AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರವೇ ನಾರಾಯಣಗೌಡಗೆ ತಪ್ಪಿಲ್ಲ ಸಂಕಷ್ಟ: ಅರೆಸ್ಟ್ ಆಗಿದ್ದು 1 ಕೇಸ್ ನಲ್ಲಿ, ಬಾಕಿ ಇವೆ 8 ಪ್ರಕರಣಗಳು

ಕರವೇ ನಾರಯಾಣಗೌಡ ಅವರ ವಿರುದ್ಧ ಇನ್ನೂ ಎಂಟು ಕೇಸ್​ಗಳು ಬಾಕಿ ಇವೆ. ಚಿಕ್ಕಜಾಲ ಪೊಲೀಸ್​ ಠಾಣೆಯಲ್ಲಿ 6 ಪ್ರಕರಣ, ಯಲಹಂಕ ಪೊಲೀಸ್​ ಠಾಣೆಯಲ್ಲಿ 2 ಪ್ರಕರಣ ಬಾಕಿ ಇವೆ. ಈ ಎಲ್ಲಾ ಪ್ರಕರಣಗಳಲ್ಲೂ ಪೊಲೀಸರು 41(A) ಅಡಿ ನೋಟಿಸ್ ನೀಡಲಿದ್ದಾರೆ.

ಕರವೇ ನಾರಾಯಣಗೌಡಗೆ ತಪ್ಪಿಲ್ಲ ಸಂಕಷ್ಟ: ಅರೆಸ್ಟ್ ಆಗಿದ್ದು 1 ಕೇಸ್ ನಲ್ಲಿ, ಬಾಕಿ ಇವೆ 8 ಪ್ರಕರಣಗಳು
ಕರವೇ ಅಧ್ಯಕ್ಷ ನಾರಾಯಣಗೌಡ
ಜಗದೀಶ ಬಿ.
| Edited By: ವಿವೇಕ ಬಿರಾದಾರ|

Updated on: Jan 12, 2024 | 8:19 AM

Share

ಬೆಂಗಳೂರು, ಜನವರಿ 12: ಕರ್ನಾಟಕ ರಕ್ಷಣಾ ವೇದಿಕೆ (Karave) ಕಳೆದ ವರ್ಷ ಡಿಸೆಂಬರ್​ 27 ರಂದು ರಾಜಧಾನಿ ಬೆಂಗಳೂರಿನಲ್ಲಿ (Bengaluru) ನಾಮಫಲಕ ಮಹಾ ಅಭಿಯಾನ ಕೈಗೊಂಡಿತ್ತು. ಅಂಗಡಿ-ಮುಗ್ಗಟ್ಟು, ಮಾಲ್​ಗಳು ಸೇರಿದಂತೆ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ 60 ರಷ್ಟು ಕನ್ನಡ ಇಲ್ಲದಿದ್ದಕ್ಕೆ ಹೋರಾಟ ನಡೆಸಿದ್ದರು. ಅಂದು ಕನ್ನಡ ನಾಮಫಲಕವಿಲ್ಲದ (Kannada Board) ಕೆಲವು ಮಾಲ್​ ಮತ್ತು ಅಂಗಡಿಗಳ ಮೇಲೆ ಕರವೇ ಕಾರ್ಯಕರ್ತರು ಕಲ್ಲು ತೂರಿದ್ದಾರೆ ಮತ್ತು ಸಾರ್ವಜನಿಕ ಆಸ್ತಿಪಾಸ್ತಿ ನಾಶ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ಕರವೇ ಅಧ್ಯಕ್ಷ ನಾರಾಯಣಗೌಡ (Narayangouda) ಸೇರಿದಂತೆ 29 ಜನರನ್ನು ಬಂಧಿಸಲಾಗಿತ್ತು.

ಈ ಪ್ರಕರಣದಲ್ಲಿ ಕರವೇ ನಾರಾಯಣಗೌಡ ಅವರಿಗೆ ಜಾಮೀನು ಸಿಕ್ಕಿದ್ದು, ಬಿಡುಗಡೆಯಾಗಿದ್ದರು. ಆದರೆ 2017ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕರವೇ ನಾರಾಯಣಗೌಡ ಅವರನ್ನು ಪೊಲೀಸರು ಮತ್ತೆ ಬಂಧಿಸಿದ್ದರು. ಈ ಪ್ರಕರಣದಲ್ಲೂ ಕರವೇ ನಾರಾಯಣಗೌಡ ಅವರಿಗೆ ಜಾಮೀನು ಸಿಕ್ಕಿದೆ. ಆದರೆ ನಾರಾಯಣಗೌಡ ಅವರ ವಿರುದ್ಧದ ಇನ್ನೂ ಅನೇಕ ಪ್ರಕರಣಗಳು ಬಾಕಿ ಇವೆ. ಇದರಿಂದ ಕರವೇ ನಾರಾಯಣಗೌಡ ಅವರು ಜೈಲಿಂದ ಬಿಡುಗಡೆಯಾದ್ರೂ ಸಂಕಷ್ಟ ತಪ್ಪಿಲ್ಲ.

ಇದನ್ನೂ ಓದಿ: 2017ರ ಪ್ರಕರಣದಲ್ಲೂ ಕರವೇ ಅಧ್ಯಕ್ಷ ನಾರಾಯಣಗೌಡಗೆ ಜಾಮೀನು ನೀಡಿದ ಕೋರ್ಟ್

ಕರವೇ ನಾರಯಾಣಗೌಡ ಅವರು ಬಂಧನವಾಗಿದ್ದು ಒಂದು ಪ್ರಕರಣದಲ್ಲಿ, ಆದರೆ ಇನ್ನೂ ಎಂಟು ಕೇಸ್​ಗಳು ಬಾಕಿ ಇವೆ. ಚಿಕ್ಕಜಾಲ ಪೊಲೀಸ್​ ಠಾಣೆಯಲ್ಲಿ 6 ಪ್ರಕರಣ, ಯಲಹಂಕ ಪೊಲೀಸ್​ ಠಾಣೆಯಲ್ಲಿ 2 ಪ್ರಕರಣ ಬಾಕಿ ಇವೆ. ಈ ಎಲ್ಲಾ ಪ್ರಕರಣಗಳಲ್ಲೂ ಪೊಲೀಸರು 41(A) ಅಡಿ ನೋಟಿಸ್ ನೀಡಲಿದ್ದಾರೆ. ಕರವೇ ನಾರಾಯಣಗೌಡ ಅವರು ಇಷ್ಟು ದಿನ ಜೈಲಲ್ಲಿದ್ದ ಕಾರಣ ಪೊಲೀಸರು ನೋಟೀಸ್ ನೀಡಿಲ್ಲ. ಇದೀಗ ಬಿಡುಗಡೆಯಾದ ಹಿನ್ನೆಲೆಯಲ್ಲಿ ನೋಟಿಸ್ ನೀಡಿ ವಿಚಾರಣೆ ನಡೆಸಲಿದ್ದಾರೆ.

ನಾರಾಯಣಗೌಡ ವಿರುದ್ಧ ಕೇಸ್​ಗಳು

ಚಿಕ್ಕಜಾಲದಲ್ಲಿ ಒಟ್ಟು 6 ಕೇಸ್​ಗಳು ಬಾಕಿ

1. ಬಿಎಂಟಿಸಿ ಬಸ್​​ಗೆ ಕಲ್ಲು ತೂರಾಟ

2. ಪೊಲೀಸ್ ಕಾನ್ಸ್​ಟೇಬಲ್​ಗೆ ಉಗಿದ ಪ್ರಕರಣ

3. ವಿವಿಧ ಕಡೆ ಹೆದ್ದಾರಿ ತಡೆ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ಪ್ರಕರಣ ಸಂಬಂಧಿಸಿದಂತೆ 143, 145, 149, 283, 8B, 427 ಸೆಕ್ಷನ್​​ಗಳ ಅಡಿ ಎಫ್​ಐಆರ್

ಯಲಹಂಕದಲ್ಲಿ 2 ಕೇಸ್​ಗಳು

1. ಬಿಎಂಟಿಸಿ ಬಸ್​ಗೆ ಡ್ಯಾಮೇಜ್ ಕೇಸ್

2. ಇಕೋ ಪೊಲೀಸ್ ಬೋರ್ಡ್ ಡ್ಯಾಮೇಜ್ ಕೇಸ್

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ