AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರವೇ ನಾರಾಯಣಗೌಡಗೆ ತಪ್ಪಿಲ್ಲ ಸಂಕಷ್ಟ: ಅರೆಸ್ಟ್ ಆಗಿದ್ದು 1 ಕೇಸ್ ನಲ್ಲಿ, ಬಾಕಿ ಇವೆ 8 ಪ್ರಕರಣಗಳು

ಕರವೇ ನಾರಯಾಣಗೌಡ ಅವರ ವಿರುದ್ಧ ಇನ್ನೂ ಎಂಟು ಕೇಸ್​ಗಳು ಬಾಕಿ ಇವೆ. ಚಿಕ್ಕಜಾಲ ಪೊಲೀಸ್​ ಠಾಣೆಯಲ್ಲಿ 6 ಪ್ರಕರಣ, ಯಲಹಂಕ ಪೊಲೀಸ್​ ಠಾಣೆಯಲ್ಲಿ 2 ಪ್ರಕರಣ ಬಾಕಿ ಇವೆ. ಈ ಎಲ್ಲಾ ಪ್ರಕರಣಗಳಲ್ಲೂ ಪೊಲೀಸರು 41(A) ಅಡಿ ನೋಟಿಸ್ ನೀಡಲಿದ್ದಾರೆ.

ಕರವೇ ನಾರಾಯಣಗೌಡಗೆ ತಪ್ಪಿಲ್ಲ ಸಂಕಷ್ಟ: ಅರೆಸ್ಟ್ ಆಗಿದ್ದು 1 ಕೇಸ್ ನಲ್ಲಿ, ಬಾಕಿ ಇವೆ 8 ಪ್ರಕರಣಗಳು
ಕರವೇ ಅಧ್ಯಕ್ಷ ನಾರಾಯಣಗೌಡ
Follow us
Jagadisha B
| Updated By: ವಿವೇಕ ಬಿರಾದಾರ

Updated on: Jan 12, 2024 | 8:19 AM

ಬೆಂಗಳೂರು, ಜನವರಿ 12: ಕರ್ನಾಟಕ ರಕ್ಷಣಾ ವೇದಿಕೆ (Karave) ಕಳೆದ ವರ್ಷ ಡಿಸೆಂಬರ್​ 27 ರಂದು ರಾಜಧಾನಿ ಬೆಂಗಳೂರಿನಲ್ಲಿ (Bengaluru) ನಾಮಫಲಕ ಮಹಾ ಅಭಿಯಾನ ಕೈಗೊಂಡಿತ್ತು. ಅಂಗಡಿ-ಮುಗ್ಗಟ್ಟು, ಮಾಲ್​ಗಳು ಸೇರಿದಂತೆ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ 60 ರಷ್ಟು ಕನ್ನಡ ಇಲ್ಲದಿದ್ದಕ್ಕೆ ಹೋರಾಟ ನಡೆಸಿದ್ದರು. ಅಂದು ಕನ್ನಡ ನಾಮಫಲಕವಿಲ್ಲದ (Kannada Board) ಕೆಲವು ಮಾಲ್​ ಮತ್ತು ಅಂಗಡಿಗಳ ಮೇಲೆ ಕರವೇ ಕಾರ್ಯಕರ್ತರು ಕಲ್ಲು ತೂರಿದ್ದಾರೆ ಮತ್ತು ಸಾರ್ವಜನಿಕ ಆಸ್ತಿಪಾಸ್ತಿ ನಾಶ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ಕರವೇ ಅಧ್ಯಕ್ಷ ನಾರಾಯಣಗೌಡ (Narayangouda) ಸೇರಿದಂತೆ 29 ಜನರನ್ನು ಬಂಧಿಸಲಾಗಿತ್ತು.

ಈ ಪ್ರಕರಣದಲ್ಲಿ ಕರವೇ ನಾರಾಯಣಗೌಡ ಅವರಿಗೆ ಜಾಮೀನು ಸಿಕ್ಕಿದ್ದು, ಬಿಡುಗಡೆಯಾಗಿದ್ದರು. ಆದರೆ 2017ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕರವೇ ನಾರಾಯಣಗೌಡ ಅವರನ್ನು ಪೊಲೀಸರು ಮತ್ತೆ ಬಂಧಿಸಿದ್ದರು. ಈ ಪ್ರಕರಣದಲ್ಲೂ ಕರವೇ ನಾರಾಯಣಗೌಡ ಅವರಿಗೆ ಜಾಮೀನು ಸಿಕ್ಕಿದೆ. ಆದರೆ ನಾರಾಯಣಗೌಡ ಅವರ ವಿರುದ್ಧದ ಇನ್ನೂ ಅನೇಕ ಪ್ರಕರಣಗಳು ಬಾಕಿ ಇವೆ. ಇದರಿಂದ ಕರವೇ ನಾರಾಯಣಗೌಡ ಅವರು ಜೈಲಿಂದ ಬಿಡುಗಡೆಯಾದ್ರೂ ಸಂಕಷ್ಟ ತಪ್ಪಿಲ್ಲ.

ಇದನ್ನೂ ಓದಿ: 2017ರ ಪ್ರಕರಣದಲ್ಲೂ ಕರವೇ ಅಧ್ಯಕ್ಷ ನಾರಾಯಣಗೌಡಗೆ ಜಾಮೀನು ನೀಡಿದ ಕೋರ್ಟ್

ಕರವೇ ನಾರಯಾಣಗೌಡ ಅವರು ಬಂಧನವಾಗಿದ್ದು ಒಂದು ಪ್ರಕರಣದಲ್ಲಿ, ಆದರೆ ಇನ್ನೂ ಎಂಟು ಕೇಸ್​ಗಳು ಬಾಕಿ ಇವೆ. ಚಿಕ್ಕಜಾಲ ಪೊಲೀಸ್​ ಠಾಣೆಯಲ್ಲಿ 6 ಪ್ರಕರಣ, ಯಲಹಂಕ ಪೊಲೀಸ್​ ಠಾಣೆಯಲ್ಲಿ 2 ಪ್ರಕರಣ ಬಾಕಿ ಇವೆ. ಈ ಎಲ್ಲಾ ಪ್ರಕರಣಗಳಲ್ಲೂ ಪೊಲೀಸರು 41(A) ಅಡಿ ನೋಟಿಸ್ ನೀಡಲಿದ್ದಾರೆ. ಕರವೇ ನಾರಾಯಣಗೌಡ ಅವರು ಇಷ್ಟು ದಿನ ಜೈಲಲ್ಲಿದ್ದ ಕಾರಣ ಪೊಲೀಸರು ನೋಟೀಸ್ ನೀಡಿಲ್ಲ. ಇದೀಗ ಬಿಡುಗಡೆಯಾದ ಹಿನ್ನೆಲೆಯಲ್ಲಿ ನೋಟಿಸ್ ನೀಡಿ ವಿಚಾರಣೆ ನಡೆಸಲಿದ್ದಾರೆ.

ನಾರಾಯಣಗೌಡ ವಿರುದ್ಧ ಕೇಸ್​ಗಳು

ಚಿಕ್ಕಜಾಲದಲ್ಲಿ ಒಟ್ಟು 6 ಕೇಸ್​ಗಳು ಬಾಕಿ

1. ಬಿಎಂಟಿಸಿ ಬಸ್​​ಗೆ ಕಲ್ಲು ತೂರಾಟ

2. ಪೊಲೀಸ್ ಕಾನ್ಸ್​ಟೇಬಲ್​ಗೆ ಉಗಿದ ಪ್ರಕರಣ

3. ವಿವಿಧ ಕಡೆ ಹೆದ್ದಾರಿ ತಡೆ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ಪ್ರಕರಣ ಸಂಬಂಧಿಸಿದಂತೆ 143, 145, 149, 283, 8B, 427 ಸೆಕ್ಷನ್​​ಗಳ ಅಡಿ ಎಫ್​ಐಆರ್

ಯಲಹಂಕದಲ್ಲಿ 2 ಕೇಸ್​ಗಳು

1. ಬಿಎಂಟಿಸಿ ಬಸ್​ಗೆ ಡ್ಯಾಮೇಜ್ ಕೇಸ್

2. ಇಕೋ ಪೊಲೀಸ್ ಬೋರ್ಡ್ ಡ್ಯಾಮೇಜ್ ಕೇಸ್

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು