AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಶಂಕಿತ ಮಂಕಿಪಾಕ್ಸ್ ಪತ್ತೆ ಪ್ರಕರಣ; ವರದಿ ನೆಗೆಟಿವ್

ಮಂಕಿಪಾಕ್ಸ್ ಮುನ್ನೆಚ್ಚರಿಕೆ ಹಿನ್ನೆಲೆ ಕರ್ನಾಟಕದಲ್ಲಿ ಹೈ ಅಲರ್ಟ್ ಮಾಡಲಾಗಿದೆ. ಸೋಂಕು ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರಿಗೆ ಆರೋಗ್ಯ ತಪಾಸಣೆ ಮಾಡಲಾಗುತ್ತದೆ.

ಬೆಂಗಳೂರಿನಲ್ಲಿ ಶಂಕಿತ ಮಂಕಿಪಾಕ್ಸ್ ಪತ್ತೆ ಪ್ರಕರಣ; ವರದಿ ನೆಗೆಟಿವ್
ಸಾಂದರ್ಭಿಕ ಚಿತ್ರImage Credit source: NDTV
TV9 Web
| Updated By: sandhya thejappa|

Updated on:Jul 31, 2022 | 11:43 AM

Share

ಬೆಂಗಳೂರು: ಕೊರೊನಾ (Coronavirus) ಬಳಿಕ ವಿಶ್ವದಾದ್ಯಂತ ಮಂಕಿಪಾಕ್ಸ್ (Monkeypox) ಅಬ್ಬರ ಜೋರಾಗಿದೆ. ಈಗಾಗಲೇ ಭಾರತದಲ್ಲಿ ಮಂಕಿಪಾಕ್ಸ್ ಪತ್ತೆಯಾಗಿದ್ದು, ರಾಜ್ಯದಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಬೆಂಗಳೂರಿನಲ್ಲಿದ್ದ ಇಥಿಯೋಪಿಯಾ ಮೂಲದ 55 ವರ್ಷದ ವ್ಯಕ್ತಿಗೆ ಮಂಕಿಪಾಕ್ಸ್ ಲಕ್ಷಣ ಕಂಡುಬಂದಿತ್ತು. ಶಂಕಿಸಿ ಮಂಕಿಪಾಕ್ಸ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ವರದಿಯಲ್ಲಿ ಚಿಕನ್ಪಾಕ್ಸ್ ಇರುವುದು ಪತ್ತೆಯಾಗಿದ್ದು, ಮಂಕಿಪಾಕ್ಸ್ ನೆಗೆಟಿವ್ ಬಂದಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಮಂಕಿಪಾಕ್ಸ್ ಮುನ್ನೆಚ್ಚರಿಕೆ ಹಿನ್ನೆಲೆ ಕರ್ನಾಟಕದಲ್ಲಿ ಹೈ ಅಲರ್ಟ್ ಮಾಡಲಾಗಿದೆ. ಸೋಂಕು ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರಿಗೆ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಬೆಂಗಳೂರು, ಮಂಗಳೂರು ಏರ್ ಪೋರ್ಟ್​ಗಳಲ್ಲಿ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ಶೀತ- ಜ್ವರ, ತಲೆನೋವು, ಸ್ನಾಯು ಸೆಳೆತ, ಆಯಾಸ, ಗಂಟಲು ಕೆರೆತ, ಕೆಮ್ಮು, ಚರ್ಮ ತುರಿಕೆ ಲಕ್ಷಣಗಳು ಕಂಡು ಬರುವ ಪ್ರಯಾಣಿಕರಿಗೆ ತಪಾಸಣೆ ತಪಾಸಣೆ ನಡೆಸಲಾಗುತ್ತದೆ ಎಂದು ಸಚಿವ ಸುಧಾಕರ್ ಟ್ವೀಟ್​ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ
Image
CWG 2022: ಒಂದೇ ದಿನ ನಾಲ್ಕು ಪದಕ: ಕಾಮನ್​ವೆಲ್ತ್ ಗೇಮ್ಸ್​ನಲ್ಲಿ ಭಾರತ ಭರ್ಜರಿ ಪ್ರದರ್ಶನ
Image
18 ವರ್ಷದ ಮಕ್ಕಳು ನಿಮ್ಮ ಮಾತು ಕೇಳ್ತಾ ಇಲ್ವಾ? ಮನೋ ವೈದ್ಯೆ ಡಾ.ಸೌಜನ್ಯ ವಶಿಷ್ಟರವರ ಸಲಹೆ ಇಲ್ಲಿದೆ
Image
ಪಶ್ಚಿಮ ಬಂಗಾಳದಲ್ಲಿ ಮೂವರು ಜಾರ್ಖಂಡ್ ಶಾಸಕರ ಬಂಧನ: ಅಪಾರ ಹಣ ವಶ
Image
Bangalore Rain: ವರುಣಾರ್ಭಟಕ್ಕೆ ತತ್ತರಿಸಿದ ಬೆಂಗಳೂರು: ಮನೆಗಳಿಗೆ ನುಗ್ಗಿದ ನೀರು, ಕೆರೆಯಂತಾದ ರಸ್ತೆಗಳು

ಇದನ್ನೂ ಓದಿ: ಸೋಷಿಯಲ್ ಮೀಡಿಯಾ ಪ್ರೊಫೈಲ್ ಚಿತ್ರಗಳನ್ನು ರಾಷ್ಟ್ರಧ್ವಜಕ್ಕೆ ಬದಲಿಸಿಕೊಳ್ಳಲು ಪ್ರಧಾನಿ ಮೋದಿ ಕರೆ

ಭಾರತದ ಮೊದಲ ಮಂಕಿಪಾಕ್ಸ್ ಸೋಂಕಿತ ಗುಣಮುಖ: ದೇಶದ ಮೊದಲ ಮಂಕಿಪಾಕ್ಸ್ ಸೋಂಕಿತ ವ್ಯಕ್ತಿ ತಿರುವನಂತಪುರಂನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಇದೀಗ ಮಂಕಿಪಾಕ್ಸ್​ನಿಂದ ಚೇತರಿಸಿಕೊಂಡಿದ್ದಾರೆ ಎಂದು ರಾಜ್ಯ ಆರೋಗ್ಯ ಸಚಿವ ವೀಣಾ ಜಾರ್ಜ್ ತಿಳಿಸಿದ್ದಾರೆ. ಇದು  ದೇಶದಲ್ಲಿ ಮೊದಲ ಪತ್ತೆಯಾದ  ಮಂಕಿಪಾಕ್ಸ್ ಪ್ರಕರಣವಾಗಿರುವುದರಿಂದ, ರಾಷ್ಟ್ರೀಯ ವೈರಾಲಜಿ ಸಂಸ್ಥೆ (ಎನ್‌ಐವಿ) ಸೂಚನೆಯಂತೆ 72 ಗಂಟೆಗಳ ಮಧ್ಯಂತರದಲ್ಲಿ ಎರಡು ಬಾರಿ ಪರೀಕ್ಷೆಗಳನ್ನು ನಡೆಸಲಾಗಿದೆ.

Published On - 11:31 am, Sun, 31 July 22

ನಮಸ್ತೇ ಸದಾ ವತ್ಸಲೇ: ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿಕೆ ಶಿವಕುಮಾರ್
ನಮಸ್ತೇ ಸದಾ ವತ್ಸಲೇ: ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿಕೆ ಶಿವಕುಮಾರ್
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು