ರಾಡ್​ನಿಂದ ಹೊಡೆದು 17 ವರ್ಷದ ಯುವಕನ ಹತ್ಯೆ; ಕೊಲೆ ಹಿಂದೆ ಪ್ರೀತಿ, ಗಾಂಜಾ ಕರಿನೆರಳು

ಆತನಿಗೆ ಇನ್ನೂ 17 ವರ್ಷ. SSLC ಫೇಲ್ ಆಗಿ ಮನೆಯಲ್ಲೇ ಇದ್ದ. ಆದರೆ ಮೊನ್ನೆ ರಾತ್ರಿ ಮನೆಯಿಂದ ಹೋದವನು ಮತ್ತೆ ಸಿಕ್ಕಿದ್ದು ಹೆಣವಾಗಿ. ಸದ್ಯ ಈ ಅಪ್ರಾಪ್ತನ ಕೊಲೆ ಪ್ರಕರಣದಲ್ಲಿ ಪ್ರೀತಿ ಮತ್ತು ಗಾಂಜಾ ವಾಸನೆ ಬರ್ತಿದೆ. ರಾಡ್​ನಿಂದ ಹೊಡೆದು 17 ವರ್ಷದ ಯುವಕನ ಭೀಕರ ಹತ್ಯೆ ಮಾಡಲಾಗಿದೆ. ಕೊಲೆ ಮಾಡಿದ ಪಾಪಿಗಳು ಎಸ್ಕೇಪ್ ಆಗಿದ್ದಾರೆ.

ರಾಡ್​ನಿಂದ ಹೊಡೆದು 17 ವರ್ಷದ ಯುವಕನ ಹತ್ಯೆ; ಕೊಲೆ ಹಿಂದೆ ಪ್ರೀತಿ, ಗಾಂಜಾ ಕರಿನೆರಳು
ಹತ್ಯೆ ನಡೆದ ಸ್ಥಳ

Updated on: Jun 25, 2024 | 12:12 PM

ಬೆಂಗಳೂರು, ಜೂನ್.25: 17 ವರ್ಷದ ಮಂಜುನಾಥ್ ಎಂಬ ಯುವಕನ ಭೀಕರ ಹತ್ಯೆ (Murder) ನಡೆದಿದೆ. ಅನೇಕ ವರ್ಷಗಳ ಹಿಂದೆ ಅಪ್ಪ ಅಮ್ಮನನ್ನ ಕಳ್ಕೊಂಡು ಅಬ್ಬಿಗೆರೆಯಲ್ಲಿ ಚಿಕ್ಕಪ್ಪನ ಆಶ್ರಯದಲ್ಲಿದ್ದ ಮಂಜುನಾಥ್, ಈ ವರ್ಷವಷ್ಟೇ SSLC ಪರೀಕ್ಷೆ ಬರೆದು ಫೇಲ್ ಆಗಿದ್ದ. ಆದರೆ ಮೊನ್ನೆ ರಾತ್ರಿ ಮನೆಯಿಂದ ಹೊರ ಹೋಗಿದ್ದ ಮಂಜುನಾಥ್ ನನ್ನ ಭೀಕರವಾಗಿ ಕೊಲೆ ಮಾಡಲಾಗಿದ್ದು, ಹತ್ಯೆ ಮಾಡಿದ ಪಾಪಿಗಳು ಎಸ್ಕೇಪ್ ಆಗಿದ್ದಾರೆ.

ಎಸ್​ಎಸ್​ಎಲ್​ಸಿ ಫೇಲ್ ಆಗಿ ಮನೆಯಲ್ಲಿದ್ದ ಮಂಜುನಾಥ್ ನಿನ್ನೆ ಸಂಜೆ ಹೆಣವಾಗಿ ಪತ್ತೆಯಾಗಿದ್ದಾನೆ. ಸದ್ಯ ಮನೆಯವರು ಹೇಳೊ ಪ್ರಕಾರ ಮೊನ್ನೆ ರಾತ್ರಿ ಮಂಜುನಾಥ್ ಡ್ರಿಂಕ್ಸ್ ಮಾಡಿದ್ದಲ್ದೆ ಗಾಂಜಾ ಸೇವನೆ ಮಾಡಿ ಬೀದಿಯಲ್ಲಿ ನಿಂತಿದ್ದ. ಈ ವೇಳೆ ಪೋಷಕರು ಹೋಗಿ ಮಂಜುನಾಥ್ ನನ್ನ ಮನೆಗೆ ಕರ್ಕೊಂಡ ಬಂದಿದ್ರು. ಆದರೆ ಮಂಜುನಾಥ್ ಅರ್ಧರಾತ್ರಿಯಲ್ಲಿ ಮನೆಯಿಂದ ಹೊರಗೆ ಹೋಗಿದ್ದವನು ಮತ್ತೆ ಮನೆಗೆ ವಾಪಸ್ ಆಗ್ಲಿಲ್ಲ. ಇದರಿಂದ ಗಾಬರಿಯಾದ ಪೋಷಕರು ಮಗನನ್ನ ಹುಡುಕಲು ಶುರುಮಾಡಿದಾಗ ನಿನ್ನೆ ಸಂಜೆ YMRAC ಸರ್ಕಲ್ ಬಳಿಯ ಖಾಲಿ ಜಾಗದಲ್ಲಿ ಮಂಜುನಾಥ್ ಮೃತದೇಹ ಪತ್ತೆಯಾಗಿತ್ತು.

ಇನ್ನು ಮಂಜುನಾಥ್ ತಲೆ ಮೇಲೆ ದುಷ್ಕರ್ಮಿಗಳು ರಾಡ್ ನಿಂದ ಹೊಡೆದು ಹತ್ಯೆ ಮಾಡಿರೋದು ಗೊತ್ತಾಗಿದೆ. ಆದರೇ ಮಂಜುನಾಥ್ ಹುಡುಗಿಯೊಬ್ಬಳನ್ನ ಪ್ರೀತಿಸಿದ್ದು, ಇದೇ ವಿಚಾರಕ್ಕೆ ಕೊಲೆ ನಡೆದಿರೋ ಶಂಕೆ ವ್ಯಕ್ತವಾಗಿದೆ. ಇನ್ನೊಂದು ಕಡೆ ಗಾಂಜಾ ಮತ್ತಿನಲ್ಲಿ ಯುವಕರ ಮಧ್ಯೆ ಕಿರಿಕ್ ನಡೆದು ಮಂಜುನಾಥ್ ಕೊಲೆ ಆಗಿದೆ ಎನ್ನಲಾಗ್ತಿದೆ. ಸದ್ಯ ಕೊಲೆ ಸುತ್ತ ಈ ಅನುಮಾನಗಳು ಇದ್ದು, ಆರೋಪಿಗಳು‌ ಸಿಕ್ಕಿದ ಮೇಲೆ ಅಸಲಿ ವಿಚಾರ ಬಯಲಾಗಲಿದೆ.

ಇದನ್ನೂ ಓದಿ: ನೀಟ್​ ಪ್ರಶ್ನೆ ಪತ್ರಿಕೆ​ ಸೋರಿಕೆ: ಸೈಬರ್​ ಗ್ಯಾಂಗ್​ ಜತೆಗೂಡಿ ನಡೆಸಿತ್ತು ಎಕ್ಸಾಂ ಮಾಫಿಯಾ ದಂಧೆ, 6 ಮಂದಿ ಬಂಧನ

ಡ್ರಗ್ಸ್​ ಕೇಸ್​.. ನಟಿ ಸಂಜನಾ ವಿರುದ್ಧದ FIR ರದ್ದು

ಸ್ಯಾಂಡಲವುಡ್ ಡ್ರಗ್ಸ್ ಕೇಸ್​ನಲ್ಲಿ ನಟಿ ಸಂಜನಾ ಗಲ್ರಾನಿ ಹಾಗೂ ಶಿವಪ್ರಕಾಶ್ ಚಿಪ್ಪಿಗೆ ಬಿಗ್ ರಿಲೀಫ್ ಸಿಕ್ಕಿದೆ. ಇಬ್ಬರ ವಿರುದ್ದ ದಾಖಲಾಗಿದ್ದ ಎಫ್​ಐಆರ್ ರದ್ದುಗೊಳಿಸಿ ಹೈಕೋರ್ಟ್ ಅದೇಶ ಹೊರಡಿಸಿದೆ. ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದ ಡ್ರಗ್ಸ್ ಕೇಸ್​್ನಲ್ಲಿ ಸಿಸಿಬಿ ಪೊಲೀಸರು ನಟಿಯರು ಸೇರಿದಂತೆ ಡ್ರಗ್ ಪೆಡ್ಲರ್​ಗಳನ್ನ ಬಂಧಿಸಿದ್ರು. ಆದ್ರೆ ಈ FIR ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ರು. ನಿನ್ನೆ ಎಫ್​ಐಆರ್​ ರದ್ದುಗೊಳಿಸಿ ಹೈಕೋರ್ಟ್​ ಆದೇಶ ಹೊರಡಿಸಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
Follow Us