Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಉಂಡ ಮನೆಗೆ ದ್ರೋಹ, ಜ್ಯುವೆಲ್ಲರಿ ಶಾಪ್​ನಿಂದ ಕೆಜಿ ಕೆಜಿ ಚಿನ್ನ, ಬೆಳ್ಳಿ ಕದ್ದ ಮನೆ ಕೆಲಸದಾಳು

ಜ್ಯುವೆಲ್ಲರಿ ಶಾಪ್ ಮಾಲೀಕ ಮುಂಬೈಗೆ ತೆರಳಿದ್ದಾಗ ಜ್ಯುವೆಲರಿ ಶಾಪ್​ಗೆ ನುಗ್ಗಿದ ಮನೆ ಕೆಲಸಗಾರ 4 ಕೆಜಿ ಚಿನ್ನ, 34 ಕೆಜಿ ಬೆಳ್ಳಿ, 9 ಲಕ್ಷ ನಗದು ಕಳ್ಳತನ ಮಾಡಿ ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅ.29 ರಂದು ನಡೆದ ಘಟನೆ ಇದಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಉಂಡ ಮನೆಗೆ ದ್ರೋಹ, ಜ್ಯುವೆಲ್ಲರಿ ಶಾಪ್​ನಿಂದ ಕೆಜಿ ಕೆಜಿ ಚಿನ್ನ, ಬೆಳ್ಳಿ ಕದ್ದ ಮನೆ ಕೆಲಸದಾಳು
ಬೆಂಗಳೂರಿನಲ್ಲಿ ತನ್ನ ಮಾಲೀಕನ ಜ್ಯುವೆಲ್ಲರಿ ಶಾಪ್​ನಿಂದ ಕೆಜಿ ಕೆಜಿ ಚಿನ್ನ, ಬೆಳ್ಳಿ ಕದ್ದ ಮನೆ ಕೆಲಸದಾಳು (ಸಾಂದರ್ಭಿಕ ಚಿತ್ರ)
Follow us
Jagadisha B
| Updated By: Rakesh Nayak Manchi

Updated on:Nov 17, 2023 | 9:26 AM

ಬೆಂಗಳೂರು, ನ.17: ಜ್ಯುವೆಲರಿ ಶಾಪ್ ಮಾಲೀಕ ಮುಂಬೈಗೆ ತೆರಳಿದ್ದಾಗ ಜ್ಯುವೆಲ್ಲರಿ ಶಾಪ್​ಗೆ ನುಗ್ಗಿದ ಮನೆ ಕೆಲಸಗಾರ 4 ಕೆಜಿ ಚಿನ್ನ, 34 ಕೆಜಿ ಬೆಳ್ಳಿ, 9 ಲಕ್ಷ ನಗದು ಕಳ್ಳತನ (Theft) ಮಾಡಿ ಪರಾರಿಯಾದ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಅ.29 ರಂದು ನಡೆದ ಘಟನೆ ಇದಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ.

ರಾಜಸ್ಥಾನ ಮೂಲದ ಕೇತರಾಮ್, ಜ್ಯುವೆಲ್ಲರಿ ಶಾಪ್ ಮಾಲೀಕ ಅರವಿಂದ್ ಕುಮಾರ್ ಥಾಡೆ ಅವರ ಮನೆ ಕೆಲಸಗಾರನಾಗಿ ಕಳೆದ ಎರಡು ತಿಂಗಳ ಹಿಂದೆಯಷ್ಟೇ ಸೇರಿಕೊಂಡಿದ್ದನು. ತನ್ನ ಮಾಲೀಕನೊಂದಿಗೆ ಒಳ್ಳೆಯವನಂತೆ ನಟಿಸುತ್ತಿದ್ದ ಕೇತರಾಮ್, ಆರ್ಥಿಕ ವ್ಯವಹಾರಗಳನ್ನೆಲ್ಲಾ ಅರಿತುಕೊಂಡಿದ್ದ.

ಇದನ್ನೂ ಓದಿ: ಮುಂಬೈನ ಅಂಗಡಿಯಿಂದ ₹5 ಕೋಟಿಗೂ ಅಧಿಕ ಮೌಲ್ಯದ ವಜ್ರ ಕಳವು: ಮೂವರ ಬಂಧನ

ಆದರೆ, ದಸರಾ ಹಬ್ಬ ಹಿನ್ನೆಲೆ ಅರವಿಂದ್ ಕುಮಾರ್ ಅವರು ಮುಂಬೈಗೆ ತೆರಳುವ ಸಂದರ್ಭದಲ್ಲಿ ಅವರ ಬ್ಯಾಗ್​ನಲ್ಲಿದ್ದ ಬೀಗವನ್ನು ಕೇತರಾಮ್ ಕಳವು ಮಾಡಿದ್ದಾನೆ. ಬಳಿಕ ತನ್ನದೇ ಊರಿನ ರಾಕೇಶ್ ಎಂಬಾತನನ್ನು ಕರೆಸಿಕೊಂಡು ಮಾಲೀಕನ ಜ್ಯುವೆಲ್ಲರಿ ಅಂಗಡಿ ಬೀಗ ತೆರೆದು ಒಳಗೆ ನುಗ್ಗಿದ್ದಾರೆ.

ಬಳಿಕ ಅಂಗಡಿಯಲ್ಲಿದ್ದ 4 ಕೆಜಿ ಚಿನ್ನ, 34 ಕೆಜಿ ಬೆಳ್ಳಿ, 9 ಲಕ್ಷ ನಗದು ಕಳ್ಳತನ ಮಾಡಿ ಸ್ಥಳದಿಂದ ಪರಾರಿಯಾಗಿದ್ದರು. ಈ ಬಗ್ಗೆ ಸ್ಥಳೀಯರು ಅರವಿಂದ್ ಅವರ ಪುತ್ರನಿಗೆ ಮಾಹಿತಿ ನೀಡಿದ್ದಾರೆ. ಅದರಂತೆ ಅರವಿಂದ್ ಮಗ ಹಲಸೂರು ಗೇಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:23 am, Fri, 17 November 23

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ