AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

7ನೇ ರಾಜ್ಯ ವೇತನ ಆಯೋಗದ ಅವಧಿ ವಿಸ್ತರಣೆ: ಸರ್ಕಾರ ಆದೇಶ

ರಾಜ್ಯಪಾಲರ ಆದೇಶದಂತೆ ಮೇ 19ರಿಂದ 6 ತಿಂಗಳ ಕಾಲ ಆಯೋಗದ ಅವಧಿ ವಿಸ್ತರಣೆ ಮಾಡಿ, ಸರ್ಕಾರ ಆದೇಶ ಹೊರಡಿಸಿದೆ. 2022ರ ನ. 19ರಂದು ವೇತನ ಆಯೋಗ ರಚನೆಯಾಗಿತ್ತು. 

7ನೇ ರಾಜ್ಯ ವೇತನ ಆಯೋಗದ ಅವಧಿ ವಿಸ್ತರಣೆ: ಸರ್ಕಾರ ಆದೇಶ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on:May 16, 2023 | 3:04 PM

Share

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿ ಪರಿಷ್ಕರಿಸಲು ಮತ್ತು ನೂತನ ವೇತನ ಶ್ರೇಣಿ ರಚಿಸುವ ಉದ್ದೇಶದಿಂದ ನಿವೃತ್ತ ಸಿ.ಎಸ್.ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ 7ನೇ ರಾಜ್ಯ ವೇತನ ಆಯೋಗದ (7th State Pay Commission) ಅವಧಿ ವಿಸ್ತರಣೆ ಮಾಡಲಾಗಿದೆ. ರಾಜ್ಯಪಾಲರ ಆದೇಶದಂತೆ ಮೇ 19ರಿಂದ 6 ತಿಂಗಳ ಕಾಲ ಆಯೋಗದ ಅವಧಿ ವಿಸ್ತರಣೆ ಮಾಡಿ, ಸರ್ಕಾರ ಆದೇಶ ಹೊರಡಿಸಿದೆ. 2022ರ ನ. 19ರಂದು ವೇತನ ಆಯೋಗ ರಚನೆಯಾಗಿತ್ತು. ಆಯೋಗದ ಶಿಫಾರಸ್ಸು ಆಧರಿಸಲು ಮುಂದಿನ ಕ್ರಮ ಕೈಗೊಳ್ಳಲು 2023-24ನೇ ಸಾಲಿನಲ್ಲಿ ಹಣವನ್ನೂ ತೆಗೆದಿಡಲಾಗಿತ್ತು.

ಮಾರ್ಚ್​ ಒಳಗೆ ಮಧ್ಯಂತರ ವರದಿ ಪಡೆದು ಅವಲೋಕಿಸಿ 2023-24ರಲ್ಲಿಯೇ ಜಾರಿಗೊಳಿಸಲು ಸಿದ್ಧರಿದ್ದೇವೆ ಎಂದು ಈ ಹಿಂದೆ ನಿರ್ಗಮಿತ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದರು.

ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಜಾರಿ ವಿಚಾರ ಸ್ಪಷ್ಟನೆ ನೀಡಿದ ಸಿಎಂ ಬೊಮ್ಮಾಯಿ

ಇತ್ತೀಚೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತುರ್ತು ಕಾರ್ಯಕಾರಿಣಿ ಸಭೆಯಲ್ಲಿ 7ನೇ ವೇತನ ಆಯೋಗದಲ್ಲಿ ಹಳೇ ಪಿಂಚಣಿ ನೀತಿ​ ಅನುಷ್ಠಾನಕ್ಕೆ ರಾಜ್ಯ ಸರ್ಕಾರಕ್ಕೆ ಫೆಬ್ರವರಿ 22ರಿಂದ 7 ದಿನಗಳ ಗಡುವು ನೀಡಿತ್ತು.

ಒಂದು ವೇಳೆ ಗಡುವಿಗೆ ಸರ್ಕಾರ ಸ್ಪಂದಿಸದಿದ್ದರೆ ಅನಿರ್ದಿಷ್ಟಾವಧಿ ಹೋರಾಟ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಎಚ್ಚರಿಕೆ ನೀಡಿದ್ದರು. ತಮ್ಮ ಬೇಡಿಕೆಯನ್ನು ಈಡೇರಿಸದಿದ್ದರೆ ಮಾರ್ಚ್ 1ರಿಂದಲೇ ಕರ್ತವ್ಯಕ್ಕೆ ಗೈರಾಗಲು ನೌಕರರು ಸಭೆಯಲ್ಲಿ ನಿರ್ಧಾರಿಸಿದ್ದರು.

ಇದನ್ನೂ ಓದಿ: 7ನೇ ವೇತನ ಆಯೋಗದಲ್ಲಿ ಒಪಿಎಸ್​ ಅನುಷ್ಠಾನಕ್ಕೆ ರಾಜ್ಯ ಸರ್ಕಾರಕ್ಕೆ 7 ದಿನಗಳ ಗಡುವು ನೀಡಿದ ನೌಕರರ ಸಂಘ

ತುರ್ತು ಕಾರ್ಯಕಾರಿಣಿ ಸಭೆಯಲ್ಲಿ ನಿರ್ಗಮಿತ ಸಿಎಂ ಬಸವರಾಜ ಬೊಮ್ಮಾಯಿ, ಮುಖ್ಯ ಕಾರ್ಯದರ್ಶಿ​ ವಂದಿತಾ ಶರ್ಮಾ ಅವರಿಗೆ ತಿಳಿವಳಿಕೆ ಮತ್ತು ಮನವಿ ಪತ್ರ ಸಲ್ಲಿಸಲು ನಿರ್ಧಾರ ಮಾಡಲಾಗಿತ್ತು. ಇದೇ ವೇಳೆ ಬಿಬಿಎಂಪಿ ನೌಕರರ ಸಂಘದ ಅಧ್ಯಕ್ಷ ಅಮೃತ್ ರಾಜ್ ಮಾತನಾಡಿ, ಮಾರ್ಚ್​​ 1ರಿಂದ ಬೆಂಗಳೂರಿನಲ್ಲಿ ಕಸ ಎತ್ತದಿರಲು ತೀರ್ಮಾನಿಸಲಾಗಿತ್ತು. ಅಲ್ಲದೆ, ಹಳೇ ಪಿಂಚಣಿ ನೀತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದೆ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:48 pm, Tue, 16 May 23

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?