ

ಕೇಂದ್ರ ಹಣ ಕೊಡದಿದ್ದರೆ ರಾಜ್ಯದ ಬೊಕ್ಕಸಕ್ಕೆ ಹೊಡೆತ ಬೀಳುತಿತ್ತು ಎಂದು ಮಾತನಾಡಿದ ಸಿಎಂ, ಕೊರೊನಾ ಕಡಿಮೆ ಆಗಿ ಕಣ್ಮರೆಯಾಗುತ್ತಿದೆ.

75 ದಿನ ಉಚಿತ ಬೂಸ್ಟರ್ ಡೋಸ್ ಅಭಿಯಾನ; ಕಾರ್ಯಕ್ರಮಕ್ಕೆ ಸಿಎಂ ಬೊಮ್ಮಾಯಿ ಚಾಲನೆ
ಬೂಸ್ಟರ್ ಡೋಸ್ ಅಭಿಯಾನ ಕಾರ್ಯಕ್ರಮಕ್ಕೆ ಸಿಎಂ ಬೊಮ್ಮಾಯಿ ಚಾಲನೆ ನೀಡಿದರು
TV9 Web
| Edited By: |

Updated on:Jul 16, 2022 | 12:36 PM

Share

ಬೆಂಗಳೂರು: 75 ದಿನಗಳ ಕಾಲ ನಡೆಯಲಿರುವ ಉಚಿತ ಬೂಸ್ಟರ್ ಡೋಸ್ (Booster Dose) ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಇಂದು (ಜುಲೈ 16) ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಬೊಮ್ಮಾಯಿ, ಕೇಂದ್ರದ ಸಹಾಯದೊಂದಿಗೆ ರಾಜ್ಯದಲ್ಲಿ ಬೂಸ್ಟರ್ ಡೋಸ್ ಕೊಡಲಾಗುತ್ತಿದೆ. ವೈರಸ್ ವಿರುದ್ಧದ ಹೋರಾಟದಲ್ಲಿ ಲಸಿಕೆ ಮಹತ್ವದ ಪಾತ್ರವಹಿಸಿದೆ. ಕೇಂದ್ರ ಸರ್ಕಾರ ಕೊರೊನಾ ನಿರ್ವಹಣೆಗೆ ಸಾಕಷ್ಟು ನೆರವು ನೀಡಿದೆ ಎಂದು ಅಭಿಪ್ರಾಯಪಟ್ಟರು.

ಕೇಂದ್ರ ಹಣ ಕೊಡದಿದ್ದರೆ ರಾಜ್ಯದ ಬೊಕ್ಕಸಕ್ಕೆ ಹೊಡೆತ ಬೀಳುತಿತ್ತು ಎಂದು ಮಾತನಾಡಿದ ಸಿಎಂ, ಕೊರೊನಾ ಕಡಿಮೆ ಆಗಿ ಕಣ್ಮರೆಯಾಗುತ್ತಿದೆ. ಕೊರೊನಾ ಬಂದ ಬಳಿಕ ವಿಜ್ಞಾನಿಗಳು, ವೈದ್ಯರು, ದಾದಿಯರು ಎಲ್ಲರೂ ಲೀಡರ್ಗಳಾಗಿ ಮಾರ್ಪಾಡು ಆಗಿದ್ದಾರೆ. ಅವರು ಲೀಡರ್ ಆಗದೆ ಇದ್ದರೆ ಕೊರೊನಾ ನಿಯಂತ್ರಣ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದರು.

ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮಾತನಾಡಿ, ಕೊವಿಡ್​​ ಪ್ರಭಾವ ಇನ್ನೂ ಇದೆ ಎಂದು ಡಬ್ಲ್ಯುಹೆಚ್​​ಒ ಹೇಳಿದೆ. ಹೀಗಾಗಿ ಬೂಸ್ಟರ್ ಡೋಸ್ ಲಸಿಕೆಯನ್ನು ತೆಗೆದುಕೊಳ್ಳಿ.  ಪ್ರಧಾನಿ ಮೋದಿ ಉಚಿತವಾಗಿ ಲಸಿಕೆ ನೀಡಲು ಹೇಳಿದ್ದಾರೆ. ಬೂಸ್ಟರ್ ಡೋಸ್ ಕೂಡಾ ಉಚಿತವಾಗಿ ಕೊಡುತ್ತಿದ್ದಾರೆ. ಕೊರೊನಾ ಕಡಿಮೆ ಆಗಿದೆ ಎಂದು ನಿರ್ಲಕ್ಷ್ಯ ಮಾಡಬೇಡಿ. 75 ದಿನದೊಳಗೆ ಎಲ್ಲರಿಗೂ ಬೂಸ್ಟರ್ ಡೋಸ್ ನೀಡುವ ಗುರಿ ಇದೆ ಎಂದು ತಿಳಿಸಿದರು.

ಇದನ್ನೂ ಓದಿ
Image
ಉಕ್ಕಿ ಹರಿಯುತ್ತಿರುವ ತುಂಗಭದ್ರಾ, ಉಕ್ಕಡಗಾತ್ರಿ ಪುಣ್ಯಕ್ಷೇತ್ರ ಜಲಾವೃತ
Image
ದೆಹಲಿಯಲ್ಲಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನಿವಾಸಕ್ಕೆ ಸುದೀಪ್ ಭೇಟಿ; ಇಲ್ಲಿವೆ ಫೋಟೋಗಳು
Image
TV9 Chhattisgarh Digital Channel: ಟಿವಿ9 ನೆಟ್​ವರ್ಕ್​ನ ಮತ್ತೊಂದು ಕೂಸು ಛತ್ತೀಸ್​ಗಢ ಡಿಜಿಟಲ್ ಚಾನೆಲ್ ಇಂದು ಲೋಕಾರ್ಪಣೆ
Image
Rishi Sunak: ‘ಅಭಿಯಾನ’ ಪದದಲ್ಲಿನ ತಪ್ಪಾದ ಕಾಗುಣಿತದಿಂದಾಗಿ ವೈರಲ್ ಆದ ರಿಷಿ ಸುನಕ್

ಇದನ್ನೂ ಓದಿ: T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಮೊಟ್ಟೆ, ಹಾಲು ಪೌಷ್ಟಿಕ ಆಹಾರ: ಮೊಟ್ಟೆ ಅಪೌಷ್ಟಿಕ ಆಹಾರ ಎಂಬ ಎನ್​ಇಪಿ ಸಮಿತಿಯ ಶಿಫಾರಸ್ಸಿನ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಸುಧಾಕರ್, ಇದುವರೆಗೂ ನನ್ನ ಜ್ಞಾನಕ್ಕೆ ತಿಳಿದಂತೆ ಮೊಟ್ಟೆ, ಹಾಲು ಪೌಷ್ಠಿಕ ಆಹಾರ. ಅದು ಯಾರು ವರದಿಕೊಟ್ಟಿದ್ದಾರೊ ನನ್ನ ಗಮನಕ್ಕೆ ಇಲ್ಲ. ಎನ್​ಇಪಿ ಸಮಿತಿಯ ವರದಿಯ ಬಗ್ಗೆ ನನಗೆ ಮಾಹಿತಿ ಇಲ್ಲ. ಸಮಿತಿಯ ವರದಿಯ ಪಡೆದು ನಾನು ಮಾತನಾಡುತ್ತೇನೆ ಎಂದರು.

ಇದನ್ನೂ ಓದಿ: Karnataka Rain Live Updates: ಮಳೆಯಿಂದಾಗಿ ಶಿರಾಡಿಘಾಟ್​​​​ನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೂಕುಸಿತ: ಸಾಲುಗಟ್ಟಿ ನಿಂತ ವಾಹನಗಳು

Published On - 11:59 am, Sat, 16 July 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?