AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾನಿಪೂರಿ ತಿನ್ನೋ ವೇಳೆ ಗಲಾಟೆ: ಸಲ್ಮಾನ್ ಕೊಟ್ಟ ಒಂದೇ ಪಂಚ್​​​​ಗೆ ಉಸಿರು ಚೆಲ್ಲಿದ ಭೀಮ

ಆ ಯುವಕ ಉದ್ಯೋಗ ಅರಸಿ ದೂರದ ಬಿಹಾರದಿಂದ ಬೆಂಗಳೂರಿಗೆ ಬಂದಿದ್ದ. ತನ್ನ ಸ್ನೇಹಿತರ ಜೊತೆಗೂಡಿ ನಗರದಲ್ಲಿ ಕೆಲಸ ಹುಡುಕಿಕೊಂಡು ಅದರಲ್ಲೆ ಜೀವನ ನಡೆಸ್ತಿದ್ದ. ಅದ್ರೆ ಸ್ನೇಹಿತರ ಜೊತೆ ಪಾನಿಪುರಿ ತಿನ್ನಲು‌ ಹೋದ ಯುವಕ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಮಾಡಿಕೊಂಡು ಸಾವನ್ನಪ್ಪಿದ್ದಾನೆ. ಹೌದು...ಸನ್ಮಾನ್ ಕೊಟ್ಟ ಒಂದೇ ಪಂಚ್​ ಗೆ ಭೀಮ ಉಸಿರು ಚೆಲ್ಲಿದ್ದಾನೆ. ಅಷ್ಟಕ್ಕೂ ಆಗಿದ್ದೇನು ಎನ್ನುವ ಸಂಪುರ್ಣ ವಿವರ ಇಲ್ಲಿದೆ.

ಪಾನಿಪೂರಿ ತಿನ್ನೋ ವೇಳೆ ಗಲಾಟೆ: ಸಲ್ಮಾನ್ ಕೊಟ್ಟ ಒಂದೇ ಪಂಚ್​​​​ಗೆ ಉಸಿರು ಚೆಲ್ಲಿದ ಭೀಮ
ಭೀಮಕುಮಾರ್ (ಮೃತ ಯುವಕ)
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Sep 14, 2025 | 7:15 PM

Share

ಬೆಂಗಳೂರು, (ಸೆಪ್ಟೆಂಬರ್ 14): ಪಾನಿಪೂರಿ (Panipuri) ತಿನ್ನವ ವೇಳೆ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಸ್ಥಳೀಯ ಸಲ್ಮಾನ್ ಕೊಟ್ಟ ಪಂಚ್​ ಗೆ ಭೀಮ ಎನ್ನುವ ಯುವಕ ಸಾವನ್ನಪ್ಪಿದ್ದಾನೆ. ಬೆಂಗಳೂರಿನ (Bengaluru) ಪುಟ್ಟೇನಹಳ್ಳಿಯ (Puttenahalli) ಬಳಿಯ ಅರಕೆರೆಯಲ್ಲಿ ನಡೆದಿದೆ. ಸ್ನೇಹಿತರೊಂದಿಗೆ ಪಾನಿಪೂರಿ ತಿನ್ನಲು ಹೋದ ವೇಳೆ ಭೀಮಕುಮಾರ್ ಮತ್ತು ಸಲ್ಮಾನ್ ನಡುವೆ ಗಲಾಟೆಯಾಗಿದ್ದು, ಈ ವೇಳೆ ಭೀಮಕುಮಾರ್‌ನ ಕತ್ತಿನ ಭಾಗಕ್ಕೆ ಸಲ್ಮಾನ್ ಬಲವಾಗಿ ಒಂದು ಹೊಡೆದಿದ್ದಾನೆ. ಪರಿಣಾಮ ಪ್ರಜ್ಞೆ ಕಳೆದುಕೊಂಡು ಕೆಳಗೆ ಬಿದ್ದ ಭೀಮಕುಮಾರ್ ಮೂರು ದಿನಗಳ ನಂತರ ಕೊನೆಯುಸಿರೆಳೆದಿದ್ದಾನೆ.

25 ವರ್ಷದ ಭೀಮಕುಮಾರ್ ಉದ್ಯೋಗ ಅರಸಿಕೊಂಡು ಬಿಹಾರದಿಂದ ಬೆಂಗಳೂರಿಗೆ ಬಂದಿದ್ದು, ತನ್ನ ಸ್ನೇಹಿತರ ಜತೆ ಪುಟ್ಟೇನಹಳ್ಳಿಯ ಅರಕೆರೆಯಲ್ಲಿ ವಾಸವಾಗಿದ್ದ. ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಭೀಮಕುಮಾರನ ಮನೆಗೆ ನಾಲ್ಕೈದು ದಿನಗಳ ಸ್ನೇಹಿತರು ಬಂದಿದ್ದರು. ನಂತರ ಎಲ್ಲರೂ ಒಟ್ಟಿಗೆ ಪಾನಿಪೂರಿ ತಿನ್ನಲು ಮನೆಯಿಂದ ಹೊರಗಡೆ ಬಂದಿದ್ದಾರೆ. ಅರಕೆರೆಯ ಲಕ್ಷ್ಮೀ ಲೇಔಟ್ ಮುಖ್ಯರಸ್ತೆಯಲ್ಲಿ ಪಾನಿಪೂರಿ ತಿನ್ನುವಾಗ ಅಲ್ಲಿದ್ದ ಸ್ಥಳೀಯ ಯುವಕ ಸಲ್ಮಾನ್ ಎಂಬಾತನ ಜೊತೆ ಗಲಾಟೆಯಾಗಿದೆ.

ಇದನ್ನೂ ಓದಿ: ಟೀ ಚೆನ್ನಾಗಿಲ್ಲ ಎಂದ ಬಿಎಂಟಿಸಿ ಬಸ್‌ ಚಾಲಕನ ಮೇಲೆ ಹಲ್ಲೆ ನಡೆಸಿದ ಅಂಗಡಿ ಸಿಬ್ಬಂದಿ

ಅವಾಚ್ಯ ಪದಗಳಿಂದ ಬೈದ ಅಂತಾ ಭೀಮಕುಮಾರ ಮತ್ತು ಸ್ನೇಹಿತರೆಲ್ಲಾ ಸಲ್ಮಾನ್ ಜೊತೆ ಕೈ ಕೈ ಮಿಲಾಯಿಸಿ ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ಸಲ್ಮಾನ್, ಭೀಮಕುಮಾರನ ಕುತ್ತಿಗೆಗೆ ಬಲವಾಗಿ ಪಂಚ್ ನೀಡಿದ್ದು, ಒಂದೇ ಏಟಿಗೆ ಭೀಮ ಪ್ರಜ್ನೆ ತಪ್ಪಿ ಕುಸಿದು ಬಿದ್ದಿದ್ದಾನೆ. ಕೆಲ ಹೊತ್ತಿನ ನಂತರ ಭೀಮಕುಮಾರನಿಗೆ ಪ್ರಜ್ನೆ ಬಂದಿದ್ದು, ಸ್ನೇಹಿತರು ರೂಂಗೆ ಕರೆದುಕೊಂಡು ಹೋಗಿ ಹಾರೈಕೆ ಮಾಡಿದ್ದಾರೆ. ಅದ್ರೆ ಮೂರು ದಿನಗಳಿಂದ ಹಾಸಿಗೆ ಹಿಡಿದಿದ್ದ ಭೀಮಕುಮಾರ, ಮನೆಯಲ್ಲೇ ಸಾವನ್ನಪ್ಪಿದ್ದಾನೆ. ಬಳಿಕ ಸ್ನೇಹಿತರು‌ ಭೀಮಕುಮಾರನ ಸಾವಿನ ವಿಚಾರವನ್ನ ಪೊಲೀಸರಿಗೆ ತಿಳಿಸಿದ್ದಾರೆ. ಯುವಕನ ಸಾವಿನ ಬಗ್ಗೆ ಕೊಲೆ ಪ್ರಕರಣ ದಾಖಲಿಸಿಕೊಂಡ ಪುಟ್ಟೇನಹಳ್ಳಿ ಪೊಲೀಸರು ಆರೋಪಿ ಸಲ್ಮಾನ್ ನನ್ನ ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

ಮೃತ ಭೀಮಕುಮಾರನ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹ ಹಸ್ತಾಂತರ ಮಾಡಿದ್ದಾರೆ. ಹೊಡೆದ ರಭಸಕ್ಕೆ ಕೆಳಗೆ ಬಿದ್ದಾಗ ತಲೆಗೆ ಏಟು ಬಿದ್ದು ತಲೆಯ ಒಳಗೆ ರಕ್ತಸ್ರಾವ (ಇಂಟರ್ನಲ್ ಬ್ಲೀಡಿಂಗ್ ) ಆಗಿ ಸಾವನಪ್ಪಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. ಅದೇನೇ ಇರಲಿ ಪಾನೀಪುರಿ ತಿನ್ನುವ ವೇಳೆ ಉಂಟಾದ ಕ್ಷುಲ್ಲಕ ಗಲಾಟೆ, ಓರ್ವನ ಬಲಿ ಪಡೆದಿದ್ದು ದುರ್ದೈವವೇ ಸರಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ